ಬ್ರೇಕಿಂಗ್ ನ್ಯೂಸ್
29-04-25 05:45 pm Mangalore Correspondent ಕರಾವಳಿ
ಮಂಗಳೂರು, ಎ.29 : ಉಳ್ಳಾಲದ ನೇತ್ರಾವತಿ ಸೇತುವೆಯಲ್ಲಿ ವಾಹನ ಸಂಚಾರ ಮುಕ್ತಗೊಳಿಸಲು ಇನ್ನೆರಡು ದಿನ ಕಾಯಬೇಕಾಗಿದೆ. ಎಪ್ರಿಲ್ 1ರಿಂದ 30ರ ವರೆಗೆ ಒಂದು ಬದಿಯ ಸೇತುವೆಯಲ್ಲಿ ಸಂಚಾರ ಸ್ಥಗಿತಗೊಳಿಸಿ ದುರಸ್ತಿ ನಡೆಸಲಾಗಿತ್ತು. ಇದೀಗ ದುರಸ್ತಿ ಕಾರ್ಯ ಮುಗಿದಿದ್ದು, ಮೇ 3ರಂದು ಬೆಳಗ್ಗಿನಿಂದ ಸಂಪೂರ್ಣ ವಾಹನ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಹೈವೇ ಅಧಿಕಾರಿಗಳು ತಿಳಿಸಿದ್ದಾರೆ.
ತೊಕ್ಕೊಟ್ಟಿನಿಂದ ಮಂಗಳೂರಿನ ಕಡೆಗೆ ಬರುವ ಸೇತುವೆಯಲ್ಲಿ ಒಟ್ಟು 24 ಪಿಲ್ಲರ್ ಗಳಿದ್ದು 12 ಕಡೆಗಳಲ್ಲಿ ಬೇರಿಂಗ್ ಅಳವಡಿಸಲಾಗಿದೆ. ಬೇರಿಂಗ್ ಅಳವಡಿಸುವುದು ಸೂಕ್ಷ್ಮ ಕೆಲಸವಾಗಿದ್ದು, ಪಿಲ್ಲರ್ ಕಂಬದ ಮೇಲ್ಭಾಗದಲ್ಲಿ ಹೋಗಿ ಇಬ್ಬರಿಗಷ್ಟೇ ದುರಸ್ತಿ ನಿರ್ವಹಿಸಲು ಸಾಧ್ಯವಾಗುತ್ತದೆ. ಹಾಗಾಗಿ ಒಂದು ತಿಂಗಳು ಸಮಯ ಬೇಕಾಯಿತು. ಕೊನೆಯ ಬೇರಿಂಗ್ ಎಪ್ರಿಲ್ 28ರಂದು ಅಳವಡಿಸಲಾಗಿದ್ದು, ಅದರ ಕ್ಯೂರಿಂಗ್ ಆಗಲು ನಾಲ್ಕು ದಿನ ಬೇಕಾಗುತ್ತದೆ. ಅದಕ್ಕಾಗಿ ಸಂಚಾರ ಸ್ಥಗಿತ ಆದೇಶ ಎರಡು ದಿನ ವಿಸ್ತರಿಸಲು ಜಿಲ್ಲಾಧಿಕಾರಿಗೆ ಬರೆದಿದ್ದು ಅನುಮತಿ ನೀಡಿದ್ದಾರೆ. ಮೇ 2ರಂದು ಸಂಜೆಯ ವೇಳೆಗೆ ಸಂಚಾರಕ್ಕೆ ಮುಕ್ತಗೊಳಿಸುತ್ತಿದ್ದು, 3ರಿಂದ ಪೂರ್ತಿಯಾಗಿ ಮುಕ್ತ ಮಾಡುತ್ತೇವೆ ಎಂದು ಕಾಮಗಾರಿ ನಿರ್ವಹಿಸಿದ ಮುಂಬೈ ಮೂಲದ ಕಂಪನಿಯ ಇಂಜಿನಿಯರ್ ಅಜಯ್ ಮಾಹಿತಿ ನೀಡಿದ್ದಾರೆ.
ಉಳ್ಳಾಲದಿಂದ ಮಂಗಳೂರು ಸಂಪರ್ಕಿಸುವ ನೇತ್ರಾವತಿಯಲ್ಲಿ ಎರಡು ಸೇತುವೆಗಳಿದ್ದು, ಒಂದರಲ್ಲಿ ದುರಸ್ತಿ ಕಾರ್ಯ ಇದ್ದುದರಿಂದ ಎಪ್ರಿಲ್ ತಿಂಗಳು ಪೂರ್ತಿಯಾಗಿ ಸಂಚಾರ ಬಂದ್ ಮಾಡಲಾಗಿತ್ತು. ಹೀಗಾಗಿ ಒಂದೇ ರಸ್ತೆಯಲ್ಲಿ ವಾಹನಗಳು ಸಾಲುಗಟ್ಟಿ ಟ್ರಾಫಿಕ್ ಜಾಮ್ ನೊಂದಿಗೆ ಸಾಗಬೇಕಾಗಿತ್ತು. ಇದರಿಂದಾಗಿ ತುರ್ತಾಗಿ ಸಂಚರಿಸಬೇಕಿದ್ದವರು ತುಂಬಾನೇ ಪ್ರಯಾಸ ಪಟ್ಟಿದ್ದರು. ಇದೀಗ ಎಪ್ರಿಲ್ 30ರ ಗಡುವು ಮತ್ತೆರಡು ದಿನಕ್ಕೆ ವಿಸ್ತರಣೆಯಾಗಿದ್ದು, ಮೇ 3ರ ವೇಳೆಗೆ ವಾಹನ ಸಂಚಾರಕ್ಕೆ ಅನುಮತಿ ಸಿಗುವ ನಿರೀಕ್ಷೆಯಿದೆ.
The much-awaited Ullal Nethravathi Bridge is set to be inaugurated on May 3, bringing relief to commuters traveling between Mangaluru and Ullal. The district administration has granted a two-day extension to the project contractor to complete the final touches before the official opening.
18-06-26 09:57 pm
HK News Staffer
ಪರಿಷತ್ ಚುನಾವಣೆ; ಮೈತ್ರಿ ಪಕ್ಷಕ್ಕೆ ತೀವ್ರ ಮುಖಭಂಗ,...
18-06-26 07:15 pm
ಆರೆಸ್ಸೆಸ್ ನೋಂದಣಿ ; ಪ್ರಿಯಾಂಕ ಖರ್ಗೆ ಪತ್ರಕ್ಕೆ ಸಾ...
18-06-26 01:25 pm
Jayadeva Hospital, Mysuru: ಮೈಸೂರಿನ ಜಯದೇವ ಆಸ್ಪ...
18-06-26 01:17 pm
ಧರ್ಮಸ್ಥಳ ಕೇಸ್ ; ಎಡಪಂಥೀಯರ ಒತ್ತಡಕ್ಕೆ ಎಸ್ಐಟಿ, ಷಡ...
17-06-26 10:12 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
19-06-26 12:24 pm
HK News Staffer
Bejai, Kadri Water Issue: ಬಿಜೈ, ಕದ್ರಿಗೆ ಕಲುಷಿ...
18-06-26 12:33 pm
ಬಸ್ಸೋ, ಬಸ್ ನಿಲ್ದಾಣವೋ ? ಗುರುಪುರ ಬಂಡಸಾಲೆಯಲ್ಲಿ ವ...
16-06-26 11:35 am
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
18-06-26 01:20 pm
HK News Staffer
ಸ್ಕೂಟರಲ್ಲಿ ನಾಲ್ವರು ಹೆಣ್ಮಕ್ಕಳ ಜಾಲಿ ರೈಡ್; ನಿಯಂತ...
17-06-26 01:41 pm
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm