ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm