ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
17-01-26 08:02 pm
HK News Desk
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
ಹೇಯ್ ಬೆಂಕಿ ಹಚ್ತೀನಿ.. ನಿಂಗೆ ಚಪ್ಪಲಿಲಿ ಹೊಡಿಸ್ತೀನ...
16-01-26 04:35 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm