ಬ್ರೇಕಿಂಗ್ ನ್ಯೂಸ್
27-04-25 01:00 pm Mangalore Correspondent ಕರಾವಳಿ
ಮಂಗಳೂರು, ಎ.27 : ಕೆಲವು ಶಾಸಕರಿಗೆ ಏನಾದರೂ ಮಾತನಾಡುವುದು ಚಾಳಿ ಆಗಿಬಿಟ್ಟಿದೆ. ಮಾರ್ಕೆಟ್ ನಲ್ಲಿ ಟಿ.ಆರ್.ಪಿ ಸಿಗ್ತದೆ ಎಂದು ಮಾತನಾಡ್ತಾರೆ. ಸಂವಿಧಾನಕ್ಕೆ ತಕ್ಕಂತೆ ನಮ್ಮ ಮಾತು, ನಡೆ ಇರಬೇಕು. ಕೆಲವೊಮ್ಮೆ ಹೆಚ್ಚು ಕಮ್ಮಿ ಆಗುತ್ತೆ. ಹಾಗಂತ, ಅದೇ ಚಾಳಿಯಾಗಬಾರದು. ಶಾಸಕ ಮಿತ್ರರು ಹಕ್ಕುಚ್ಯುತಿಗೆ ದೂರು ಕೊಟ್ಟಿದ್ದಾರೆ. ಈ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಹಕ್ಕುಚ್ಯುತಿ ಕಮಿಟಿ ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಯುಟಿ ಖಾದರ್ ಹೇಳಿದ್ದಾರೆ.
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಬಿಜೆಪಿಯ 18 ಶಾಸಕರ ಅಮಾನತು ವಿಚಾರದಲ್ಲಿ ಸ್ಪೀಕರ್ ಧರ್ಮದ ಬಗ್ಗೆ ಪ್ರಶ್ನೆಯೆತ್ತಿ ವಿವಾದಾತ್ಮಕ ಹೇಳಿಕೆ ನೀಡಿದ ಬಗ್ಗೆ ಕಾಂಗ್ರೆಸ್ ಶಾಸಕರು ಹಕ್ಕುಚ್ಯುತಿ ನೋಟಿಸ್ ನೀಡಿರುವ ಬಗ್ಗೆ ಸ್ಪೀಕರ್ ಖಾದರ್ ಸುದ್ದಿಗೋಷ್ಟಿ ಸಂದರ್ಭದಲ್ಲಿ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯಿಸಿದ್ದಾರೆ.
ಸಂವಿಧಾನ ಪೀಠದ ಗೌರವ ಉಳಿಸಲು ಬಿಜೆಪಿಯ 18 ಶಾಸಕರ ಅಮಾನತು ಮಾಡಲಾಗಿದೆ. ಆರು ತಿಂಗಳ ವರೆಗೆ ಅಮಾನತು ಆದೇಶ ಮಾಡಲಾಗಿದೆ. ಸಮಿತಿ ಸಭೆಯಲ್ಲೂ ಭಾಗವಹಿಸಬಾರದು ಎಂದು ಸೂಚಿಸಲಾಗಿದೆ. ಈ ಬಗ್ಗೆ ವಿಪಕ್ಷ ನಾಯಕರ ಹೇಳಿಕೆಯನ್ನು ಗಮನಿಸಿದ್ದೇನೆ. ಧನ ವಿನಿಯೋಗ ವಿಧೇಯಕ ಇರುವಾಗ ಅಡ್ಡಿಪಡಿಸಬಾರದು ಎಂಬ ತಿಳುವಳಿಕೆ ಇಲ್ಲ. ಆದರೆ ಇದು ಸದನ ಕಮಿಟಿ ತೆಗೆದುಕೊಂಡ ತೀರ್ಮಾನ ಆಗಿರುವ ಕಾರಣ ನನಗೊಬ್ಬನಿಗೆ ತೀರ್ಮಾನ ತೆಗೆದುಕೊಳ್ಳಲು ಆಗಲ್ಲ.
ಸರ್ಕಾರದ ಜೊತೆ ಈ ಬಗ್ಗೆ ಚರ್ಚೆ ನಡೆಸುತ್ತೇನೆ. ತಮ್ಮ ತಪ್ಪಿನ ಅರಿವು ಅವರಿಗೆ ಆಗಬೇಕು. ಸಂವಿಧಾನ ಪರವಾಗಿ ನಾವು ನಿಂತಿದ್ದೇವೆ. ಶಾಸಕರು ಮುಂದಿನ ದಿನ ಉತ್ತಮ ನಾಯಕರಾಗಲಿ ಎಂದು ಅವರಿಗೆ ಟಾಸ್ಕ್ ಕೊಟ್ಟಿರೋದು. ಇದು ಅವರಿಗೆ ಕೊಟ್ಟಿರುವ ಶಿಕ್ಷೆಯಲ್ಲ, ಟ್ರೈನಿಂಗ್ ಎಂದು ಖಾದರ್ ಹೇಳಿದರು.
