ಬ್ರೇಕಿಂಗ್ ನ್ಯೂಸ್
23-05-25 10:46 pm Mangalore Correspondent ಕರಾವಳಿ
ಮಂಗಳೂರು, ಮೇ 23:ಹಣ ದುರುಪಯೋಗ ಆಗಿರುವ ಆರೋಪದ ಹಿನ್ನೆಲೆಯಲ್ಲಿ ಪಿಲಿಕುಳ ನಿಸರ್ಗಧಾಮದ ಕಚೇರಿ ಮತ್ತು ಪಿಲಿಕುಳ ವಿಜ್ಞಾನ ಕೇಂದ್ರಕ್ಕೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಗಾನಾ ಪಿ. ಕುಮಾರ್ ನೇತೃತ್ವದಲ್ಲಿ ನಿರೀಕ್ಷಕರಾದ ಸುರೇಶ್ ಕುಮಾರ್ ಮತ್ತು ಭಾರತಿ ಜಿ. ಅವರು ದಾಳಿ ನಡೆಸಿದ್ದು, ಸುದೀರ್ಘ ಪರಿಶೀಲನೆ ನಡೆಸಿದ್ದಾರೆ. ಪಿಲಿಕುಳ ವಿಜ್ಞಾನ ಕೇಂದ್ರ ಮತ್ತು ನಿಸರ್ಗಧಾಮದ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಜೈವಿಕ ಉದ್ಯಾನವನ ಮತ್ತು ನಿಸರ್ಗಧಾಮದಲ್ಲಿ ಪ್ರಾಣಿಗಳ ಸಾಗಣೆ ಮತ್ತು ವಹಿವಾಟು ವಿಚಾರದಲ್ಲಿ ಹಣ ದುರುಪಯೋಗ ಆಗುತ್ತಿರುವ ಬಗ್ಗೆ ಹಿಂದಿನಿಂದಲೂ ದೂರುಗಳಿದ್ದವು.
ಪರಿಶೀಲನೆ ವೇಳೆ ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತದಲ್ಲಿ ಸಾಕಷ್ಟು ಲೋಪದೋಷ ಕಂಡುಬಂದಿದ್ದು, ಮುಖ್ಯವಾಗಿ ಮೃಗಾಲಯದಿಂದ ಹೆಚ್ಚಿನ ಆದಾಯ ಬರುತ್ತಿದ್ದರೂ ಪ್ರಾಧಿಕಾರವು ಮೃಗಾಲಯದ ಏಳಿಗೆಗೆ ಹಣವನ್ನು ವೆಚ್ಚ ಮಾಡುತ್ತಿರುವುದು ಕಂಡುಬರುವುದಿಲ್ಲ. ಅಲ್ಲಿನ ಸಿಬ್ಬಂದಿಯವರಿಗೆ ಕಡಿಮೆ ವೇತನ ನೀಡುತ್ತಿದ್ದು, ಯಾವುದೇ ಆರೋಗ್ಯ ಸೌಲಭ್ಯವನ್ನು ಒದಗಿಸದೆ ಇರುವುದು ಕಂಡುಬರುತ್ತದೆ. ಮೃಗಾಲಯದ ನಿರ್ವಹಣೆಯನ್ನು ಅರಣ್ಯ ಇಲಾಖೆಗೆ ಹಸ್ತಾಂತರಿಸಲು ಆದೇಶವಾಗಿದ್ದರೂ ಪ್ರಾಧಿಕಾರವು ಈವರೆಗೂ ಹಸ್ತಾಂತರಿಸದೆ ವಿಳಂಬ ಧೋರಣೆ ಮಾಡಿರುವುದು ಕಂಡುಬರುತ್ತದೆ.
ಅಲ್ಲದೆ, ಲೀಸ್ ಗೆ ಕೊಟ್ಟ ಕೆಲವು ಸಂಸ್ಥೆಗಳಿಂದ ಪ್ರಾಧಿಕಾರವು ತೆರಿಗೆ ಹಣ ಸಂಗ್ರಹಿಸದೆ ಇರುವುದು ಕಂಡುಬರುತ್ತದೆ. ಟೆಂಡರ್ ಪ್ರಕ್ರಿಯೆಯಲ್ಲಿ ಲೋಪ ಕಂಡುಬರುತ್ತಿದ್ದು ಈ ಬಗ್ಗೆ ಮಾಹಿತಿ ಸಂಗ್ರಹಿಸಿ ಸಮಗ್ರ ವರದಿಯನ್ನು ಲೋಕಾಯುಕ್ತ ಕೇಂದ್ರ ಕಚೇರಿಗೆ ವರದಿ ನಿವೇದಿಸಲಾಗುವುದು ಎಂಬುದಾಗಿ ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ತಿಳಿಸಿದ್ದಾರೆ.
Mangalore Misuse of Funds Allegation, Lokayukta Raid and Officials Inspection at Pilikula Nisargadham.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm