ಬ್ರೇಕಿಂಗ್ ನ್ಯೂಸ್
06-05-25 04:02 pm Mangalore Correspondent ಕರಾವಳಿ
ಮಂಗಳೂರು, ಮೇ 5 : ಸುಹಾಸ್ ಶೆಟ್ಟಿ ಕೊಲೆಗೆ ಪ್ರತಿಯಾಗಿ ಕೊಂಚಾಡಿಯಲ್ಲಿ ಮೀನು ವ್ಯಾಪಾರಿಗೆ ಚೂರಿ ಇರಿತಕ್ಕೆ ಯತ್ನಿಸಿದ ಪ್ರಕರಣ ಸಂಬಂಧಿಸಿ ನಟೋರಿಯಸ್ ರೌಡಿ ಲೋಕಿ ಯಾನೆ ಲೋಕೇಶ್ ಕೋಡಿಕೆರೆ ಎಂಬಾತನನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ.
ಮೇ 2ರಂದು ದಕ್ಷಿಣ ಕನ್ನಡ ಜಿಲ್ಲೆ ಬಂದ್ ಘೋಷಣೆ ಸಂದರ್ಭದಲ್ಲಿ ಬೆಳ್ಳಂಬೆಳಗ್ಗೆ ಮೀನು ವ್ಯಾಪಾರಿ ಮೊಹಮ್ಮದ್ ಲುಕ್ಮಾನ್ ಎಂಬ ಯುವಕನಿಗೆ ಹಲ್ಲೆಗೈದು ಕಲ್ಲು ಎತ್ತಿ ಹಾಕಿ ಕೊಲ್ಲುವ ಯತ್ನ ನಡೆದಿತ್ತು. ಇನ್ನೋವಾ ಕಾರಿನಲ್ಲಿ ಬಂದಿದ್ದ ಆರು ಮಂದಿಯ ತಂಡ ಕೃತ್ಯ ನಡೆಸಿತ್ತು. ಆನಂತರ, ಸ್ಥಳೀಯ ಮಹಿಳೆಯೊಬ್ಬರು ಬೊಬ್ಬೆ ಹಾಕಿದ್ದರಿಂದ ಆಗಂತುಕರು ಯುವಕನನ್ನು ಬಿಟ್ಟು ಹೋಗಿದ್ದರು.
ಪ್ರಕರಣದಲ್ಲಿ ಲಿಖಿತ್, ರಾಕೇಶ್, ಧನರಾಜ್ ಮತ್ತು ಪ್ರಶಾಂತ್ ಶೆಟ್ಟಿ ಎಂಬ ನಾಲ್ಕು ಮಂದಿಯನ್ನು ಪೊಲೀಸರು ಬಂಧಿಸಿದ್ದರು. ಇವರು ರೌಡಿ ಲೋಕಿಯ ಸಹಚರರಾಗಿದ್ದು, ಲೋಕಿ ಹೇಳಿದ್ದರಿಂದ ಈ ಕೃತ್ಯ ಮಾಡಿದ್ದೇವೆಂದು ಒಪ್ಪಿಕೊಂಡಿದ್ದರಿಂದ ಪೊಲೀಸರು ಲೋಕೇಶ್ ನನ್ನು ಬಂಧನ ಮಾಡಿದ್ದಾರೆ. ಇದೇ ವೇಳೆ, ಲೋಕೇಶ್ ಕೋಡಿಕೆರೆ ಫೋಟೋವನ್ನೂ ಜಾಲತಾಣದಲ್ಲಿ ಹಾಕಿ ಮುಂದಿನ ಟಾರ್ಗೆಟ್ ಇವನೇ ಎಂದು ಕೆಲವರು ಪೋಸ್ಟ್ ಹಾಕಿದ್ದು ವೈರಲ್ ಆಗಿತ್ತು.
ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾಲ್ ಸೂಚನೆಯಂತೆ, ಎಲ್ಲ ಠಾಣೆಗಳ ವ್ಯಾಪ್ತಿಯಲ್ಲೂ ಕೋಮು ದ್ವೇಷದ ಪ್ರಕರಣಗಳ ಹಿನ್ನೆಲೆಯಿರುವ ಆರೋಪಿಗಳ ಲಿಸ್ಟ್ ಮಾಡಲಾಗಿದ್ದು, ಅವರ ಮೇಲೆ ನಿಗಾ ಇಡುವುದು, ಅಗತ್ಯ ಬಿದ್ದರೆ ವಶಕ್ಕೆ ಪಡೆಯುವುದನ್ನು ಮಾಡುತ್ತಿದ್ದಾರೆ. ಲೋಕೇಶ್ ಕೋಡಿಕೆರೆಯನ್ನೂ ಇದೇ ಹಿನ್ನೆಲೆಯಲ್ಲಿ ವಶಕ್ಕೆ ಪಡೆದಿದ್ದು, ಈತನ ಸಹಚರರೇ ಕೃತ್ಯ ಎಸಗಿದ್ದು ಕಂಡುಬಂದಿದ್ದರಿಂದ ಅರೆಸ್ಟ್ ಮಾಡಿ ಜೈಲಿಗೆ ತಳ್ಳಿದ್ದಾರೆ. ಲೋಕಿ ವಿರುದ್ಧ ಸುರತ್ಕಲ್ ಮತ್ತು ಪಣಂಬೂರು ಠಾಣೆಗಳಲ್ಲಿ ರೌಡಿ ಲಿಸ್ಟ್ ಇದೆಯೆಂದು ಕಾವೂರು ಪೊಲೀಸರು ತಿಳಿಸಿದ್ದಾರೆ.
In a major operation aimed at preventing communal violence and maintaining law and order, Kavoor police have arrested notorious rowdy-sheeter Kodikere Loki. The arrest is part of an ongoing crackdown on individuals linked to old communal cases and those posing a threat to public peace in the region.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
05-11-25 05:27 pm
Bangalore Correspondent
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm