ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
22-12-25 11:09 pm
HK News Desk
ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಯ ಹುಟ್ಟುಹಬ್ಬದಲ್ಲಿ...
22-12-25 10:30 pm
ಅಧಿಕಾರ ಹಂಚಿಕೆ ಹೈಕಮಾಂಡ್ ತೀರ್ಮಾನವೇ ಅಂತಿಮ, ನಮ್ಮದ...
22-12-25 06:29 pm
ಸ್ಥಳೀಯ ಮಟ್ಟದಲ್ಲೇ ಗೊಂದಲ ಬಗೆಹರಿಸಿಕೊಳ್ಳಿ, ಎಲ್ಲದಕ...
21-12-25 05:33 pm
ಸಿಎಂ ಸ್ಥಾನ ಉಳಿಸಿಕೊಳ್ಳಲು ಅಹಿಂದ ಶಾಸಕರು, ಸಚಿವರ ರ...
20-12-25 03:05 pm
23-12-25 03:28 pm
HK News Desk
ಭಾರತ ಹಿಂದೂ ರಾಷ್ಟ್ರ ಎನ್ನಲು ಸಾಂವಿಧಾನಿಕ ಅನುಮೋದನೆ...
22-12-25 06:32 pm
ಶಬರಿಮಲೆ ಚಿನ್ನ ಕಳವು ; ಬೆಂಗಳೂರಿನ ಜುವೆಲ್ಲರಿ ಮಾಲೀ...
20-12-25 01:51 pm
ಮರಳುಗಾಡಿನ ನಗರಿ ದುಬೈ, ಅಬುಧಾಬಿಯಲ್ಲಿ ಭಾರೀ ಗಾಳಿ-...
19-12-25 02:40 pm
ಜೆಡ್ಡಾದಿಂದ ಕೋಝಿಕ್ಕೋಡ್ ತೆರಳುತ್ತಿದ್ದ ಏರ್ ಇಂಡಿಯ...
18-12-25 04:34 pm
24-12-25 12:23 pm
Mangalore Correspondent
ಬಜಪೆ ಪಟ್ಟಣ ಪಂಚಾಯತ್ ಚುನಾವಣೆ ; ಬಿಜೆಪಿಗೆ ಸ್ಪಷ್ಟ...
24-12-25 12:02 pm
MLA Vedavyas Kamath: ಮಹಾನಗರ ಪಾಲಿಕೆ ಕಾಂಗ್ರೆಸ್...
23-12-25 10:51 pm
Sansad Khel Mahotsav Mangalore: ಮಂಗಳೂರಿನಲ್ಲಿ...
23-12-25 10:40 pm
Ullal, UT Khader, Mudipu KSRTC: ನಾಲೇಜ್ ಕಾರಿಡಾ...
23-12-25 10:23 pm
23-12-25 01:41 pm
Mangalore Correspondent
ನೀವು 24 ಸಾವಿರ ಕಟ್ಟಿದರೆ ತಿಂಗಳಿಗೆ 20 ಲಕ್ಷ, ಕೇಂದ...
22-12-25 04:00 pm
ಹುಬ್ಬಳ್ಳಿಯಲ್ಲಿ ಮರ್ಯಾದಾ ಹತ್ಯೆ ; 19 ವರ್ಷದ ಗರ್ಭಿ...
22-12-25 02:18 pm
Udupi Arrest, Pakistan: ಕೊಚ್ಚಿನ್ ಶಿಪ್ ಯಾರ್ಡ್...
22-12-25 01:06 pm
ಟ್ರಾಫಿಕ್ ದಂಡದ ಹೆಸರಲ್ಲಿ ಎಪಿಕೆ ಫೈಲ್ ಲಿಂಕ್ ; ಮೋಸ...
21-12-25 09:36 pm