ಬ್ರೇಕಿಂಗ್ ನ್ಯೂಸ್
07-05-25 10:30 pm Mangalore Correspondent ಕರಾವಳಿ
ಮಂಗಳೂರು, ಮೇ 7 : ಮುಸ್ಲಿಮರ ಬಗ್ಗೆ ಅವಹೇಳನ ಹೇಳಿಕೆ ನೀಡಿದ್ದಾರೆಂದು ಉಪ್ಪಿನಂಗಡಿ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ ಮತ್ತು ಸಂಬಂಧಿಸಿದ ವಿಚಾರಣಾ ಪ್ರಕ್ರಿಯೆ ರದ್ಧತಿ ಕೋರಿ ಬೆಳ್ತಂಗಡಿ ಬಿಜೆಪಿ ಶಾಸಕ ಹರೀಶ್ ಪೂಂಜಾ ಹೈಕೋರ್ಟ್ ಮೆಟ್ಟಿಲೇರಿದ್ದು ಕೇಸಿಗೆ ತಡೆ ಕೋರಿದ್ದಾರೆ.
ಬೆಳ್ತಂಗಡಿ ತಾಲೂಕಿನ ತೆಕ್ಕಾರಿನ ಎಸ್.ಬಿ.ಇಬ್ರಾಹಿಂ ಸಲ್ಲಿಸಿರುವ ದೂರಿನಂತೆ ದಾಖಲಾಗಿರುವ ಎಫ್ಐಆರ್ ರದ್ದು ಕೋರಿ ಶಾಸಕ ಹರೀಶ್ ಪೂಂಜಾ ಸಲ್ಲಿಸಿರುವ ಅರ್ಜಿಯನ್ನು ಪರಿಗಣಿಸಲು ಅವರ ಪರ ವಕೀಲರು ನ್ಯಾಯಮೂರ್ತಿ ವಿ.ಶ್ರೀಶಾನಂದ ಅವರ ಮುಂದೆ ಬೇಡಿಕೆ ಇಟ್ಟರು. ಇದಕ್ಕೆ ಹೈಕೋರ್ಟ್ ಪೀಠ, ಇದು ಜನಪ್ರತಿನಿಧಿಗೆ ಸಂಬಂಧಿಸಿದ ಪ್ರಕರಣವಾಗಿದ್ದು, ಈ ನ್ಯಾಯಾಲಯಕ್ಕೆ ಇದರ ವ್ಯಾಪ್ತಿ ಬರುವುದಿಲ್ಲ. ಮುಖ್ಯ ನ್ಯಾಯಮೂರ್ತಿಗಳಿಂದ ನಿರ್ದೇಶನ ಪಡೆದು, ಒಪ್ಪಿಗೆ ಸಿಕ್ಕಿದರೆ ಅರ್ಜಿಯನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಹೇಳಿ ವಿಚಾರಣೆ ಮುಂದೂಡಿದರು.
ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶ ಕಾರ್ಯಕ್ರಮದಲ್ಲಿ ಮೇ 3ರಂದು ಹರೀಶ್ ಪೂಂಜಾ ಅವರು ತುಳು ಭಾಷೆಯಲ್ಲಿ "ತೆಕ್ಕಾರಿನ ಕಂತ್ರಿ ಬ್ಯಾರಿಗಳು ಟ್ಯೂಬ್ಲೈಟ್ ಒಡೆದಿದ್ದಾರೆ. ಜನರೇಟರ್ನ ಡೀಸೆಲ್ ಕದ್ದಿದ್ದಾರೆ ಎಂಬ ಬಗ್ಗೆ ಸ್ಥಳೀಯರಿಂದ ಮಾಹಿತಿ ಬಂದಿದೆ. ಬ್ರಹ್ಮಕಲಶೋತ್ಸವ ಮುಗಿಯುವ ವೇಳೆಗೆ ಕದ್ದಿರುವವರು ಯಾರು ಎಂಬ ಮಾಹಿತಿ ಬರುತ್ತದೆ. ನಮ್ಮಲ್ಲಿ ಸೌಹಾರ್ದತೆ ಬೇಕು. ನಾವು ಮಸೀದಿಗೆ ಹೋಗಿ ಆಮಂತ್ರಣ ಕೊಟ್ಟಿದ್ದರಿಂದ ಬ್ಯಾರಿಗಳು ಟ್ಯೂಬ್ ಒಡೆದಿದ್ದಾರೆ. ಅವರಿಗೆ ಆಮಂತ್ರಣ ನೀಡಬಾರದಿತ್ತು. ಕಾರ್ಯಕ್ರಮಕ್ಕೆ ಕರೆಯಬಾರದಿತ್ತು" ಎಂದು ಹೇಳಿದ್ದರು.
ಇಂತಹ ಹೇಳಿಕೆಯಿಂದ ಎರಡು ಸಮುದಾಯಗಳ ನಡುವೆ ದ್ವೇಷ ಹರಡಿದ್ದಾರೆ ಎಂದು ಎಸ್.ಬಿ. ಇಬ್ರಾಹಿಂ ಉಪ್ಪಿನಂಗಡಿ ಠಾಣೆಯಲ್ಲಿ ದೂರು ನೀಡಿದ್ದರು. ಇದನ್ನು ಆಧರಿಸಿ ಪೊಲೀಸರು ಹರೀಶ್ ಪೂಂಜಾ ವಿರುದ್ಧ ಬಿಎನ್ಎಸ್ ಸೆಕ್ಷನ್ 196, 353(2) ಅಡಿ ಪ್ರಕರಣ ದಾಖಲಿಸಿದ್ದಾರೆ.
MLA Harish Poonja Moves High Court Seeking Quashing of FIR Over Alleged Derogatory Remarks Against Muslims.
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm