ಬ್ರೇಕಿಂಗ್ ನ್ಯೂಸ್
06-05-25 04:02 pm Mangalore Correspondent ಕರಾವಳಿ
ಮಂಗಳೂರು, ಮೇ 5 : ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಯಾಗಿ ಕೊಂಚಾಡಿಯಲ್ಲಿ ಮೀನು ವ್ಯಾಪಾರಿಗೆ ಚೂರಿ ಇರಿತಕ್ಕೆ ಯತ್ನಿಸಿದ ಪ್ರಕರಣ ಸಂಬಂಧಿಸಿ ನಟೋರಿಯಸ್ ರೌಡಿ ಲೋಕಿ ಯಾನೆ ಲೋಕೇಶ್ ಕೋಡಿಕೆರೆ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಘೋಷಣೆ ಸಂದರ್ಭದಲ್ಲಿ ಬೆಳ್ಳಂಬೆಳಗ್ಗೆ ಮೀನು ವ್ಯಾಪಾರಿ ಮೊಹಮ್ಮದ್ ಲುಕ್ಮಾನ್ ಎಂಬ ಯುವಕನಿಗೆ ಹಲ್ಲೆಗೈದು ಕಲ್ಲು ಎತ್ತಿ ಹಾಕಿ ಕೊಲ್ಲುವ ಯತ್ನ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಬಂದಿದ್ದ ಆರು ಮಂದಿಯ ತಂಡ ಕೃತ್ಯ ನಡೆಸಿತ್ತು. ಆನಂತರ, ಸ್ಥಳೀಯ ಮಹಿಳೆಯೊಬ್ಬರು ಬೊಬ್ಬೆ ಹಾಕಿದ್ದರಿಂದ ಆಗಂತುಕರು ಯುವಕನನ್ನು ಬಿಟ್ಟು ಹೋಗಿದ್ದರು.
ಪ್ರಕರಣದಲ್ಲಿ ಲಿಖಿತ್, ರಾಕೇಶ್, ಧನರಾಜ್ ಮತ್ತು ಪ್ರಶಾಂತ್ ಶೆಟ್ಟಿ ಎಂಬ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇವರು ರೌಡಿ ಲೋಕಿಯ ಸಹಚರರಾಗಿದ್ದು, ಲೋಕಿ ಹೇಳಿದ್ದರಿಂದ ಈ ಕೃತ್ಯ ಮಾಡಿದ್ದೇವೆಂದು ಒಪ್ಪಿಕೊಂಡಿದ್ದರಿಂದ ಪೊಲೀಸರು ಲೋಕೇಶ್ ನನ್ನು ಬಂಧನ ಮಾಡಿದ್ದಾರೆ. ಇದೇ ವೇಳೆ, ಲೋಕೇಶ್ ಕೋಡಿಕೆರೆ ಫೋಟೋವನ್ನೂ ಜಾಲತಾಣದಲ್ಲಿ ಹಾಕಿ ಮುಂದಿನ ಟಾರ್ಗೆಟ್ ಇವನೇ ಎಂದು ಕೆಲವರು ಪೋಸ್ಟ್ ಹಾಕಿದ್ದು ವೈರಲ್ ಆಗಿತ್ತು.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ, ಎಲ್ಲ ಠಾಣೆಗಳ ವ್ಯಾಪ್ತಿಯಲ್ಲೂ ಕೋಮು ದ್ವೇಷದ ಪ್ರಕರಣಗಳ ಹಿನ್ನೆಲೆಯಿರುವ ಆರೋಪಿಗಳ ಲಿಸ್ಟ್ ಮಾಡಲಾಗಿದ್ದು, ಅವರ ಮೇಲೆ ನಿಗಾ ಇಡುವುದು, ಅಗತ್ಯ ಬಿದ್ದರೆ ವಶಕ್ಕೆ ಪಡೆಯುವುದನ್ನು ಮಾಡುತ್ತಿದ್ದಾರೆ. ಲೋಕೇಶ್ ಕೋಡಿಕೆರೆಯನ್ನೂ ಇದೇ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದು, ಈತನ ಸಹಚರರೇ ಕೃತ್ಯ ಎಸಗಿದ್ದು ಕಂಡುಬಂದಿದ್ದರಿಂದ ಅರೆಸ್ಟ್ ಮಾಡಿ ಜೈಲಿಗೆ ತಳ್ಳಿದ್ದಾರೆ. ಲೋಕಿ ವಿರುದ್ಧ ಸುರತ್ಕಲ್ ಮತ್ತು ಪಣಂಬೂರು ಠಾಣೆಗಳಲ್ಲಿ ರೌಡಿ ಲಿಸ್ಟ್ ಇದೆಯೆಂದು ಕಾವೂರು ಪೊಲೀಸರು ತಿಳಿಸಿದ್ದಾರೆ.
In a major operation aimed at preventing communal violence and maintaining law and order, Kavoor police have arrested notorious rowdy-sheeter Kodikere Loki. The arrest is part of an ongoing crackdown on individuals linked to old communal cases and those posing a threat to public peace in the region.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm