ಬ್ರೇಕಿಂಗ್ ನ್ಯೂಸ್
19-12-20 03:58 pm Mangalore Correspondent ಕರಾವಳಿ
ಮುಲ್ಕಿ, ಡಿ.19: ಇಲ್ಲಿನ ಹೆಜಮಾಡಿ ಗ್ರಾ.ಪಂ. ವ್ಯಾಪ್ತಿಯ ಶಾಂಭವಿ ನದಿಯಲ್ಲಿ ವ್ಯಕ್ತಿಯೊಬ್ಬರು ರಾತ್ರಿ ವೇಳೆ ಮೀನು ಹಿಡಿಯಲು ಹಾಕಿದ ಬಲೆ ತೆಗೆಯಲು ಹೋಗಿ ಅದೇ ಬಲೆಯಲ್ಲಿ ಸಿಲುಕಿ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮುಲ್ಕಿ ಬಳಿಯ ಕಕ್ವ ನಿವಾಸಿ ವಿಜಯ್ ಫುರ್ಟಾಡೋ(47) ಎಂದು ಗುರುತಿಸಲಾಗಿದೆ. ಶುಕ್ರವಾರ ಸಂಜೆ ಅವರು ಕೊಕ್ರಾಣಿಯ ಶಾಂಭವಿ ನದಿ ತೀರದಲ್ಲಿ ಮೀನು ಹಿಡಿಯಲು ಬಲೆ ಹಾಕಿದ್ದರು. ರಾತ್ರಿ 10ರ ಸುಮಾರಿಗೆ ಪರಿಶೀಲಿಸಲು ತೆರಳಿದಾಗ, ಬಲೆಯೊಳಗೆ ಸಿಲುಕಿ ಮೃತಪಟ್ಟಿದ್ದಾರೆ.
ನದಿ ತೀರಕ್ಕೆ ತೆರಳಿದ ವಿಜಯ್ ಮನೆ ಕಡೆ ಬಾರದ್ದರಿಂದ ತಾಯಿ ಆತಂಕಗೊಂಡು ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಸ್ಥಳೀಯರು ಕಾರ್ನಾಡು ಆಪತ್ಪಾಂಧವ ಆಸೀಫ್ ಅವರ ನೆರವಿನಿಂದ ರಾತ್ರೋರಾತ್ರಿ ಶವವನ್ನು ಮೇಲೆತ್ತಿದ್ದಾರೆ.
ಮೃತ ವಿಜಯ್ ಅವರು ದುಬೈನ ಹೋಟೆಲಿನಲ್ಲಿ ಕೆಲಸ ಮಾಡುತ್ತಿದ್ದು, ಕೊರೊನಾ ಲಾಕ್ ಡೌನ್ ಸಮಯದಲ್ಲಿ ಊರಿಗೆ ಬಂದು ಮೀನುಗಾರಿಕೆ ಉದ್ಯಮ ನಡೆಸುತ್ತಿದ್ದರು.
ಮುಲ್ಕಿಯ ವಿಜಯಾ ಕಾಲೇಜು ಹಳೆ ವಿದ್ಯಾರ್ಥಿಯಾಗಿದ್ದ ಅವರು ಕ್ರಿಕೆಟ್, ವಾಲಿಬಾಲ್ ನಲ್ಲಿ ಪ್ರತಿಭಾವಂತರಾಗಿದ್ದರು. ವಿಜಯ್ ಅವರು ತಾಯಿ, ಪತ್ನಿ, ಇಬ್ಬರು ಸಹೋದರರು, ಸಹೋದರಿಯನ್ನು ಅಗಲಿದ್ದಾರೆ. ಪಡುಬಿದ್ರಿ ಪೊಲೀಸರು ಪ್ರಕರಣ ದಾಖಲಿಸಿ, ತನಿಖೆ ನಡೆಸುತ್ತಿದ್ದಾರೆ.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
07-02-26 10:48 pm
HK News Desk
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm
Shivamogga Conversion: ಶಿಕ್ಷಕಿಯಾದ ಬಳಿಕ ಪತ್ನಿ...
07-02-26 06:44 pm
Bangalore Cat Kidnap: ಬೆಂಗಳೂರಿನಲ್ಲಿ ಠಾಣೆ ಮೆಟ್...
07-02-26 05:21 pm