ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 10:59 pm
HK News Desk
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am