ಬ್ರೇಕಿಂಗ್ ನ್ಯೂಸ್
08-05-25 10:54 pm Mangalore Correspondent ಕರಾವಳಿ
ಉಳ್ಳಾಲ, ಮೇ 8 : ಬಸ್ಸಿನಿಂದ ಇಳಿದು ರಸ್ತೆ ದಾಟುತ್ತಿದ್ದ ಮಹಿಳೆಯೋರ್ವರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ತೊಕ್ಕೊಟ್ಟು ಸಮೀಪದ ಪಂಡಿತ್ ಹೌಸಲ್ಲಿ ಗುರುವಾರ ರಾತ್ರಿ ನಡೆದಿದೆ.
ಪಂಡಿತ್ ಹೌಸ್ ನಿವಾಸಿ ಪೂರ್ಣಿಮ(59) ಮೃತ ಮಹಿಳೆ. ಪೂರ್ಣಿಮ ಅವರು ಇಂದು ಸಂಜೆ ಉಳ್ಳಾಲ ನಿವಾಸಿ ಜಯರಾಜ್ (ಪತಿಯ ಅಣ್ಣ) ಅವರ ಮನೆಗೆ ತೆರಳಿ ಬಸ್ಸಲ್ಲಿ ಹಿಂತಿರುಗಿ ಪಂಡಿತ್ ಹೌಸ್ ತಂಗುದಾಣದಲ್ಲಿ ಇಳಿದು ರಸ್ತೆ ದಾಟುವ ವೇಳೆ ಕೇರಳ ಮೂಲದ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಚಲಾಯಿಸುತ್ತಿದ್ದ ಕಾರೊಂದು ಢಿಕ್ಕಿ ಹೊಡೆದಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ಪೂರ್ಣಿಮಾ ಅವರ ಬಾವ ಜಯರಾಜ್ ಅವರ ಮಗನ ಮದುವೆ ಇದೇ ಮೇ 16 ರಂದು ನಿಗದಿಯಾಗಿತ್ತು. ಪೂರ್ಣಿಮಾ ಅವರು ಇಂದು ಅಕಾಲಿಕವಾಗಿ ಮೃತಪಟ್ಟಿರುವ ಪರಿಣಾಮ ಮದುವೆ ಮನೆಯಲ್ಲಿ ನೀರವ ಮೌನ ಮನೆ ಮಾಡಿದೆ. ಮೃತ ಪೂರ್ಣಿಮ ಅವರು ಪತಿ, ಓರ್ವ ಪುತ್ರನನ್ನ ಅಗಲಿದ್ದಾರೆ.
ಘಟನೆಗೆ ಪೈಪ್ ಲೈನ್ ಕಾಮಗಾರಿಯೇ ಕಾರಣ
ಪಂಡಿತ್ ಹೌಸ್ ಜಂಕ್ಷನಲ್ಲಿ ಪೈಪ್ ಲೈನ್ ಕಾಮಗಾರಿಗೆಂದು ಲೋಕೋಪಯೋಗಿ ರಸ್ತೆಯನ್ನೂ ಅಗೆದಿದ್ದು ಕಾರು ಚಾಲಕ ವಿಚಲಿತನಾಗಿ ಮಹಿಳೆಗೆ ಢಿಕ್ಕಿ ಹೊಡೆಯಲು ಕಾರಣವೆಂದು ಸ್ಥಳೀಯರು ಆರೋಪಿಸಿದ್ದಾರೆ. ಘಟನೆಗೆ ಉಳ್ಳಾಲ ನಗರಸಭೆ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣವೆಂದು ಬಿಜೆಪಿ ಮಂಗಳೂರು ಮಂಡಲದ ಮಾಜಿ ಅಧ್ಯಕ್ಷರಾದ ಚಂದ್ರಹಾಸ್ ಪಂಡಿತ್ ಹೌಸ್ ದೂರಿದ್ದಾರೆ.
Mangalore Woman Hit by Car While Crossing Road at ullal, Dies on the Spot, Ullal Wedding House Plunged into Silence. The deceased has been identified as Poornima (59).
13-05-25 09:50 pm
HK News Desk
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
Dr Subbanna Ayyappan Dead, Mandya: ಪದ್ಮಶ್ರೀ ಪ...
11-05-25 01:21 pm
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
13-05-25 08:47 pm
HK News Desk
ಪಾಕ್ ಅಣ್ವಸ್ತ್ರ ಗೋದಾಮಿನಲ್ಲಿ ವಿಕಿರಣ ಸೋರಿಕೆ ; ಅಮ...
13-05-25 06:46 pm
ಪಂಜಾಬ್ನಲ್ಲಿ ವಿಷಪೂರಿತ ಮದ್ಯ ಸೇವಿಸಿ 17 ಮಂದಿ ಬಲಿ...
13-05-25 04:39 pm
ಪಾಕಿಸ್ತಾನದಲ್ಲಿ ಬೆನ್ನು ಬೆನ್ನಿಗೆ ಭೂಕಂಪನ ; ಪರಮಾಣ...
13-05-25 02:51 pm
ಮೋದಿ ಎಚ್ಚರಿಕೆ ಬೆನ್ನಲ್ಲೇ ಮತ್ತೆ ಡ್ರೋಣ್ ದಾಳಿ ; ಕ...
12-05-25 11:21 pm
14-05-25 01:42 pm
Mangalore Correspondent
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
ಹೆದ್ದಾರಿ ಬದಿಯಲ್ಲಿ ಕಸ ಎಸೆಯುವವರ ಮೇಲೆ ನಿಗಾ ವಹಿಸಿ...
13-05-25 07:33 pm
ಕರಾವಳಿಗೆ ಮತ್ತೊಂದು ಸುಸಜ್ಜಿತ ವಿಮಾನ ನಿಲ್ದಾಣ ; ಕಾ...
12-05-25 08:22 pm
13-05-25 07:55 pm
HK News Desk
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm