ಬ್ರೇಕಿಂಗ್ ನ್ಯೂಸ್
27-05-25 04:26 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಕುಪ್ಪೆಪದವು ಗ್ರಾಮದಲ್ಲಿ ಸ್ವಂತ ಮನೆ, ಭೂಮಿ ಇಲ್ಲದ ನೂರಾರು ಬಡ ಕುಟುಂಬಗಳು ದಶಕದಿಂದ ನಿವೇಶನಕ್ಕಾಗಿ ಪಂಚಾಯತ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದರು. ಆರು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಬಹಳ ತರಾತುರಿಯಿಂದ ಶಾಸಕ ಭರತ್ ಶೆಟ್ಟಿ 97 ಕುಟುಂಬಗಳಿಗೆ ನಿವೇಶನ ತೋರಿಸಿ ಹಕ್ಕು ಪತ್ರ ವಿತರಿಸಿದರು. ಆದರೆ, ಹಕ್ಕುಪತ್ರ ನೀಡಿ ಆರು ವರ್ಷ ಕಳೆದರೂ 97 ಕುಟುಂಬಳಿಗೂ ನಿವೇಶನ ಹಸ್ತಾಂತರ ಮಾಡಲಿಲ್ಲ.
ಕಾದು ಬಸವಳಿದ ಈ ಬಡ ಕುಟುಂಬಗಳು ಈಗ ಸ್ಥಳೀಯ ಕಾರ್ಮಿಕ ಸಂಘಟನೆಗಳು, ಸಿಪಿಐಎಂ ಮುಖಂಡರ ಮಾರ್ಗದರ್ಶನದಲ್ಲಿ ಹೋರಾಟ ಸಮಿತಿ ರಚಿಸಿ ಹೋರಾಟ ಶುರು ಮಾಡಿದ್ದಾರೆ. ಕಳೆದ ಜನವರಿಯಿಂದ ಧರಣಿ, ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕದ ಹಿನ್ನಲೆಯಲ್ಲಿ ಈಗ ಕುಪ್ಪೆಪದವು ಗ್ರಾಪಂ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.



ಭಾರೀ ಮಳೆಯನ್ನೂ ಲೆಕ್ಕಿಸದೆ ಬಡ ನಿವೇಶನ ಸಂತ್ರಸ್ತರು ಅನಿರ್ಧಿಷ್ಟಾವಧಿ ಧರಣಿಗೆ ಚಾಲನೆ ನೀಡಿದ್ದಾರೆ. ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಆದಷ್ಟು ಬೇಗ ನಿವೇಶನ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.
ರಾತ್ರಿಯೂ ಧರಣಿ ಮುಂದುವರಿಕೆ
ಕಳೆದ ಆರು ವರ್ಷಗಳಿಂದ ಭರವಸೆಗಳನ್ನಷ್ಟೆ ಕೇಳಿ ಭ್ರಮನಿರಸನ ಗೊಂಡಿರುವ ನಿವೇಶನ ರಹಿತರು ತಾಲೂಕು ಆಡಳಿತದ ಭರವಸೆಗೆ ಬಗ್ಗದೆ, ನಿವೇಶನ ಸ್ವಾಧೀನದ ಲಿಖಿತ ಪತ್ರ ನೀಡುವವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಾತ್ರಿ 8 ಗಂಟೆಯ ವರೆಗೂ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ದೃಢ ನಿಲುವಿನಿಂದ ವಾಪಸ್ ಆಗಿದ್ದಾರೆ. ಮೇ 27ರ ಮಂಗಳವಾರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Mangalore Indefinite Protest by Kuppepadavu Gram Panchayat Site Allottees Enters Second Day; No Sites Allotted Despite MLA's Assurances of Rights Certificates".
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm