ಬ್ರೇಕಿಂಗ್ ನ್ಯೂಸ್
19-05-25 09:41 pm Mangalore Correspondent ಕರಾವಳಿ
ಉಳ್ಳಾಲ, ಮೇ 19 : ತಲೆಯ ಕೂದಲು ನಿರಂತರ ಉದುರುತ್ತಿರುವುದರಿಂದ ಜೀವನದಲ್ಲಿ ಜಿಗುಪ್ಸೆಗೊಂಡಿದ್ದೇನೆ. ನನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವನಿಗೆ ದಾನ ಮಾಡುವಂತೆ ಡೆತ್ ನೋಟ್ ಬರೆದಿಟ್ಟು ಅವಿವಾಹಿತನೋರ್ವ ಮನೆ ಸಮೀಪದ ಶಾಲೆಯ ಛಾವಣಿಯ ಕಬ್ಬಿಣದ ಸಲಾಕೆಗೆ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ಕುರ್ನಾಡುವಿನಲ್ಲಿ ನಡೆದಿದೆ.
ಕುರ್ನಾಡು ಗ್ರಾಮದ ಹೂವಿನಕೊಪ್ಪಲ ನಿವಾಸಿ ದಿವಂಗತ ರಾಮ ಎಂಬವರ ಪುತ್ರ ಸುಧೀರ್ (32) ಆತ್ಮಹತ್ಯೆಗೈದ ಯುವಕ. ವೃತ್ತಿಯಲ್ಲಿ ಪೈಂಟರ್ ಆಗಿರುವ ಸುಧೀರ್ ಇಂದು ಬೆಳಗ್ಗೆ ಬಸ್ಸು ತಂಗುದಾಣದಲ್ಲಿ ಕುಳಿತಿರುವುದನ್ನ ಸ್ಥಳೀಯರು ಕಂಡಿದ್ದರು. ಸುಧೀರ್ ಮೊಬೈಲ್ ಹಾಗೂ ಪರ್ಸನ್ನ ಮನೆಯಲ್ಲೇ ಬಿಟ್ಟು ತೆರಳಿದ್ದನಂತೆ. ಬಳಿಕ ಕುರ್ನಾಡು ಶ್ರೀ ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯಲ್ಲಿ ಸುಧೀರ್ ನೇಣು ಬಿಗಿದುದನ್ನ ಅಂಗನವಾಡಿ ಶಿಕ್ಷಕಿ ನೋಡಿದ್ದಾರೆ.
ಕೊಣಾಜೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದು ಮೃತ ಸುಧೀರ್ ಅವರ ಶರ್ಟ್ ಜೇಬಲ್ಲಿ ಡೆತ್ ನೋಟ್ ದೊರೆತಿದೆ. ನನ್ನ ತಲೆ ಕೂದಲು ನಿರಂತರವಾಗಿ ಉದುರುತ್ತಿದ್ದು, ತನ್ನ ಕಿಡ್ನಿಗಳನ್ನ ಡಯಾಲಿಸಿಸ್ ಚಿಕಿತ್ಸೆ ಪಡೆಯುತ್ತಿರುವ ಬಾವ (ಅಕ್ಕನ ಗಂಡ)ನಿಗೆ ದಾನ ಮಾಡಿ. ಅಣ್ಣನ ಮದುವೆಯನ್ನ ಸಾಂಗವಾಗಿ ನಡೆಸಿ ಎಂದು ಡೆತ್ ನೋಟಲ್ಲಿ ಬರೆದಿರುವುದಾಗಿ ತಿಳಿದು ಬಂದಿದೆ.
ಇದೇ ಮೇ ತಿಂಗಳ 29 ರಂದು ಮೃತ ಸುಧೀರ್ ಅವರ ಅಣ್ಣನ ಮದುವೆ ಬೋಳಿಯಾರಿನ ಖಾಸಗಿ ಸಭಾಂಗಣದಲ್ಲಿ ನಿಗದಿಯಾಗಿತ್ತು. ಆದರೀಗ ಮನೆ ಮಗನ ಅಕಾಲಿಕ ಅಗಲಿಕೆಯಿಂದ ಮನೆ ಮಂದಿ ದಿಗ್ಬ್ರಾಂತರಾಗಿದ್ದಾರೆ. ಇನ್ನು ಸುಧೀರ್ ಸಾವಿಗೆ ಬೇರೆಯೇ ಕಾರಣಗಳಿವೆ ಎಂದು ಸ್ಥಳೀಯರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ದತ್ತಾತ್ರೇಯ ಅನುದಾನಿತ ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿಯಾಗಿದ್ದ ಸುಧೀರ್ ಅದೇ ಶಾಲೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ವಿಪರ್ಯಾಸ. ಕೂದಲು ಉದುರುವ ಸಮಸ್ಯೆಗಾಗಿ ಆತ್ಮಹತ್ಯೆಗೈದಿರುವುದನ್ನ ನನ್ನ ವೃತ್ತಿ ಜೀವನದಲ್ಲೇ ಮೊದಲು ಕೇಳಿರುವುದಾಗಿ ಕೊಣಾಜೆ ಠಾಣೆಯ ಹಿರಿಯ ಪೊಲೀಸ್ ಅಧಿಕಾರಿ ಹೇಳಿದ್ದಾರೆ.
Mangalore Youth Dies by Suicide After Hair Loss Struggle at Konaje, Donates Kidneys in Death Note. The deceased has been identified as Sudheer (32).
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm