ಬ್ರೇಕಿಂಗ್ ನ್ಯೂಸ್
26-04-25 08:03 pm Mangalore Correspondent ಕರಾವಳಿ
ಮಂಗಳೂರು, ಎ.26 : ಭಾರೀ ಕುತೂಹಲ ಮೂಡಿಸಿದ್ದ ದಕ್ಷಿಣ ಕನ್ನಡ ಹಾಲು ಒಕ್ಕೂಟ (ಕೆಎಂಎಫ್) ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್ ಶೆಟ್ಟಿ ನೇತೃತ್ವದ ಬಣಕ್ಕೆ ಭರ್ಜರಿ ಜಯ ಸಿಕ್ಕಿದೆ. ಉಡುಪಿ ಜಿಲ್ಲೆಯಲ್ಲಿ ಬೆಳಪು ನೇತೃತ್ವದ ಹೈನುಗಾರರ ಬಳಗದ ಅಭ್ಯರ್ಥಿಗಳು ಎಂಟಕ್ಕೆ ಎಂಟು ಸ್ಥಾನವನ್ನೂ ಗೆದ್ದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಮಂದಿ ಸಹಕಾರ ಭಾರತಿ ಮತ್ತು ಇಬ್ಬರು ಹೈನುಗಾರರ ಬಳಗದವರು ಗೆಲುವು ಸಾಧಿಸಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ ಬೆಳಪು ದೇವಿಪ್ರಸಾದ್ ಶೆಟ್ಟಿ(165), ಉದಯ ಕೋಟ್ಯಾನ್(172 ಮತ), ಎಸ್.ಪ್ರಕಾಶ್ಚಂದ್ರ ಮೇಕೋಡು-(185), ಎನ್. ಮಂಜಯ್ಯ ಶೆಟ್ಟಿ ಸಬ್ಲಾಡಿ(-145), ಕೊಡವೂರು ರವಿರಾಜ ಹೆಗ್ಡೆ(220), ಕೆ.ಶಿವಮೂರ್ತಿ ಉಪಾಧ್ಯ(124), ಮುಡಾರು ಸುಧಾಕರ ಶೆಟ್ಟಿ(162), ಹದ್ದೂರು ಮಮತಾ ಶೆಟ್ಟಿ(190) ಗೆಲುವು ಪಡೆದಿದ್ದಾರೆ. ಉಡುಪಿ ಜಿಲ್ಲೆಯಲ್ಲಿ ಸಹಕಾರ ಭಾರತಿಯ ಯಾವ ಅಭ್ಯರ್ಥಿಯೂ ಗೆಲುವು ಪಡೆದಿಲ್ಲ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರು ಮಂದಿ ಸಹಕಾರ ಭಾರತಿ ಅಭ್ಯರ್ಥಿಗಳು ಗೆಲುವು ಕಂಡಿದ್ದಾರೆ. ಕೆ.ಚಂದ್ರಶೇಖರ ರಾವ್ (169 ಮತ), ಎಸ್.ಬಿ ಜಯರಾಮ ರೈ-190, ಹೆಚ್.ಪ್ರಭಾಕರ್-157, ಭರತ್ ಎನ್-173, ಸುಧಾಕರ ರೈ-97 ಮತ್ತು ಮಹಿಳಾ ಕೋಟಾದಿಂದ ಸ್ಪರ್ಧಿಸಿದ್ದ ಸವಿತಾ ಶೆಟ್ಟಿ(235 ಮತ) ಗೆಲುವು ಕಂಡಿದ್ದಾರೆ. ಕಾಂಗ್ರೆಸಿನ ಹೈನುಗಾರರ ಬಳಗದಿಂದ ಸ್ಪರ್ಧಿಸಿದ್ದ ಸುಚರಿತ ಶೆಟ್ಟಿ-99 ಮತ್ತು ನಂದರಾಮ ರೈ-97 ಪ್ರಯಾಸದಲ್ಲಿ ಗೆಲುವು ಕಂಡಿದ್ದಾರೆ. ಎರಡು ಜಿಲ್ಲೆಯ ವ್ಯಾಪ್ತಿಯಿರುವ ದಕ್ಷಿಣ ಕನ್ನಡ ಜಿಲ್ಲಾ ಹಾಲು ಒಕ್ಕೂಟಕ್ಕೆ 16 ಸದಸ್ಯರಿದ್ದು, 10-6 ಅಂತರದಲ್ಲಿ ಹೈನುಗಾರರ ಬಳಗ ಗೆಲುವು ದಾಖಲಿಸಿದೆ. ಆಮೂಲಕ ಸಹಕಾರಿ ಧುರೀಣನ ನೇತೃತ್ವದ ಬಣವು ಅಧಿಕೃತವಾಗಿ ಕೆಎಂಎಫ್ ಅಧಿಕಾರ ಹಿಡಿಯಲು ಎಂಟ್ರಿಯಾಗಿದೆ.
ಠುಸ್ಸಾದ ಸಂಘ ಪರಿವಾರದ ನಡೆ
ಸಂಘ ಪರಿವಾರದಿಂದ ಈ ಬಾರಿ ಹೊಸಬರಿಗೆ ಮಾತ್ರ ಟಿಕೆಟ್ ಎನ್ನುವ ನಡೆ ಇಟ್ಟಿದ್ದು ಉಡುಪಿ ಜಿಲ್ಲೆಯಲ್ಲಿ ಭಾರೀ ಹಿನ್ನಡೆಗೆ ಕಾರಣವಾಗಿದೆ. ಹಿಂದಿನಿಂದಲೂ ಕೆಎಂಎಫ್ ಸಹಕಾರ ಭಾರತಿ ಹಿಡಿತದಲ್ಲೇ ಇತ್ತು. ಆದರೆ ಈ ಬಾರಿ 'ಸಹಕಾರ ರತ್ನ'ನ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳನ್ನೇ ಒಳಕ್ಕೆಳೆದು ಅಲ್ಲಿಯೂ ಅಧಿಕಾರ ಹಿಡಿಯುವ ತಂತ್ರಗಾರಿಕೆ ಯಶಸ್ವಿಯಾಗಿದೆ.
In a significant turn of events, the Dakshina Kannada Milk Federation (KMF) has elected a new governing body led by Congress leader Belupu Deviprasad Shetty. The election results have sparked excitement among dairy farmers and stakeholders across the region.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm