ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
17-01-26 03:08 pm
HK News Desk
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
ಕುಂಬಳೆ ; ಆರಿಕ್ಕಾಡಿ ಟೋಲ್ ಗೇಟ್, ಕ್ಯಾಮರಾ ಕಿತ್ತೆಸ...
15-01-26 12:14 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
16-01-26 09:01 pm
HK News Desk
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm
Karwar Suicide: ಪ್ರೀತಿ ಒಪ್ಪಿಕೊಳ್ಳುವಂತೆ ನಿರಂತರ...
14-01-26 05:22 pm