ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.


ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 11:47 am
HK News Desk
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
ಇಂಗ್ಲಿಷ್ ಮತ್ತು ಯುರೋಪಿಯನ್ ಭಾಷೆಗಳಿಗೂ ಸಂಸ್ಕೃತವೇ...
16-01-26 02:26 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm