ಬ್ರೇಕಿಂಗ್ ನ್ಯೂಸ್
19-12-20 05:49 pm Mangalore Correspondent ಕರಾವಳಿ
ಮಂಗಳೂರು, ಡಿ.19: ಎಂಟು ವರ್ಷದ ಬಾಲಕನ ಅಪಹರಣ ಪ್ರಕರಣ ಸಂಬಂಧಿಸಿ, ಸದ್ಯಕ್ಕೆ ಆರು ಮಂದಿಯನ್ನು ಬಂಧಿಸಲಾಗಿದೆ. ಈ ಆರು ಜನರು ಕೃತ್ಯದಲ್ಲಿ ಭಾಗಿಯಾಗಿದ್ದು ಇವರಿಗೆ ಸುಪಾರಿ ಕೊಟ್ಟ ವ್ಯಕ್ತಿ ಬೇರೆ ಇದ್ದಾನೆ. ಆತನ ಬಗ್ಗೆ ಮಾಹಿತಿ ಕಲೆ ಹಾಕಿದ್ದು ಶೀಘ್ರದಲ್ಲೇ ಬಂಧಿಸುತ್ತೇವೆ ಎಂದು ದಕ್ಷಿಣ ಕನ್ನಡ ಎಸ್ಪಿ ಲಕ್ಷ್ಮೀಪ್ರಸಾದ್ ಹೇಳಿದ್ದಾರೆ.
ಅಪಹರಣ ಪ್ರಕರಣವನ್ನು ಕೇವಲ 36 ಗಂಟೆಯಲ್ಲಿ ಭೇದಿಸಿದ ಹುಮ್ಮಸ್ಸಿನಲ್ಲಿದ್ದ ಎಸ್ಪಿ ಲಕ್ಷ್ಮೀಪ್ರಸಾದ್, ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿ ಕರೆದು ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಿದ್ದಾರೆ. ಪ್ರಕರಣದ ಬಗ್ಗೆ ಮೊದಲೇ ಮನೆಯವರಿಂದ ಮಾಹಿತಿ ಪಡೆದಿದ್ದೆವು. ಈ ವೇಳೆ, ಸಿಕ್ಕ ಮಾಹಿತಿ ಮತ್ತು ನಾವು ಸಂಗ್ರಹಿಸಿದ ಮಾಹಿತಿ ಆಧರಿಸಿ ನಾಲ್ಕು ಪೊಲೀಸ್ ತಂಡಗಳನ್ನು ರಚಿಸಿದ್ದು ಚಿಕ್ಕಮಗಳೂರಿನ ಮೂಡಿಗೆರೆ, ಮಂಡ್ಯ ಜಿಲ್ಲೆಯ ಮಧುಗಿರಿ, ಹಾಸನ, ಬೆಂಗಳೂರಿಗೆ ತೆರಳಿತ್ತು. ಮಧುಗಿರಿಗೆ ತೆರಳಿದ್ದ ತಂಡಕ್ಕೆ ಒಂದಷ್ಟು ಮಾಹಿತಿಗಳು ಸಿಕ್ಕಿದ್ದವು ಎಂದು ಹೇಳಿದರು.

ಮಂಡ್ಯ ಜಿಲ್ಲೆಯ ಬೇವಿನಹಳ್ಳಿ ಗ್ರಾಮದ ದೇವಲಕೆರೆಯ ರಂಜಿತ್ (22), ಕೆ.ಎಂ.ದೊಡ್ಡಿ ಸಮೀಪದ ಕೋಡಿಕೆರೆ ಗ್ರಾಮದ ಹನುಮಂತು(21), ಮೈಸೂರು ಜಿಲ್ಲೆಯ ಅರಸೀಕೆರೆ ತಾಲೂಕಿನ ತಲಕಾಡು ಗ್ರಾಮದ ಗಂಗಾಧರ (25), ಬೆಂಗಳೂರಿನ ದೊಡ್ಡಮ್ಮನ ಹಳ್ಳ 2ನೇ ಕ್ರಾಸ್ ನಿವಾಸಿ ಕಮಲ್(22) ಎಂಬ ನಾಲ್ವರನ್ನು ಪ್ರಮುಖ ಆರೋಪಿ ಬಾಡಿಗೆಗೆ ಪಡೆದು, ಸ್ಕೆಚ್ ರೂಪಿಸಿದ್ದ. ಅದಕ್ಕಾಗಿ ಏಳು ಲಕ್ಷ ರೂ. ನೀಡುವುದಾಗಿ ಹೇಳಿದ್ದ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಕೂರ್ನಹೊಸಳ್ಳಿ ಗ್ರಾಮದ ಮಂಜುನಾಥ್ ಮತ್ತು ಮಹೇಶ್ ಆರೋಪಿಗಳಿಗೆ ಸಹಕರಿಸಿದ್ದರು. ಉಜಿರೆಯಿಂದ ನೇರವಾಗಿ ಸುಳ್ಯ, ಮಡಿಕೇರಿ, ಹಾಸನ ಮಾರ್ಗವಾಗಿ ಬೆಂಗಳೂರಿಗೆ ಹೋಗಿ ಕೋಲಾರದತ್ತ ಹೋಗಿದ್ದಾರೆ. ಈ ನಡುವೆ, ಎಲ್ಲಿಯೂ ನಿಲ್ಲಿಸದೆ ಪ್ರಯಾಣ ಮಾಡಿದ್ದಾರೆ. ಕೋಲಾರಕ್ಕೆ ಹೋಗಿದ್ದ ವೇಳೆ ಖಚಿತ ಮಾಹಿತಿ ಪಡೆದು ಅಲ್ಲಿನ ಸ್ಥಳೀಯ ಪೊಲೀಸರ ನೆರವು ಪಡೆದು ಬಂಧನ ಕಾರ್ಯಾಚರಣೆ ಮಾಡಿದ್ದೇವೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ತಿಳಿಸಿದ್ದಾರೆ.
ಬಿಟ್ ಕಾಯಿನ್ ವ್ಯವಹಾರ ಹೊಂದಿದ್ದ
ಬಾಲಕನ ತಂದೆ, ಬಿಜೋಯ್ ನಾಲ್ಕು ವರ್ಷಗಳ ಹಿಂದೆ ಬಿಟ್ ಕಾಯಿನ್ ಖರೀದಿಸಿದ್ದರು. ಆದರೆ, ಆಬಳಿಕ ಮೌಲ್ಯ ಕುಸಿಯುತ್ತದೆ ಎಂದು ಮಾರಾಟ ಮಾಡಿದ್ದಾಗಿ ತಿಳಿಸಿದ್ದಾರೆ. ಈಗ ನಾಪತ್ತೆಯಾಗಿರುವ ಪ್ರಮುಖ ಆರೋಪಿಗೆ ಬಿಜೋಯ್ ಕುಟುಂಬದ ಬಗ್ಗೆ ಗೊತ್ತಿದೆ. ಆತನೇ ಅಪಹರಣದ ಪ್ಲಾನ್ ಮಾಡಿದ್ದು. ಇದಕ್ಕಾಗಿ ಡಿ.7ರಿಂದಲೇ ಆರೋಪಿಗಳನ್ನು ಉಜಿರೆಗೆ ಕಳಿಸಿ, ಕುಟುಂಬಸ್ಥರ ಚಲನವಲನಗಳನ್ನು ಗಮನಿಸುತ್ತಿದ್ದ ಎಂದು ಎಸ್ಪಿ ಹೇಳಿದರು.

ಮಾಹಿತಿ ಪ್ರಕಾರ, ಬಿಜೋಯ್ ಬಿಟ್ ಕಾಯಿನ್ ವಹಿವಾಟು ನಡೆಸುತ್ತಿದ್ದಾರೆ. ಈ ಬಗ್ಗೆ ಗೊತ್ತಿದ್ದ ವ್ಯಕ್ತಿಯೇ ಬಿಜೋಯ್ ಬಳಿಯಿಂದ ಹಣ ಕೀಳುವುದಕ್ಕೆ ಪ್ಲಾನ್ ಮಾಡಿದ್ದಾನೆ. ಬಿಟ್ ಕಾಯಿನ್ ಮೌಲ್ಯ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ಒಂದಷ್ಟು ಪೀಕಿಸುವ ಪ್ಲಾನ್ ಹಾಕಿ, ಫೈಲ್ ಆಗಿದ್ದಾನೆ. ಆ ವ್ಯಕ್ತಿ ಯಾರೆನ್ನುವ ಬಗ್ಗೆ ಸ್ಪಷ್ಟ ಸುಳಿವು ಪೊಲೀಸರಿಗೆ ಲಭಿಸಿದ್ದು, ಈಗಾಗ್ಲೇ ಆತನ ಹಿಂದೆ ಬಿದ್ದಿದ್ದಾರೆ. ಶೀಘ್ರದಲ್ಲಿಯೇ ಬಂಧಿಸುವ ವಿಶ್ವಾಸದಲ್ಲಿದ್ದಾರೆ.
Six persons have been arrested in Kidnap case of young boy from Ujre, Mangalore. One Master mind is said to be absconding said SP.
01-05-26 08:33 pm
HK News Staffer
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:24 pm
HK News Staffer
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm
ಬೆಂಗಳೂರಿನ ಜ್ಯುವೆಲ್ಲರಿ ಶಾಪ್ ಗೋಡೆ ಕೊರೆದು ಕೋಟ್ಯಂ...
01-05-26 11:48 am