ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
14-05-26 10:49 am
HK News Staffer
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; 30 ಸಾವಿರದಿಂದ 28...
13-05-26 09:25 pm
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm