ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
14-05-26 12:36 pm
HK News Staffer
ಜ್ಯೋತಿಷಿಗೆ ಕೂಡದ ಜಾತಕ ; ಟೀಕೆಗಳ ಸುಳಿಯಲ್ಲಿ ವಿಜಯ್...
13-05-26 06:42 pm
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 01:41 pm
HK News Staffer
ತುಮಕೂರಿನ ಮದರಸಾದಲ್ಲಿ ಸಿಬ್ಬಂದಿಗಳಿಂದ ಮಕ್ಕಳ ಮೇಲೆ...
14-05-26 10:49 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm