ಬ್ರೇಕಿಂಗ್ ನ್ಯೂಸ್
16-04-25 08:22 pm Mangalore Correspondent ಕರಾವಳಿ
ಮಂಗಳೂರು, ಎ.16 : ಎ.18ರಂದು ಅಡ್ಯಾರ್ ಬಳಿಯ ಷಾ ಗಾರ್ಡನ್ ಮೈದಾನದಲ್ಲಿ ವಕ್ಫ್ ಕಾಯ್ದೆ ವಿರೋಧಿಸಿ ಹಮ್ಮಿಕೊಂಡಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಷ್ಟ್ರೀಯ ಹೆದ್ದಾರಿ 73ರಲ್ಲಿ ಅಂದು ಮಧ್ಯಾಹ್ನ 12 ಗಂಟೆಯಿಂದ ರಾತ್ರಿ 9 ಗಂಟೆ ವರೆಗೆ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಆದೇಶ ಮಾಡಿದ್ದಾರೆ.
ಈ ಸಂದರ್ಭದಲ್ಲಿ ಎಲ್ಲ ಮಾದರಿಯ ಗೂಡ್ಸ್ ಮತ್ತು ಇತರ ಸಾರಿಗೆ ಬಸ್ ಗಳು ಮಂಗಳೂರು ಪಂಪ್ವೆಲ್ ನಿಂದ ಬಿಸಿ ರೋಡ್ ಕಡೆಗೆ ಹೋಗುವ ಮತ್ತು ಆ ಕಡೆಯಿಂದ ಬರುವ ವಾಹನಗಳು ಸಂಚಾರ ಮಾಡುವಂತಿಲ್ಲ. ತುರ್ತು ಅಗತ್ಯದ ಮತ್ತು ಸ್ಥಳೀಯ ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅನುಮತಿ ಇರುತ್ತದೆ. ಅಲ್ಲದೆ, ಪಂಪುವೆಲ್ / ನಂತೂರು - ಪಡೀಲ್ – ಕಣ್ಣೂರು – ಅಡ್ಯಾರ್ - ಸಹ್ಯಾದ್ರಿ – ಅರ್ಕುಳ - ಪರಂಗಿಪೇಟೆ – ತುಂಬೆ - ಬಿ.ಸಿ.ರೋಡ್ (ರಾಷ್ಟ್ರೀಯ ಹೆದ್ದಾರಿ – ೭೩) ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ನಿಲುಗಡೆ ಮಾಡತಕ್ಕದಲ್ಲ.
ಪರ್ಯಾಯ ರಸ್ತೆಗಳನ್ನು ಬಳಸಲು ಕೋರಿಕೆ
➢ ಮೆಲ್ಕಾರು ಜಂಕ್ಷನ್- ಪುತ್ತೂರು/ಬಂಟ್ವಾಳ/ಬೆಳ್ತಂಗಡಿ ಕಡೆಯಿಂದ ಮಂಗಳೂರು ನಗರ/ ಕಾಸರಗೋಡು ಕಡೆಗೆ ಬರುವ ವಾಹನಗಳು ಮೆಲ್ಕಾರ್ ಜಂಕ್ಷನ್ - ಬೋಳಿಯಾರ್ - ಮುಡಿಪು - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಬಿ.ಸಿ. ರೋಡ್ ಪೊಳಲಿ ದ್ವಾರ- ಬಿ.ಸಿ.ರೋಡ್ ಕಡೆಯಿಂದ ಮಂಗಳೂರು/ಉಡುಪಿ ಕಡೆಗೆ ಸಂಚರಿಸುವ ವಾಹನಗಳು ಪೊಳಲಿ ದ್ವಾರದ ಮೂಲಕ ಕಲ್ಪನೆ ಜಂಕ್ಷನ್ - ನೀರುಮಾರ್ಗ - ಬೈತುರ್ಲಿ - - ಕುಲಶೇಖರ - ನಂತೂರು ಮೂಲಕ ಸಂಚರಿಸುವುದು.
➢ ವಳಚ್ಚಿಲ್ ಜಂಕ್ಷನ್ -ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ವಳಚ್ಚಿಲ್ನಲ್ಲಿ ಬಲಕ್ಕೆ ತಿರುಗಿ ಮೇರ್ಲಪದವು - ನೀರುಮಾರ್ಗ - ಬೈತುರ್ಲಿ - ನಂತೂರು ಮೂಲಕ ಸಂಚರಿಸುವುದು.
➢ ಅಡ್ಯಾರ್ ಕಟ್ಟೆ- ಬಿ.ಸಿ.ರೋಡ್ / ತುಂಬೆ / ಫರಂಗಿಪೇಟೆ ಕಡೆಯಿಂದ ಮಂಗಳೂರು ನಗರದ ಕಡೆಗೆ ಸಂಚರಿಸುವ ಲಘು ವಾಹನಗಳು (ಕಾರು/ರಿಕ್ಷಾ/ಬೈಕ್) ಅಡ್ಯಾರ್ ಕಟ್ಟೆ ಬಳಿ ಎಡಕ್ಕೆ ತಿರುಗಿ ಹರೇಕಳ ಬ್ರಿಡ್ಜ್ - ಕೊಣಾಜೆ - ದೇರಳಕಟ್ಟೆ - ತೊಕ್ಕೊಟ್ಟು ಮೂಲಕ ಸಂಚರಿಸುವುದು.
➢ ಪಂಪ್ವೆಲ್ ಜಂಕ್ಷನ್- ಮಂಗಳೂರು ನಗರದ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ತೊಕ್ಕೊಟ್ಟು - ದೇರಳಕಟ್ಟೆ - ಮುಡಿಪು - ಬೊಳಿಯಾರ್ - ಮೆಲ್ಕಾರ್ ಮೂಲಕ ಸಂಚರಿಸುವುದು.
➢ ನಂತೂರು ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಬಿಕರ್ನಕಟ್ಟೆ - ಕುಲಶೇಖರ - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಜಂಕ್ಷನ್- ಬಿ.ಸಿ ರೋಡ್ ಕೈಕಂಬದ ಪೊಳಲಿ ದ್ವಾರದ ಮೂಲಕ ಸಂಚರಿಸುವುದು.
➢ ಕೆ.ಪಿ.ಟಿ. ವೃತ್ತ- ಮಂಗಳೂರು ನಗರ / ಸುರತ್ಕಲ್ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಪದವಿನಂಗಡಿ - ಪಚ್ಚನಾಡಿ - ವಾಮಂಜೂರು - ಬೈತುರ್ಲಿ ಜಂಕ್ಷನ್ - ನೀರುಮಾರ್ಗ – ಕಲ್ಪನೆ ಮೂಲಕ ಅಥವಾ ಬೋಂದೆಲ್ - ಕಾವೂರು - ಬಜಪೆ - ಕೈಕಂಬ - ಮೂಡಬಿದ್ರೆ ಮೂಲಕ ಸಂಚರಿಸುವುದು.
➢ ಮುಲ್ಕಿ ವಿಜಯಸನ್ನಿಧಿ- ಉಡುಪಿ / ಮುಲ್ಕಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಿನ್ನಿಗೋಳಿ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು.
➢ ಪಡುಬಿದ್ರೆ -ಉಡುಪಿ ಕಡೆಯಿಂದ ಬಿ.ಸಿ.ರೋಡ್ ಕಡೆಗೆ ಸಂಚರಿಸುವ ವಾಹನಗಳು ಕಾರ್ಕಳ - ಮೂಡಬಿದ್ರೆ - ಸಿದ್ದಕಟ್ಟೆ - ಬಂಟ್ವಾಳ ಮೂಲಕ ಸಂಚರಿಸುವುದು ಎಂದು ಪೊಲೀಸ್ ಕಮಿಷನರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
In view of the large-scale protest scheduled at Kannur on April 18 against the Central Government’s Waqf Amendment Bill, the joint director of the district industrial centre has issued a traffic diversion order to manage the anticipated congestion along the national highway.
04-06-25 10:48 pm
Bangalore Correspondent
RCB celebration, Bangalore, Stampede, update:...
04-06-25 09:07 pm
R Ashok, RCB, Bangalore, Death: ಕಿಲ್ಲರ್ RCB ;...
04-06-25 08:06 pm
RCB Victory Celebration, Death, Stampede, Ban...
04-06-25 06:21 pm
ಕ್ಷಮೆ ಕೇಳಲ್ಲ, ಮಾತುಕತೆಗೆ ಸಿದ್ಧ ; ಹೈಕೋರ್ಟಿನಲ್ಲಿ...
03-06-25 10:50 pm
04-06-25 05:05 pm
HK News Desk
MP Brijesh Chowta, Delegation: ಐದು ದೇಶಗಳಲ್ಲಿ...
03-06-25 10:10 pm
ಎರಡನೇ ಮಹಡಿಯಿಂದ ಕೆಳಕ್ಕೆ ಬಿದ್ದ ಕಟ್ಟಡ ಕಾರ್ಮಿಕನನ್...
01-06-25 12:35 pm
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
04-06-25 10:43 pm
Mangalore Correspondent
Mangalore Police, Social Media, Arrest: ಜಾಲತಾ...
04-06-25 09:34 pm
RCB, Mangalore celebration, IPL Cricket 2025:...
04-06-25 02:26 pm
Bomb Threat, Mangalore, Kanachur Hospital: ದೇ...
04-06-25 01:38 pm
ಮಂಗಳೂರಿನಲ್ಲಿ ಟಿಂಟ್ ಗ್ಲಾಸ್ ಕಾರುಗಳ ವಿರುದ್ಧ ವಿಶೇ...
03-06-25 08:13 pm
03-06-25 10:25 pm
Mangalore Correspondent
Mangalore Suhas Shetty Murder Case, arrest; ಸ...
03-06-25 08:01 pm
Bank robbery, Vijayapura, 58 crore: ವಿಜಯಪುರದಲ...
03-06-25 01:33 pm
Mangalore Police, CCB, Cattle trafficking, Ta...
02-06-25 04:01 pm
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm