ಬ್ರೇಕಿಂಗ್ ನ್ಯೂಸ್
20-12-20 11:11 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲೆಂದೇ ಉಳ್ಳಾಲದ ನೇತ್ರಾವತಿ ಸೇತುವೆಗೆ ಕಬ್ಬಿಣದ ಸರಳಿನ ಬೇಲಿ ಹಾಕಲಾಗಿತ್ತು. ಆದರೆ, ಸಾಯೋರನ್ನು ತಡೆಯಲಾಗದು ಎನ್ನುವಂತೆ ಬೇಲಿ ಇರುವ ಸೇತುವೆ ಬಿಟ್ಟು ಪಕ್ಕದ ನೇತ್ರಾವತಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆಗೈದ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ (68) ಆತ್ಮಹತ್ಯೆಗೈದ ದುರ್ದೈವಿ. ಶಾರದಾ ಗಟ್ಟಿ ಅವರು ಮೂಲತಃ ಉಚ್ಚಿಲದ ಸಂಕೊಳಿಗೆ ನಿವಾಸಿಯಾಗಿದ್ದು, ಈ ಹಿಂದೆ ಸಂಕೊಳಿಗೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಅವರ ಹೊಟೇಲ್ ಶಾರದಕ್ಕನ ಹೊಟೇಲ್ ಎಂದೇ ಪ್ರಸಿದ್ಧಿ ಪಡೆದಿತ್ತು. ಸದ್ಯ ಅವರು ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ನೆಲೆಸಿದ್ದರೆನ್ನಲಾಗಿದೆ.

ಕಳೆದ ಡಿ.15 ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾತಿ ಪೂಜೆಗೆ ತೆರಳಿದ್ದ ಶಾರದ ಅವರು ನಾಪತ್ತೆಯಾಗಿದ್ದರು. ಮನೆ ಮಂದಿ ಶಾರದ ಅವರು ಬೇರೆ ಮಕ್ಕಳ ಮನೆಗೆ ತೆರಳಿದ್ದಾರೆ ಎಂದು ಸುಮ್ಮನಿದ್ದರು. ಡಿ.20ರಂದು ಕೂಡ ಶಾರದ ಅವರು ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಇದೇ ವೇಳೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಅನಾಥ ವೃದ್ಧೆಯ ಶವ ಇರುವುದಾಗಿ ತಿಳಿಸಿದ್ದು ಮನೆಯವರು ತೆರಳಿ ವಿಚಾರಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿ ತೀರದಲ್ಲಿ ಡಿ.16ರಂದು ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಇದೀಗ ಆ ಶವವು ಶಾರದ ಗಟ್ಟಿಯವರದ್ದು ಎಂದು ತಿಳಿದು ಬಂದಿದೆ. ಖಿನ್ನತೆಯಿಂದ ಶಾರದ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ರಸ್ತೆಯ ಸೇತುವೆಯಲ್ಲಿ ಬೇಲಿ ಹಾಕಲಾಗಿದೆ. ಶವ ರೈಲ್ವೇ ಸೇತುವೆ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ಸಾವಿನ ದಾರಿ ಅತ್ತ ತಿರುಗಿದೆಯೇ ಅನ್ನುವ ಅನುಮಾನ ಉಂಟಾಗಿದೆ.
Old aged woman jumps off Netravati Bridge and her body has been recovered at ullal. The deceased has been identified as Sharada Gatti (68).
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm