ಬ್ರೇಕಿಂಗ್ ನ್ಯೂಸ್
20-12-20 11:11 pm Mangaluru Correspondent ಕರಾವಳಿ
ಉಳ್ಳಾಲ, ಡಿ.20: ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲೆಂದೇ ಉಳ್ಳಾಲದ ನೇತ್ರಾವತಿ ಸೇತುವೆಗೆ ಕಬ್ಬಿಣದ ಸರಳಿನ ಬೇಲಿ ಹಾಕಲಾಗಿತ್ತು. ಆದರೆ, ಸಾಯೋರನ್ನು ತಡೆಯಲಾಗದು ಎನ್ನುವಂತೆ ಬೇಲಿ ಇರುವ ಸೇತುವೆ ಬಿಟ್ಟು ಪಕ್ಕದ ನೇತ್ರಾವತಿಯ ರೈಲ್ವೇ ಸೇತುವೆಯಿಂದ ನದಿಗೆ ಹಾರಿ ವೃದ್ಧೆ ಆತ್ಮಹತ್ಯೆಗೈದ ಶಂಕಿತ ಪ್ರಕರಣ ಬೆಳಕಿಗೆ ಬಂದಿದೆ.
ಕೋಟೆಕಾರಿನ ಮಾಡೂರು ನಿವಾಸಿ ಶಾರದಾ ಗಟ್ಟಿ (68) ಆತ್ಮಹತ್ಯೆಗೈದ ದುರ್ದೈವಿ. ಶಾರದಾ ಗಟ್ಟಿ ಅವರು ಮೂಲತಃ ಉಚ್ಚಿಲದ ಸಂಕೊಳಿಗೆ ನಿವಾಸಿಯಾಗಿದ್ದು, ಈ ಹಿಂದೆ ಸಂಕೊಳಿಗೆಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದರು. ಅವರ ಹೊಟೇಲ್ ಶಾರದಕ್ಕನ ಹೊಟೇಲ್ ಎಂದೇ ಪ್ರಸಿದ್ಧಿ ಪಡೆದಿತ್ತು. ಸದ್ಯ ಅವರು ಮಾಡೂರಿನಲ್ಲಿರುವ ಮಗಳ ಮನೆಯಲ್ಲಿ ನೆಲೆಸಿದ್ದರೆನ್ನಲಾಗಿದೆ.

ಕಳೆದ ಡಿ.15 ರಂದು ಉಚ್ಚಿಲ ಸಂಕೋಳಿಗೆಯ ತರವಾಡಿನ ಮನೆಗೆ ಸಂಕ್ರಾತಿ ಪೂಜೆಗೆ ತೆರಳಿದ್ದ ಶಾರದ ಅವರು ನಾಪತ್ತೆಯಾಗಿದ್ದರು. ಮನೆ ಮಂದಿ ಶಾರದ ಅವರು ಬೇರೆ ಮಕ್ಕಳ ಮನೆಗೆ ತೆರಳಿದ್ದಾರೆ ಎಂದು ಸುಮ್ಮನಿದ್ದರು. ಡಿ.20ರಂದು ಕೂಡ ಶಾರದ ಅವರು ಮನೆಗೆ ಹಿಂದಿರುಗದ ಹಿನ್ನಲೆಯಲ್ಲಿ ಉಳ್ಳಾಲ ಠಾಣೆಯಲ್ಲಿ ದೂರು ಕೊಟ್ಟಿದ್ದರು. ಇದೇ ವೇಳೆ, ಜಿಲ್ಲಾ ವೆನ್ಲಾಕ್ ಆಸ್ಪತ್ರೆಯಲ್ಲಿ ಅನಾಥ ವೃದ್ಧೆಯ ಶವ ಇರುವುದಾಗಿ ತಿಳಿಸಿದ್ದು ಮನೆಯವರು ತೆರಳಿ ವಿಚಾರಿಸಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ನೇತ್ರಾವತಿ ನದಿ ತೀರದಲ್ಲಿ ಡಿ.16ರಂದು ಅಪರಿಚಿತ ವೃದ್ಧೆಯ ಶವ ಪತ್ತೆಯಾಗಿದ್ದು ಶವವನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಇರಿಸಲಾಗಿತ್ತು. ಇದೀಗ ಆ ಶವವು ಶಾರದ ಗಟ್ಟಿಯವರದ್ದು ಎಂದು ತಿಳಿದು ಬಂದಿದೆ. ಖಿನ್ನತೆಯಿಂದ ಶಾರದ ಅವರು ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆಗೈದಿದ್ದಾರೆಂದು ಹೇಳಲಾಗುತ್ತಿದೆ. ಆದರೆ, ರಸ್ತೆಯ ಸೇತುವೆಯಲ್ಲಿ ಬೇಲಿ ಹಾಕಲಾಗಿದೆ. ಶವ ರೈಲ್ವೇ ಸೇತುವೆ ಬಳಿ ಪತ್ತೆಯಾಗಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ. ಹಾಗಾಗಿ ಸಾವಿನ ದಾರಿ ಅತ್ತ ತಿರುಗಿದೆಯೇ ಅನ್ನುವ ಅನುಮಾನ ಉಂಟಾಗಿದೆ.
Old aged woman jumps off Netravati Bridge and her body has been recovered at ullal. The deceased has been identified as Sharada Gatti (68).
26-10-25 07:33 pm
Bangalore Correspondent
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
"ಎ" ಖಾತೆ ಪರಿವರ್ತಿಸುವ ಸರ್ಕಾರದ ಬೋಗಸ್ ಸ್ಕೀಂ ;...
25-10-25 09:00 pm
ಸಿಎಂ ಬದಲಾವಣೆ ಹೇಳಿಕೆಯ ಬಗ್ಗೆ ಯತೀಂದ್ರನನ್ನು ಕೇಳ್ದ...
24-10-25 09:35 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
26-10-25 04:42 pm
Mangalore Correspondent
ಮುಸ್ಲಿಂ ಮಹಿಳೆಯರಿಗೆ ಅವಮಾನ ಆರೋಪ ; ಆರೆಸ್ಸೆಸ್ ಮುಖ...
26-10-25 02:12 pm
ಚಿತ್ತಾಪುರದಲ್ಲಿ ಆರೆಸ್ಸೆಸ್ ಪಥಸಂಚಲನ ಆಗೇ ಆಗುತ್ತೆ,...
25-10-25 08:08 pm
SIT Dharmasthala Case, Soujanya Case: ಎಸ್ಐಟಿ...
25-10-25 05:02 pm
ಸುಬ್ರಹ್ಮಣ್ಯ - ಸಕಲೇಶಪುರದಲ್ಲಿ ರೈಲ್ವೇ ವಿದ್ಯುದೀಕರ...
25-10-25 02:36 pm
25-10-25 10:00 pm
Bangalore Correspondent
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm