ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am