ಬ್ರೇಕಿಂಗ್ ನ್ಯೂಸ್
30-04-25 11:07 pm Mangalore Correspondent ಕರಾವಳಿ
ಮಂಗಳೂರು, ಎ.30 : ಕುಡುಪು ಗುಂಪು ಹತ್ಯೆ ಪ್ರಕರಣದಲ್ಲಿ ರಾಜ್ಯದ ಗೃಹ ಸಚಿವರು ಬೇಜವಾಬ್ದಾರಿ ಹೇಳಿಕೆ ನೀಡುವ ಮೂಲಕ ಪ್ರಕರಣ ಮುಚ್ಚಿ ಹಾಕುವ ಯತ್ನ ಮಾಡಿದ್ದಾರೆ. ದೇಶ ವಿರೋಧಿ ಹೇಳಿಕೆ ನೀಡಿದ್ದರೂ, ಅದಕ್ಕಾಗಿ ಗುಂಪು ಸೇರಿ ಥಳಿಸಿ ಹತ್ಯೆ ಮಾಡುವುದು ಯಾವ ನ್ಯಾಯ. ದೇಶದ್ರೋಹಿ ಕಾಯ್ದೆಯಡಿ ಕೇಸು ದಾಖಲಿಸಿದ್ದನ್ನು ನಾವು ನೋಡಿದ್ದೇವೆ. ಸಿದ್ದರಾಮಯ್ಯ ಸರಕಾರಕ್ಕೆ ಪ್ರಾಮಾಣಿಕತೆ ಇದ್ದರೆ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖಾ ತಂಡ ನೇಮಿಸಲಿ ಎಂದು ಎಸ್ಡಿಪಿ ಜಿಲ್ಲಾಧ್ಯಕ್ಷ ರಿಯಾಜ್ ಪರಂಗಿಪೇಟೆ ಆಗ್ರಹಿಸಿದ್ದಾರೆ.
ಮಂಗಳೂರಿನ ಕ್ಲಾಕ್ ಟವರ್ ವೃತ್ತದಲ್ಲಿ ನಡೆದ ಗುಂಪು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳನ್ನು ಬಂಧಿಸಲು ಆಗ್ರಹಿಸಿ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರಿನಲ್ಲಿ ಬಜರಂಗದಳ ನಾಯಕರು ಜಾಲತಾಣದಲ್ಲಿ ಪೋಸ್ಟ್ ಹಾಕಿದ ಕೂಡಲೇ ಪೊಲೀಸರು ಕೇಸು ದಾಖಲಿಸುತ್ತಾರೆ. ಇಲ್ಲಿಯ ಪೊಲೀಸರು ಸಂಘ ಪರಿವಾರದ ಕೈಯಲ್ಲಿದ್ದಾರೆಯೇ ಎಂದು ನಾವು ಪ್ರಶ್ನಿಸುತ್ತೇವೆ. ಅವರಿಗೆ ಸಂಬಳ ಕೊಡುವುದು ನಮ್ಮ ದುಡ್ಡಿನಲ್ಲಿ. ಸಂಘ ಪರಿವಾರದ ದುಡ್ಡಿನಲ್ಲಿ ಅಲ್ಲ. ಮೊನ್ನೆ ಯಾವುದೋ ವಿಚಾರಕ್ಕೆ ಜಾಲತಾಣದಲ್ಲಿ ಬರೆದಿದ್ದಾರೆ ಎಂಬ ಕಾರಣಕ್ಕೆ ಸಂಘ ಪರಿವಾರದ ನಾಯಕರು ಆಗ್ರಹಿಸಿದ್ದಾರೆ ಎಂದ ಕೂಡಲೇ ಪೊಲೀಸರು ಕೇಸು ದಾಖಲಿಸಿದ್ದಾರೆ.




ಅಶ್ರಫ್ ಹತ್ಯೆ ಪ್ರಕರಣವನ್ನು ಎಸ್ಡಿಪಿಐ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದ್ದು, ಯಾವುದೇ ಹಂತದ ವರೆಗೂ ನಾವು ಬಿಡುವುದಿಲ್ಲ. ಆರೋಪಿಗಳಿಗೆ ಗರಿಷ್ಠ ಶಿಕ್ಷೆ ಸಿಗುವ ವರೆಗೂ ನಾವು ಒಯ್ಯಲಿದ್ದೇವೆ. ಇಲ್ಲಿಯ ಪೊಲೀಸರ ಬಗ್ಗೆ ನಮಗೆ ನಂಬಿಕೆ ಇಲ್ಲ. ಈ ಬಗ್ಗೆ ಬೇರೆ ಕಡೆಯ ಅಧಿಕಾರಿಗಳ ಮೂಲಕ ತನಿಖೆಗೆ ಆಗ್ರಹಿಸುತ್ತೇವೆ ಎಂದು ಹೇಳಿದರು. ನೂರಾರು ಎಸ್ಡಿಪಿಐ ಕಾರ್ಯಕರ್ತರು ರಸ್ತೆ ಮಧ್ಯೆ ನಿಂತು ಪ್ರತಿಭಟನೆ ನಡೆಸಿದರು.
ಎಸ್ಡಿಪಿಐ ರಾಜ್ಯ ಕಾರ್ಯದರ್ಶಿ ಅಥಾವುಲ್ಲಾ ಜೋಕಟ್ಟೆ, ನಗರ ಜಿಲ್ಲಾಧ್ಯಕ್ಷ ಜಲೀಲ್ ಕೃಷ್ಣಾಪುರ ಮತ್ತಿತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.
The Social Democratic Party of India (SDPI) staged a strong protest in Mangaluru on Tuesday, demanding the immediate arrest of Ravindra Nayak, a close aide of BJP MLA Bharath Shetty, in connection with the Kudupu murder case.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm