ಬ್ರೇಕಿಂಗ್ ನ್ಯೂಸ್
16-05-25 10:06 am Mangalore Correspondent ಕರಾವಳಿ
ಮಂಗಳೂರು, ಮೇ 16 : ಮಂಗಳೂರು ಬಂದರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಸಮುದ್ರ ಮಧ್ಯೆ ಮುಳುಗಡೆಯಾಗಿದ್ದು ಅದರಲ್ಲಿದ್ದ ಸಿಬ್ಬಂದಿಯನ್ನು ಲಕ್ಷದ್ವೀಪದ ಮೀನುಗಾರರು ರಕ್ಷಣೆ ಮಾಡಿದ್ದಾರೆ.
ಮೇ 12ರಂದು ಲಕ್ಷದ್ವೀಪ ಹೊರಟಿದ್ದ ಸರಕು ಹಡಗು ಅಲ್ಲಿಂದ ಸುಮಾರು 60 ನಾಟಿಕಲ್ ಮೈಲು ದೂರದಲ್ಲಿದ್ದಾಗ ಮುಳುಗಡೆಯಾಗಿತ್ತು. ಹಡಗಿನಲ್ಲಿದ್ದ ತುರ್ತು ರಕ್ಷಣಾ ನೌಕೆಯ ಮೂಲಕ ಪಾರಾಗಿದ್ದು ಬಳಿಕ ಸ್ಥಳೀಯ ಮೀನುಗಾರರು ಮತ್ತು ಕರಾವಳಿ ರಕ್ಷಣಾ ಪಡೆ ಕಾರ್ಯಾಚರಣೆ ನಡೆಸಿ, ಮೇ 18ರಂದು ಆರು ಸಿಬ್ಬಂದಿಯನ್ನು ರಕ್ಷಣೆ ಮಾಡಿದ್ದಾರೆ.
ಮಂಗಳೂರು ಬಂದರಿನಿಂದ ಸಿಮೆಂಟ್, ಮರಳು, ತರಕಾರಿ ಹಾಗೂ ನಿರ್ಮಾಣ ಸಾಮಗ್ರಿ ಹೊತ್ತು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ 18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ.
ಹಡಗು ಮುಳುಗಿದ್ದರಿಂದ ಸಿಬ್ಬಂದಿ ಮೂರು ದಿನಗಳ ಕಾಲ ಸಮುದ್ರದಲ್ಲಿ ಆಹಾರವಿಲ್ಲದೇ ಕಳೆದಿದ್ದರು. ಕಲ್ಪೇಣಿ ದ್ವೀಪದ ಮೀನುಗಾರರು ಸಮುದ್ರದಲ್ಲಿ ಸಿಲುಕಿದ್ದ ಹಡಗಿನ ಕ್ಯಾಪ್ಟನ್ ಭಾಸ್ಕರನ್ ಹಾಗೂ ಸಿಬ್ಬಂದಿಯಾದ ನಾಗಲಿಂಗಂ, ನಲ್ಲಮುತ್ತು ಗೋಪಾಳ್, ಮಂಡಿದೇವನ್ ವೇಲು, ವಿಘ್ನೇಶ್, ಅಜಿತ್ ಕುಮಾರ್ ಎಸ್., ಕುಪ್ಪುರಾಮನ್, ಎಂ.ಮುರುಗನ್ ಅವರನ್ನು ರಕ್ಷಣೆ ಮಾಡಿದ್ದರು. ಪಾತಿಯನ್ನು ತಮ್ಮ ಮೀನುಗಾರಿಕಾ ದೋಣಿಯ ಮೂಲಕ ಕಲ್ಪೇಣಿ ದ್ವೀಪಕ್ಕೆ ಕರೆದೊಯ್ದು ಕರಾವಳಿ ರಕ್ಷಣಾ ಪಡೆಗೆ ಮಾಹಿತಿ ನೀಡಿದ್ದರು. ರಕ್ಷಣೆ ಮಾಡಲಾದ ಸಿಬ್ಬಂದಿಯನ್ನು ಕರಾವಳಿ ರಕ್ಷಣಾ ಪಡೆಯ ಕೊಚ್ಚಿ ನೆಲೆಗೆ ಕರೆದೊಯ್ಯಲಾಗಿದೆ’ ಎಂದು ಮಂಗಳೂರಿನ ಬಂದರು ದಕ್ಕೆಯ ಲತೀಫ್ ಬೆಂಗರೆ ತಿಳಿಸಿದ್ದಾರೆ.
‘ಹಡಗು ಮುಳುಗಿದ ಬಗ್ಗೆ ಮಂಗಳೂರು ಮತ್ತು ಲಕ್ಷದ್ವೀಪದ ಕರಾವಳಿ ರಕ್ಷಣಾ ಪಡೆಗೆ ಸಂತ್ರಸ್ತ ಮೀನುಗಾರರು ಮಾಹಿತಿ ನೀಡಿದ್ದರು. ಕರಾವಳಿ ರಕ್ಷಣಾ ಪಡೆಯ ಸಿಬ್ಬಂದಿ ಕಡಲಿನಲ್ಲಿ ಸಿಲುಕಿದ್ದ ಸಿಬ್ಬಂದಿಗಾಗಿ ಮೇ 15ರಿಂದ 17ರ ವರೆಗೆ ಹುಡುಕಾಟ ನಡೆಸಿದ್ದರು. ಆದರೂ ಅವರು ಪತ್ತೆಯಾಗಿರಲಿಲ್ಲ’ ಎಂದರು.
Mangalore Cargo Ship Bound for Lakshadweep Sinks; Fishermen Rescue Crew After 3 Days Without Food or Water.
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 03:35 pm
Mangalore Correspondent
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm