ಬ್ರೇಕಿಂಗ್ ನ್ಯೂಸ್
26-05-25 07:09 pm Bangalore Correspondent ಕರಾವಳಿ
ಮಂಗಳೂರು, ಮೇ 26 : ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸಿ ಬಜ್ಪೆ ಪೇಟೆಯಲ್ಲಿ ವಿಶ್ವ ಹಿಂದು ಪರಿಷತ್ ವತಿಯಿಂದ ಆಯೋಜಿಸಿದ್ದ ಜನಾಗ್ರಹ ಸಭೆಗೆ ಪೊಲೀಸ್ ಅನುಮತಿ ಪಡೆದಿರಲಿಲ್ಲವೆಂದು ಬಜ್ಪೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ವಿಶ್ವ ಹಿಂದು ಪರಿಷತ್ ಮತ್ತು ಬಜರಂಗದಳ ವತಿಯಿಂದ ಬಜ್ಪೆಯ ಶಾರದಾ ಮಂಟಪದ ಬಳಿ ಬಜ್ಪೆ ಚಲೋ ಎನ್ನುವ ಪ್ರತಿಭಟನಾ ಕಾರ್ಯಕ್ರಮ ಹಮ್ಮಿಕೊಂಡಿದ್ದರು. ಈ ಕಾರ್ಯಕ್ರಮಕ್ಕೆ ಪೊಲೀಸರ ಅನುಮತಿ ಪಡೆದಿರಲಿಲ್ಲ. ಪೊಲೀಸ್ ಅನುಮತಿ ಪಡೆಯದೆ ನಡೆಸಿದ ಕಾರ್ಯಕ್ರಮದಲ್ಲಿ ಮೂರು ಸಾವಿರದಷ್ಟು ಜನರು ಪಾಲ್ಗೊಂಡಿದ್ದರು. ಕಾನೂನು ವಿರುದ್ಧವಾಗಿ ಬಜ್ಪೆ ಪೇಟೆಯಲ್ಲಿ ಜನರು ಸೇರಿದ್ದು, ಆಮೂಲಕ ಬಜ್ಪೆಗೆ ಹೋಗುವ ಮತ್ತು ಹಿಂತಿರುಗುವ ದಾರಿಗಳನ್ನು ಮುಚ್ಚಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಪ್ರಯಾಣಿಕರಿಗೆ ಅಡಚಣೆಯಾಗಿತ್ತು.
ಇದಲ್ಲದೆ, ಪ್ರತಿಭಟನೆ ಸಂದರ್ಭದಲ್ಲಿ ಭಾಷಣಕಾರ ಶ್ರೀಕಾಂತ್ ಶೆಟ್ಟಿ ಪ್ರಚೋದನಕಾರಿ ಭಾಷಣ ಮಾಡಿದ್ದು, ಸುಹಾಸ್ ಶೆಟ್ಟಿ ಕೊಲೆಗೆ ಪ್ರತೀಕಾರ ತೀರಿಸಿಕೊಳ್ಳುವಂತೆ ಹೇಳಿ ಜನರನ್ನು ಪ್ರಚೋದಿಸಿದ್ದು, ಇದರಿಂದ ಕೋಮು ಸೌಹಾರ್ದ ಕದಡುವ ಯತ್ನ ಮಾಡಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಬಜ್ಪೆ ಠಾಣೆಯಲ್ಲಿ ಪೊಲೀಸರು ಆಯೋಜಕರು ಮತ್ತು ಭಾಷಣಕಾರನ ವಿರುದ್ಧ ಸುಮೋಟೊ ಪ್ರಕರಣ ದಾಖಲಿಸಿದ್ದಾರೆ. ಬಿಎನ್ಎಸ್ ಸೆಕ್ಷನ್ ಗಳಾದ 189(2), 191(2), 285, 192, 351(2), 351(3), 190 ಮತ್ತು ಕರ್ನಾಟಕ ಪೊಲೀಸ್ ಕಾಯ್ದೆ 107 ಮತ್ತು 109 ಪ್ರಕಾರ ಪ್ರಕರಣ ದಾಖಲಾಗಿದೆ.
Mangalore Bajpe Chalo Held Without Police Permission; FIR Filed Against Organizers and Speaker at Bajpe Station.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm