ಬ್ರೇಕಿಂಗ್ ನ್ಯೂಸ್
19-12-20 05:49 pm Mangalore Correspondent ಕರಾವಳಿ
ಮಂಗಳೂರು, ಡಿ.19: ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣ ಸಂಬಂಧಿಸಿ, ಸದ್ಯಕ್ಕೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಆರು ಜನರು ಕೃತ್ಯದಲ್ಲಿ ಭಾಗಿಯಾಗಿದ್ದು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆ ಇದ್ದಾನೆ. ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.
ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲಿ ಭೇದಿಸಿದ ಹುಮ್ಮಸ್ಸಿನಲ್ಲಿದ್ದ ಎಸ್ಪಿ ಲಕ್ಷ್ಮೀಪ್ರಸಾದ್, ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮೊದಲೇ ಮನೆಯವರಿಂದ ಮಾಹಿತಿ ಪಡೆದಿದ್ದೆವು. ಈ ವೇಳೆ, ಸಿಕ್ಕ ಮಾಹಿತಿ ಮತ್ತು ನಾವು ಸಂಗ್ರಹಿಸಿದ ಮಾಹಿತಿ ಆಧರಿಸಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದು ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯ ಜಿಲ್ಲೆಯ ಮಧುಗಿರಿ, ಹಾಸನ, ಬೆಂಗಳೂರಿಗೆ ತೆರಳಿತ್ತು. ಮಧುಗಿರಿಗೆ ತೆರಳಿದ್ದ ತಂಡಕ್ಕೆ ಒಂದಷ್ಟು ಮಾಹಿತಿಗಳು ಸಿಕ್ಕಿದ್ದವು ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಬೇವಿನಹಳ್ಳಿ ಗ್ರಾಮದ ದೇವಲಕೆರೆಯ ರಂಜಿತ್ (22), ಕೆ.ಎಂ.ದೊಡ್ಡಿ ಸಮೀಪದ ಕೋಡಿಕೆರೆ ಗ್ರಾಮದ ಹನುಮಂತು(21), ಮೈಸೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ತಲಕಾಡು ಗ್ರಾಮದ ಗಂಗಾಧರ (25), ಬೆಂಗಳೂರಿನ ದೊಡ್ಡಮ್ಮನ ಹಳ್ಳ 2ನೇ ಕ್ರಾಸ್ ನಿವಾಸಿ ಕಮಲ್(22) ಎಂಬ ನಾಲ್ವರನ್ನು ಪ್ರಮುಖ ಆರೋಪಿ ಬಾಡಿಗೆಗೆ ಪಡೆದು, ಸ್ಕೆಚ್ ರೂಪಿಸಿದ್ದ. ಅದಕ್ಕಾಗಿ ಏಳು ಲಕ್ಷ ರೂ. ನೀಡುವುದಾಗಿ ಹೇಳಿದ್ದ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಆರೋಪಿಗಳಿಗೆ ಸಹಕರಿಸಿದ್ದರು. ಉಜಿರೆಯಿಂದ ನೇರವಾಗಿ ಸುಳ್ಯ, ಮಡಿಕೇರಿ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೋಗಿ ಕೋಲಾರದತ್ತ ಹೋಗಿದ್ದಾರೆ. ಈ ನಡುವೆ, ಎಲ್ಲಿಯೂ ನಿಲ್ಲಿಸದೆ ಪ್ರಯಾಣ ಮಾಡಿದ್ದಾರೆ. ಕೋಲಾರಕ್ಕೆ ಹೋಗಿದ್ದ ವೇಳೆ ಖಚಿತ ಮಾಹಿತಿ ಪಡೆದು ಅಲ್ಲಿನ ಸ್ಥಳೀಯ ಪೊಲೀಸರ ನೆರವು ಪಡೆದು ಬಂಧನ ಕಾರ್ಯಾಚರಣೆ ಮಾಡಿದ್ದೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಬಿಟ್ ಕಾಯಿನ್ ವ್ಯವಹಾರ ಹೊಂದಿದ್ದ
ಬಾಲಕನ ತಂದೆ, ಬಿಜೋಯ್ ನಾಲ್ಕು ವರ್ಷಗಳ ಹಿಂದೆ ಬಿಟ್ ಕಾಯಿನ್ ಖರೀದಿಸಿದ್ದರು. ಆದರೆ, ಆಬಳಿಕ ಮೌಲ್ಯ ಕುಸಿಯುತ್ತದೆ ಎಂದು ಮಾರಾಟ ಮಾಡಿದ್ದಾಗಿ ತಿಳಿಸಿದ್ದಾರೆ. ಈಗ ನಾಪತ್ತೆಯಾಗಿರುವ ಪ್ರಮುಖ ಆರೋಪಿಗೆ ಬಿಜೋಯ್ ಕುಟುಂಬದ ಬಗ್ಗೆ ಗೊತ್ತಿದೆ. ಆತನೇ ಅಪಹರಣದ ಪ್ಲಾನ್ ಮಾಡಿದ್ದು. ಇದಕ್ಕಾಗಿ ಡಿ.7ರಿಂದಲೇ ಆರೋಪಿಗಳನ್ನು ಉಜಿರೆಗೆ ಕಳಿಸಿ, ಕುಟುಂಬಸ್ಥರ ಚಲನವಲನಗಳನ್ನು ಗಮನಿಸುತ್ತಿದ್ದ ಎಂದು ಎಸ್ಪಿ ಹೇಳಿದರು.

ಮಾಹಿತಿ ಪ್ರಕಾರ, ಬಿಜೋಯ್ ಬಿಟ್ ಕಾಯಿನ್ ವಹಿವಾಟು ನಡೆಸುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದ ವ್ಯಕ್ತಿಯೇ ಬಿಜೋಯ್ ಬಳಿಯಿಂದ ಹಣ ಕೀಳುವುದಕ್ಕೆ ಪ್ಲಾನ್ ಮಾಡಿದ್ದಾನೆ. ಬಿಟ್ ಕಾಯಿನ್ ಮೌಲ್ಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಒಂದಷ್ಟು ಪೀಕಿಸುವ ಪ್ಲಾನ್ ಹಾಕಿ, ಫೈಲ್ ಆಗಿದ್ದಾನೆ. ಆ ವ್ಯಕ್ತಿ ಯಾರೆನ್ನುವ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಲಭಿಸಿದ್ದು, ಈಗಾಗ್ಲೇ ಆತನ ಹಿಂದೆ ಬಿದ್ದಿದ್ದಾರೆ. ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.
Six persons have been arrested in Kidnap case of young boy from Ujre, Mangalore. One Master mind is said to be absconding said SP.
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm