ಬ್ರೇಕಿಂಗ್ ನ್ಯೂಸ್
30-04-25 04:06 pm Mangalore Correspondent ಕರಾವಳಿ
ಮಂಗಳೂರು, ಎ.30 : ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ ಎಂದು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಪ್ರತಿಕ್ರಿಯಿಸಿದ್ದಾರೆ.
ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ.
ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಿಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ ಶಕ್ತಿಗಳು ದ್ವೇಷ ಹರಡುವ ಪ್ರಯತ್ನ ನಡೆಸುವ ಸಾಧ್ಯತೆಯಿದೆ. ಪೊಲೀಸರು ಅದಕ್ಕೆ ಅವಕಾಶ ಕೊಡಬಾರದು.
ಕೋಮು ಸಂಘರ್ಷ ಹುಟ್ಟು ಹಾಕುವ ಮೂಲಕ ನಮ್ಮ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆನ್ನುವುದು ಕೆಲ ಪಟ್ಟಭದ್ರ ಹಿತಾಸಕ್ತಿಗಳ ಉದ್ದೇಶವಾಗಿದೆ. ದಕ್ಷಿಣ ಕನ್ನಡದ ಜನ ಈ ಹುನ್ನಾರಗಳನ್ನು ಅರಿಯಬೇಕು. ಪ್ರಜ್ಞಾವಂತರ ಜಿಲ್ಲೆ ಎಂದೇ ಹೆಸರಾದ ದಕ್ಷಿಣ ಕನ್ನಡಕ್ಕೆ ಕಳಂಕ ಬಾರದಂತೆ ನೋಡಿಕೊಳ್ಳುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ.
ಕಾನೂನು ಕೈಗೆತ್ತಿಕೊಳ್ಳುವ, ಸಮಾಜದ ಸ್ವಾಸ್ಥ್ಯ ಕೆಡಿಸುವ, ಸಾಮರಸ್ಯಕ್ಕೆ ಕೊಳ್ಳಿ ಇಡುವ ಯಾವುದೇ ದುಷ್ಟ ಪ್ರಯತ್ನಕ್ಕೆ ನಮ್ಮ ಸರ್ಕಾರ ಅವಕಾಶ ಮಾಡಿಕೊಡುವುದಿಲ್ಲ. ಈ ವಿಚಾರದಲ್ಲಿ ನಮ್ಮದು ಶೂನ್ಯ ಸಹಿಷ್ಣುತೆ ಎಂಬ ಮಾತನ್ನು ಸಮಾಜ ಘಾತಕರಿಗೆ ಎಚ್ಚರಿಕೆ ರೂಪದಲ್ಲಿ ಹೇಳಲು ಬಯಸುತ್ತೇನೆ.
ದಯೆಗಿಂತ ಮಿಗಿಲಾದ ಧರ್ಮವಿಲ್ಲ ಎಂಬ ಬಸವಣ್ಣನವರ ಆಶಯದಂತೆ ನಮ್ಮ ಸರ್ಕಾರ ಆಡಳಿತ ನಡೆಸುತ್ತಿದೆ. ಈ ಆಶಯಕ್ಕೆ ಧಕ್ಕೆ ಬರಬಾರದು. ಸಮಾಜದ ಶಾಂತಿ ಕದಡಬಾರದು. ಇದು ನನ್ನ ಮನವಿ ಎಂದು ಕುಡುಪು ಗುಂಪು ಹತ್ಯೆ ಪ್ರಕರಣ ಹಿನ್ನೆಲೆಯಲ್ಲಿ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
Dakshina Kannada district in-charge minister Dinesh Gundu Rao has strongly condemned the barbaric murder of a youth who was bludgeoned with a stone near Kudupu on the city outskirts.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
09-06-26 05:03 pm
HK News Staffer
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm
ಡಿಜಿಟಲ್ ಅರೆಸ್ಟ್ ಹೆಸರಿನಲ್ಲಿ 98 ಲಕ್ಷ ರೂ. ದೋಚಿದ...
08-06-26 10:41 pm
ಹೃದಯಾಘಾತ ; ಸಕಾಲದಲ್ಲಿ ಆ್ಯಂಬುಲೆನ್ಸ್ ಸಿಗದೆ ಕೊಕ್ಕ...
08-06-26 04:42 pm