ಬ್ರೇಕಿಂಗ್ ನ್ಯೂಸ್
27-04-25 06:25 pm Mangalore Correspondent ಕರಾವಳಿ
ಪುತ್ತೂರು, ಎ.27 : ವಿಟ್ಲ ಬಳಿಯ ಪುಣಚದ ಪೆಟ್ರೋಲ್ ಪಂಪ್ ವ್ಯವಹಾರಕ್ಕೆ ಸಂಬಂಧಿಸಿ ಪಾಲುದಾರನಿಗೇ ತಲವಾರು ತೋರಿಸಿ ಬೆದರಿಕೆ ಒಡ್ಡಿದ ಬಗ್ಗೆ ಬಿಜೆಪಿ ಮುಖಂಡ, ಈ ಹಿಂದೆ ಬಜರಂಗದಳ, ವಿಶ್ವ ಹಿಂದು ಪರಿಷತ್ ಜವಾಬ್ದಾರಿ ಹೊಂದಿದ್ದ ಮುರಳೀಕೃಷ್ಣ ಹಸಂತಡ್ಕ ಅವರ ವಿರುದ್ಧ ವಿಟ್ಲ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಪುಣಚ ನಿವಾಸಿ ಹರೀಶ್ ಭಟ್ ಮತ್ತು ಅವರ ಪತ್ನಿ ಶ್ರೀದೇವಿ ನ್ಯಾಯಾಲಯಕ್ಕೆ ದೂರು ನೀಡಿದ್ದು ಕೋರ್ಟ್ ಸೂಚನೆಯಂತೆ ತಲವಾರು ತೋರಿಸಿ ಬೆದರಿಕೆ ಒಡ್ಡಿದ್ದಕ್ಕೆ ಪ್ರತಿಯಾಗಿ ಪೊಲೀಸರು ಕೇಸು ದಾಖಲಿಸಿದ್ದಾರೆ. ಎಪ್ರಿಲ್ 16 ರಂದು ಮನೆಯಲ್ಲಿ ತನ್ನ ಪತ್ನಿ ಶ್ರೀದೇವಿ ಒಬ್ಬರೇ ಇದ್ದ ವೇಳೆ ಬಂದಿದ್ದ ಮುರಳೀಕೃಷ್ಣ ಹಸಂತಡ್ಕ, "ನಿನ್ನ ಗಂಡನಲ್ಲಿ ಸಾರಡ್ಕದ ಪೆಟ್ರೋಲ್ ಬಂಕ್ ವ್ಯವಹಾರವನ್ನು ಬಿಟ್ಟು ಕೊಡುವಂತೆ ಹೇಳು" ಎಂದು ಬೆದರಿಕೆಯೊಡ್ಡಿದ್ದಾನೆ. ಅಲ್ಲದೇ, ಎಪ್ರಿಲ್ 19ರಂದು ಮತ್ತೊಮ್ಮೆ ತಲವಾರು ತೋರಿಸಿ ಹರೀಶ್ ಹಾಗೂ ಶ್ರೀದೇವಿ ದಂಪತಿಗೆ ಬೆದರಿಕೆಯೊಡ್ಡಿದ್ದಾಗಿ ಆರೋಪಿಸಲಾಗಿದೆ.
ಹರೀಶ್ ಭಟ್ ಹಾಗೂ ಮುರಳೀಕೃಷ್ಣ ಹಸಂತಡ್ಕ ಸೇರಿಕೊಂಡು ಒಂದು ವರ್ಷದ ಹಿಂದೆ ಸಾರಡ್ಕದಲ್ಲಿ ಎಚ್.ಪಿ. ಪೆಟ್ರೋಲ್ ಬಂಕ್ ಆರಂಭಿಸಿದ್ದರು. ಆನಂತರ, ಪಾಲುದಾರಿಕೆಯಲ್ಲಿ ವೈಷಮ್ಯ ಉಂಟಾಗಿದ್ದು, ಒಂದು ತಿಂಗಳಿನಿಂದ ಬಂದ್ ಆಗಿತ್ತು. ಇದೇ ವಿಚಾರದಲ್ಲಿ ಮಾತುಕತೆ ಮಾಡಲು ಬಂದಿದ್ದಾಗ ಮುರಳೀಕೃಷ್ಣ ತನ್ನ ಪಾಲುದಾರ ಹರೀಶ್ ಮತ್ತು ಅವರ ಪತ್ನಿಗೆ ಜೀವ ಬೆದರಿಕೆ ಒಡ್ಡಿರುವುದಾಗಿ ದೂರು ದಾಖಲಾಗಿದೆ.
Discrimination in Petrol Pump Business, Threats to Partner Couple Life, FIR Filed Against BJP Leader Murali krishna in puttur.
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm