ಬ್ರೇಕಿಂಗ್ ನ್ಯೂಸ್
27-04-25 11:09 pm Mangalore Correspondent ಕರಾವಳಿ
ಮಂಗಳೂರು, ಎ.27 : ನಗರದ ಹೈಲ್ಯಾಂಡ್ ಆಸ್ಪತ್ರೆಯ ವೈದ್ಯೆಯೊಬ್ಬರು ತಮ್ಮ ಎಕ್ಸ್ ಜಾಲತಾಣದಲ್ಲಿ ಭಾರತ ಮತ್ತು ಹಿಂದುಗಳನ್ನು ದ್ವೇಷಿಸುತ್ತೇನೆ ಎಂಬ ರೀತಿ ಕಮೆಂಟ್ ಮಾಡಿರುವುದಾಗಿ ಜಾಲತಾಣದಲ್ಲಿ ಸ್ಕ್ರೀನ್ ಶಾಟ್ ವೈರಲ್ ಆಗಿದ್ದು, ಹಿಂದು ಸಂಘಟನೆಗಳ ಆಕ್ಷೇಪಕ್ಕೆ ಕಾರಣವಾಗಿದೆ.
ಎಕ್ಸ್ ಖಾತೆಯಲ್ಲಿ ಆಕೆ ಕಮೆಂಟ್ ಹಾಕಿರುವ ಸ್ಕ್ರೀನ್ ಶಾಟನ್ನು ವಿಶ್ವ ಹಿಂದು ಪರಿಷತ್ ಮುಖಂಡ ಶರಣ್ ಪಂಪ್ವೆಲ್ ತಮ್ಮ ಫೇಸ್ಬುಕ್ ನಲ್ಲಿ ಹಾಕಿದ್ದು, ಈ ಬಗ್ಗೆ ಮಂಗಳೂರು ಪೊಲೀಸರು ಕ್ರಮ ಜರುಗಿಸಬೇಕೆಂದು ಆಗ್ರಹ ಮಾಡಿದ್ದಾರೆ. ಕಾಶ್ಮೀರದ ಭಯೋತ್ಪಾದಕ ದಾಳಿಯಲ್ಲಿ ಹಿಂದುಗಳನ್ನು ಗುರಿಯಾಗಿಸಿ ಉಗ್ರರು ಗುಂಡು ಹಾರಿಸಿದ್ದು ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಈ ಬಗ್ಗೆ ಪಾಕಿಸ್ತಾನಿ ಉಗ್ರರ ವಿರುದ್ಧ ಕ್ರಮ ಜರುಗಿಸಬೇಕೆಂದು ದೇಶಾದ್ಯಂತ ಆಗ್ರಹ ಕೇಳಿಬರುತ್ತಿದೆ. ಇದರ ಬಗ್ಗೆ ಪರ- ವಿರೋಧ ಚರ್ಚೆಯೂ ನಡೆಯುತ್ತಿದ್ದು, ಈ ಹೊತ್ತಿನಲ್ಲೇ ಮಂಗಳೂರಿನ ವೈದ್ಯೆ ಆಕ್ಷೇಪಾರ್ಹ ಕಮೆಂಟ್ ಹಾಕಿದ್ದಾರೆಂದು ಜಾಲತಾಣದಲ್ಲಿ ವೈರಲ್ ಮಾಡಲಾಗಿದೆ.

Help stinky hindus behind me (ನನ್ನ ಹಿಂದೆ ಬಿದ್ದಿರುವ ಕೊಳಕು ಹಿಂದುಗಳಿಗೆ ಸಹಾಯ ಮಾಡಿ) ಎಂದು ಯಾರದ್ದೋ ಕಮೆಂಟಿಗೆ ಪ್ರತಿಕ್ರಿಯೆಯಾಗಿ ವೈದ್ಯೆ ಉತ್ತರ ನೀಡಿರುವಂತಿದೆ. ಮತ್ತೊಂದು ಕಮೆಂಟಿನಲ್ಲಿ am I Indian? Yes. Do I Hate India? Yes.. (ನಾನು ಭಾರತೀಯಳಾ..? ಹೌದು.. ನಾನು ಭಾರತವನ್ನು ದ್ವೇಷಿಸುತ್ತೀನಾ? ಹೌದು..) ಎಂದು ಪೋಸ್ಟ್ ಹಾಕಿದ್ದಾರೆ. ಮೇಲ್ನೋಟಕ್ಕೆ ಹಿಂದು ವಿರೋಧಿ ಕಮೆಂಟ್, ದೇಶ ವಿರೋಧಿ ಎಂದು ತೋರಿದರೂ, ಇದರ ವಾಕ್ಯಾರ್ಥ ನೇರವಾಗಿ ಆ ರೀತಿಯ ಭಾವನೆ ಬಿಂಬಿಸುತ್ತಿಲ್ಲ. ತನ್ನ ಹಿಂದೆ ಬಿದ್ದು ಕಮೆಂಟ್ ಹಾಕುತ್ತಿರುವವರನ್ನು ಮಾತ್ರ ಕೊಳಕು, ಕೆಟ್ಟ ಹಿಂದುಗಳೆಂದು ಈಕೆ ಜರೆದಿದ್ದಾರೆ. ಇನ್ನೊಂದು ವಾಕ್ಯದಲ್ಲಿ ನಾನು ಭಾರತವನ್ನು ದ್ವೇಷಿಸುತ್ತೀನಾ ಎಂದು ಕೇಳಿ ಹೌದು ಎಂದು ಹೇಳಿ ಅಪಾರ್ಥಕ್ಕೆ ಎಡೆ ಮಾಡಿದ್ದಾರೆ.
ಪರ- ವಿರೋಧ ಹೇಳಿಕೆಯ ಪೂರ್ತಿ ಕಮೆಂಟ್ ನೋಡಿದರೆ ಇದರ ಹಿಂದಿನ ಭಾವಾರ್ಥ ತಿಳಿಯಬಹುದು. ಈ ಬಗ್ಗೆ ಜಾಲತಾಣದಲ್ಲಿ ಮಾತ್ರ ಇದನ್ನೇ ಅನುವಾದಿಸಿ (ಕಾಪಾಡಿ, ಕೊಳಕು ಹಿಂದುಗಳು ನನ್ನ ಹಿಂದೆ ಇದ್ದಾರೆ ಮತ್ತು ಹೌದು ನಾನು ಭಾರತೀಯಳು. ಹೌದು ನಾನು ಭಾರತವನ್ನು ದ್ವೇಷಿಸುತ್ತೇನೆ) ಬರೆಯಲಾಗಿದೆ. ಇದನ್ನು ವೈರಲ್ ಮಾಡಲಾಗಿದ್ದು ಪೊಲೀಸರು ಕ್ರಮ ಜರುಗಿಸಬೇಕೆಂದು ಸಂಘಟನೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ.
A recent statement by a doctor in Mangalore on twitter has ignited a heated debate, with accusations ranging from anti-Hindu sentiments to anti-national rhetoric. Fact Check by Headline Karnataka.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm