ಬ್ರೇಕಿಂಗ್ ನ್ಯೂಸ್
30-04-25 11:26 am Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಬಳಿಯಲ್ಲಿ ಯುವಕರ ಗುಂಪಿನಿಂದ ಥಳಿತಕ್ಕೊಳಗಾಗಿ ಹತ್ಯೆಗೀಡಾದ ಪ್ರಕರಣದಲ್ಲಿ ಸಂತ್ರಸ್ತ ಯುವಕನ ಗುರುತು ಪತ್ತೆಯಾಗಿದ್ದು ಕೇರಳದ ವಯನಾಡ್ ಮೂಲದ ಅಶ್ರಫ್ ಎಂದು ಗುರುತಿಸಲಾಗಿದೆ.
ವಯನಾಡ್ ಜಿಲ್ಲೆಯ ಸುಲ್ತಾನ್ ಬತ್ತೇರಿ ಬಳಿಯ ಪುಲಪ್ಪಳ್ಳಿ ನಿವಾಸಿಯೆಂದು ಪ್ರಾಥಮಿಕ ಮೂಲಗಳಿಂದ ತಿಳಿದುಬಂದಿದ್ದು ಯುವಕನ ಗುರುತು ಪತ್ತೆಗಾಗಿ ಕುಟುಂಬ ಸದಸ್ಯರು ಮಂಗಳೂರಿಗೆ ಆಗಮಿಸಲಿದ್ದಾರೆ. ಪ್ರಕರಣ ಸಂಬಂಧಿಸಿ ಈಗಾಗಲೇ 15 ಜನರನ್ನು ಮಂಗಳೂರು ಗ್ರಾಮಾಂತರ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಯತಿರಾಜ್, ಸಚಿನ್, ಅನಿಲ್, ಸುಶಾಂತ್, ಆದರ್ಶ್ ಬಂಧಿತರು.
ಎಪ್ರಿಲ್ 27ರ ಭಾನುವಾರ ಸಂಜೆ ಕುಡುಪು ಮೈದಾನದಲ್ಲಿ ಕ್ರಿಕೆಟ್ ಆಡುತ್ತಿದ್ದಾಗ ಯುವಕ ದೇಶ ವಿರೋಧಿ ಘೋಷಣೆ ಕೂಗಿದ ವಿಷಯದಲ್ಲಿ ವಾಗ್ವಾದ ನಡೆಸಿ ಸ್ಥಳೀಯ ಯುವಕರು ಹಲ್ಲೆ ನಡೆಸಿದ್ದರು. ಗುಂಪು ಸೇರಿ ಥಳಿಸಿ ಅಲ್ಲಿಯೇ ಬಿಟ್ಟು ಹೋಗಿದ್ದರಿಂದ ಹಲ್ಲೆಗೀಡಾದ ಯುವಕ ಬಳಿಕ ಸ್ಥಳದಲ್ಲೇ ಸಾವನ್ನಪ್ಪಿದ್ದಾಗಿ ಪ್ರಕರಣ ದಾಖಲಾಗಿದೆ.
ಮುಸ್ಲಿಂ ಯುವಕನೆಂದು ಧರ್ಮ ದ್ವೇಷದಲ್ಲಿ ಹಲ್ಲೆ ನಡೆಸಿದ್ದಾರೆಂದು ಆರೋಪ ಕೇಳಿಬಂದಿದೆ. ಆದರೆ ಸಾವಿಗೀಡಾದ ವ್ಯಕ್ತಿ ಯಾರೆಂದೇ ಗುರುತು ಸಿಕ್ಕಿರಲಿಲ್ಲ. ಸ್ಥಳೀಯ ಪೊಲೀಸರು ಹೇಳದಿದ್ದರೂ, ಗೃಹ ಸಚಿವ ಪರಮೇಶ್ವರ್ ಪಾಕಿಸ್ತಾನ ಜೊಂದಾಬಾದ್ ಘೋಷಣೆ ಕೂಗಿದ್ದಕ್ಕಾಗಿ ಹಲ್ಲೆ ನಡೆಸಿದ್ದರು ಎಂದಿದ್ದಾರೆ. ಹೀಗಾಗಿ ಮುಸ್ಲಿಂ ಎನ್ನುವುದಕ್ಕಿಂತಲೂ ದೇಶಕ್ಕೆ ವಿರುದ್ಧವಾಗಿ ಘೋಷಣೆ ಹಾಕಿದ್ದಕ್ಕಾಗಿ ಯುವಕರು ಹಲ್ಲೆ ನಡೆಸಿದ್ದರೆಂಬುದು ಕಂಡುಬರುತ್ತದೆ.
Kudupu Mob Lynching Murder Case, Five More Arrested for Assault Over Alleged Anti National Slogans.
19-02-26 09:29 pm
mangalore
ಪರಮೇಶ್ವರ್ ಅಥವಾ ಡಿಕೆಶಿ ಯಾರಾಗ್ತಾರೆ ಮುಂದಿನ ಮುಖ್ಯ...
19-02-26 03:11 pm
ವಿಧಾನಸೌಧ ಒಳಗಡೆ ಮಾಧ್ಯಮಗಳಿಗೆ ಲಕ್ಷ್ಮಣ ರೇಖೆ ; ಭದ್...
18-02-26 09:02 pm
ಮಹಾರಾಷ್ಟ್ರದಿಂದ ಬೈಕ್ ನಲ್ಲಿ ಬಾಗಲಕೋಟಗೆ ಬರುತ್ತಿದ...
18-02-26 06:03 pm
ಊಟಕ್ಕೆ ತೆರಳುತ್ತಿದ್ದಾಗ ಭೀಕರ ರಸ್ತೆ ಅಪಘಾತ ; ಬೈಕ್...
17-02-26 10:33 pm
19-02-26 11:04 pm
mangalore
'ಉಚಿತ' ಕೊಡುಗೆಗಳು ದೇಶದ ಅಭಿವೃದ್ಧಿಗೆ ಅಡ್ಡಿ ; ಆದಾ...
19-02-26 10:10 pm
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಶೋಚನೀಯ ಸ್ಥಿತಿ ; ಕ...
17-02-26 08:50 pm
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
19-02-26 10:37 pm
mangalore
2013ರಲ್ಲಿ ಶಿಲಾನ್ಯಾಸಗೊಂಡಿದ್ದ ಅಬ್ಬಕ್ಕ ಭವನ ನಿರ್ಮ...
19-02-26 09:50 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ತೆರವಿಗೆ ಆಗ್ರಹ, ಹೋರಾಟ...
19-02-26 06:08 pm
ನೇತ್ರಾವತಿ ಸೇತುವೆ ಆವರಣ ಗೋಡೆಗೆ ಅಪ್ಪಳಿಸಿದ ಮಿನಿ ಟ...
19-02-26 05:38 pm
ಬೆಳ್ತಂಗಡಿ : ಮಕ್ಕಳು ಕ್ರಿಕೆಟ್ ಆಡುತ್ತಿದ್ದಾಗ ನಿಗೂ...
19-02-26 04:09 pm
20-02-26 11:31 am
Mangalore Correspondent
Mangalore CCB Police, Rowdy Safwan Hussain: ದ...
18-02-26 09:16 pm
Mangalore Shivabagh Suicide: ಕೈ ಕೊಯ್ದುಕೊಂಡು ರ...
18-02-26 07:42 pm
Hassan Murder: ಆಸ್ತಿ ವಿಚಾರಕ್ಕೆ ತಕರಾರು, ಕೋರ್ಟ್...
18-02-26 07:10 pm
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ, ಹಡಗುಗಳ ರಹಸ್ಯ ಮಾ...
18-02-26 01:52 pm