ಕಾಶ್ಮೀರದ ಭಯೋತ್ಪಾದಕ ಕೃತ್ಯದ ಹಿನ್ನೆಲೆಯಲ್ಲಿ ಕೇಳಿದ ಪ್ರಶ್ನೆಗೆ, ನಾವು ಇಡೀ ದೇಶ ಒಗ್ಗಟ್ಟಾಗಿರಬೇಕು. ನಮ್ಮ ದೇಶದ ಏಕತೆ, ಒಗ್ಗಟ್ಟನ್ನು ಮುರಿಯಬೇಕೆಂಬುದೇ ಈ ಸಂಚಿನ ಉದ್ದೇಶ. ಅದಕ್ಕೆ ನಾವು ಯಾರು ಸಹ ಅವಕಾಶ ಮಾಡಿಕೊಡಬಾರದು. ದೇಶವನ್ನು ದುರ್ಬಲಗೊಳಿಸಲು ಪ್ರಯತ್ನ ಪಟ್ಟರೆ ಸಂಚುಕೋರರಿಗೆ ಸಹಾಯ ಮಾಡಿದಂತಾಗುತ್ತದೆ. ಉಗ್ರ ಕೃತ್ಯ ಎಸಗಿದರನ್ನು, ಅದಕ್ಕೆ ಬೆಂಬಲ ನೀಡಿದವರನ್ನು ಮಟ್ಟ ಹಾಕಬೇಕು. ಯುದ್ದ ನಡೆಸುವ ಬಗ್ಗೆ ಸರ್ವಪಕ್ಷ ಸಭೆ, ಅಧಿಕಾರಿಗಳು, ಕೇಂದ್ರ ಸರ್ಕಾರ ನಿರ್ಧಾರ ಮಾಡಬೇಕಾಗುತ್ತದೆ ಎಂದು ಖಾದರ್ ಹೇಳಿದರು.
ಸಾಕ್ಷ್ಯ ಇದ್ದರೆ ತನಿಖಾ ಸಂಸ್ಥೆಗೆ ಕೊಡಲಿ
ನಿವೃತ್ತ ಡಿಜಿಪಿ ಓಂ ಪ್ರಕಾಶ್ ಹತ್ಯೆ ಪ್ರಕರಣದಲ್ಲಿ ಪಿ.ಎಫ್.ಐ ಕೈವಾಡದ ಬಗ್ಗೆ ನಿವೃತ್ತ ಡಿವೈಎಸ್ಪಿ ಅನುಪಮಾ ಶೆಣೈ ಸ್ಪೀಕರ್ ಗೆ ಪತ್ರ ಬರೆದಿರುವ ವಿಚಾರದ ಪ್ರಶ್ನೆಗೆ, ನಾನು ತನಿಖಾ ಏಜೆನ್ಸಿ ಅಲ್ಲ, ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯಲಿ. ನನ್ನ ಹೆಸರನ್ನು ಮಕ್ಕಳಿಂದ ಹಿಡಿದು ದೊಡ್ಡವರ ತನಕವೂ ಉಲ್ಲೇಖ ಮಾಡ್ತಾರೆ. ನಾನು ಪಬ್ಲಿಕ್ ಪ್ರಾಪರ್ಟಿ. ಕೆಟ್ಟವರಿಂದ ಹಿಡಿದು ಒಳ್ಳೆಯವರ ವರೆಗೂ ಎಲ್ಲರೂ ನಮ್ಮ ಹೆಸರನ್ನು ಬಳಸಿಕೊಳ್ಳುತ್ತಾರೆ. ಪತ್ರ ಕಚೇರಿಗೆ ಬಂದಿದೆಯಾ ನೋಡಬೇಕು. ಸಾಕ್ಷ್ಯ ಇದ್ರೆ ತನಿಖಾ ಸಂಸ್ಥೆಗೆ ಕೊಡಲಿ ಎಂದು ಹೇಳಿದರು.
Following the demand for suspension of BJP MLA Harish Poonja, Karnataka Legislative Assembly Speaker U.T. Khader commented that for some leaders, making irresponsible statements has become a routine habit. Speaking to the media in Mangalore, Khader clarified that the decision on what action to take next will be left to the privileges committee of the Assembly.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm