ಬ್ರೇಕಿಂಗ್ ನ್ಯೂಸ್
20-12-20 11:11 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲೆಂದೇ ಉಳ್ಳಾಲದ ನೇತ್ರಾವತಿ ಸೇತುವೆಗೆ ಕಬ್ಬಿಣದ ಸರಳಿನ ಬೇಲಿ ಹಾಕಲಾಗಿತ್ತು. ಆದರೆ, ಸಾಯೋರನ್ನು ತಡೆಯಲಾಗದು ಎನ್ನುವಂತೆ ಬೇಲಿ ಇರುವ ಸೇತುವೆ ಬಿಟ್ಟು ಪಕ್ಕದ ನೇತ್ರಾವತಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆಗೈದ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ (68) ಆತ್ಮಹತ್ಯೆಗೈದ ದುರ್ದೈವಿ. ಶಾರದಾ ಗಟ್ಟಿ ಅವರು ಮೂಲತಃ ಉಚ್ಚಿಲದ ಸಂಕೊಳಿಗೆ ನಿವಾಸಿಯಾಗಿದ್ದು, ಈ ಹಿಂದೆ ಸಂಕೊಳಿಗೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಅವರ ಹೊಟೇಲ್ ಶಾರದಕ್ಕನ ಹೊಟೇಲ್ ಎಂದೇ ಪ್ರಸಿದ್ಧಿ ಪಡೆದಿತ್ತು. ಸದ್ಯ ಅವರು ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ನೆಲೆಸಿದ್ದರೆನ್ನಲಾಗಿದೆ.

ಕಳೆದ ಡಿ.15 ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾತಿ ಪೂಜೆಗೆ ತೆರಳಿದ್ದ ಶಾರದ ಅವರು ನಾಪತ್ತೆಯಾಗಿದ್ದರು. ಮನೆ ಮಂದಿ ಶಾರದ ಅವರು ಬೇರೆ ಮಕ್ಕಳ ಮನೆಗೆ ತೆರಳಿದ್ದಾರೆ ಎಂದು ಸುಮ್ಮನಿದ್ದರು. ಡಿ.20ರಂದು ಕೂಡ ಶಾರದ ಅವರು ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಇದೇ ವೇಳೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಅನಾಥ ವೃದ್ಧೆಯ ಶವ ಇರುವುದಾಗಿ ತಿಳಿಸಿದ್ದು ಮನೆಯವರು ತೆರಳಿ ವಿಚಾರಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿ ತೀರದಲ್ಲಿ ಡಿ.16ರಂದು ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಇದೀಗ ಆ ಶವವು ಶಾರದ ಗಟ್ಟಿಯವರದ್ದು ಎಂದು ತಿಳಿದು ಬಂದಿದೆ. ಖಿನ್ನತೆಯಿಂದ ಶಾರದ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ರಸ್ತೆಯ ಸೇತುವೆಯಲ್ಲಿ ಬೇಲಿ ಹಾಕಲಾಗಿದೆ. ಶವ ರೈಲ್ವೇ ಸೇತುವೆ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ಸಾವಿನ ದಾರಿ ಅತ್ತ ತಿರುಗಿದೆಯೇ ಅನ್ನುವ ಅನುಮಾನ ಉಂಟಾಗಿದೆ.
Old aged woman jumps off Netravati Bridge and her body has been recovered at ullal. The deceased has been identified as Sharada Gatti (68).
25-06-26 09:10 pm
HK News Staffer
ಗೃಹಲಕ್ಷ್ಮಿ ಯೋಜನೆಯಲ್ಲಿ ಭಾರೀ ಕಳ್ಳಾಟ ! 19 ಸಾವಿರ...
24-06-26 05:55 pm
ಅಡ್ಡ ಮತದಾನ ; ರಾಜ್ಯ ನಾಯಕತ್ವದ ನಿರ್ಲಕ್ಷ್ಯವೇ ಕಾರಣ...
23-06-26 05:58 pm
ಅಡ್ಡ ಮತದಾನ; ಧರ್ಮಸ್ಥಳದಲ್ಲಿ ಶಾಸಕರು ಬಂದು ಆಣೆ ಮಾಡ...
22-06-26 08:18 pm
ವಿಧಾನ ಪರಿಷತ್ ಚುನಾವಣೆಗೂ ಮುನ್ನ ರಹಸ್ಯ ಸಭೆ ; ಬಿಜೆ...
22-06-26 03:44 pm
25-06-26 12:13 pm
HK News Staffer
ಕೂಲ್ ಸಿಟಿ ಯುರೋಪಿನಲ್ಲೀಗ ಬಿಸಿಲ ಹೊಡೆತ ; ಫ್ರಾನ್ಸ್...
24-06-26 01:51 pm
ಮಾಹಿತಿ ಹಕ್ಕು ನಿಯಮಗಳಿಗೆ ಮಹಾರಾಷ್ಟ್ರ ಸರ್ಕಾರ ತಿದ್...
23-06-26 10:47 pm
ಟಿಎಂಸಿಯಲ್ಲಿ ರಾಜಕೀಯ ಭೂಕಂಪ ; ಮಮತಾ ಬ್ಯಾನರ್ಜಿ ಅಧ...
23-06-26 12:21 pm
ಕತಾರ್ ಕೈಗಾರಿಕಾ ಪ್ರದೇಶದಲ್ಲಿ ಭಾರೀ ಸ್ಫೋಟ ; 54 ಜನ...
22-06-26 12:55 pm
25-06-26 02:39 pm
HK News Staffer
ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ನಿಧನ; ‘ಸಮಾಜ ಕಳೆ...
23-06-26 06:02 pm
ಬಸ್ ಚಲಿಸುತ್ತಿದ್ದಾಗಲೇ ಬಿಪಿ ಲೋ ಆಗಿ ಕುಸಿದ ಚಾಲಕ !...
23-06-26 03:18 pm
ಮುಸ್ಲಿಮರಿಗೆ ಸಚಿವ ಸ್ಥಾನ ; ಕಾಂಗ್ರೆಸಿಗೆ ಓಟ್ ಹಾಕದ...
23-06-26 11:49 am
ಉಡುಪಿ ಕೋರ್ಟ್ಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ; ಕೆ...
22-06-26 05:23 pm
25-06-26 09:40 pm
HK News Staffer
ಮಂಡ್ಯದಲ್ಲಿ ಸೆಲ್ಫಿ ಹುಚ್ಚಿಗೆ ಐವರ ಬಲಿ ; ಕಾವೇರಿ ನ...
25-06-26 01:00 pm
ಹಸೆಮಣೆ ಏರಬೇಕಿದ್ದವಳೇ ಭಾವಿ ಪತಿಯನ್ನು ಫೋಟೊ ಶೂಟ್ ನ...
24-06-26 09:28 pm
30 ಲಕ್ಷ ಸಾಲ, ಲಿವ್-ಇನ್ ಸಂಬಂಧಕ್ಕೆ ಪೋಷಕರ ವಿರೋಧ ;...
24-06-26 08:53 pm
ರಾಮ ಮಂದಿರವನ್ನ ಸ್ಫೋಟಿಸಲು ಪ್ಲಾನ್ ಮಾಡಿದ್ವಿ ! ;...
24-06-26 07:53 pm