ಬ್ರೇಕಿಂಗ್ ನ್ಯೂಸ್
27-05-25 04:26 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಕುಪ್ಪೆಪದವು ಗ್ರಾಮದಲ್ಲಿ ಸ್ವಂತ ಮನೆ, ಭೂಮಿ ಇಲ್ಲದ ನೂರಾರು ಬಡ ಕುಟುಂಬಗಳು ದಶಕದಿಂದ ನಿವೇಶನಕ್ಕಾಗಿ ಪಂಚಾಯತ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದರು. ಆರು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಬಹಳ ತರಾತುರಿಯಿಂದ ಶಾಸಕ ಭರತ್ ಶೆಟ್ಟಿ 97 ಕುಟುಂಬಗಳಿಗೆ ನಿವೇಶನ ತೋರಿಸಿ ಹಕ್ಕು ಪತ್ರ ವಿತರಿಸಿದರು. ಆದರೆ, ಹಕ್ಕುಪತ್ರ ನೀಡಿ ಆರು ವರ್ಷ ಕಳೆದರೂ 97 ಕುಟುಂಬಳಿಗೂ ನಿವೇಶನ ಹಸ್ತಾಂತರ ಮಾಡಲಿಲ್ಲ.
ಕಾದು ಬಸವಳಿದ ಈ ಬಡ ಕುಟುಂಬಗಳು ಈಗ ಸ್ಥಳೀಯ ಕಾರ್ಮಿಕ ಸಂಘಟನೆಗಳು, ಸಿಪಿಐಎಂ ಮುಖಂಡರ ಮಾರ್ಗದರ್ಶನದಲ್ಲಿ ಹೋರಾಟ ಸಮಿತಿ ರಚಿಸಿ ಹೋರಾಟ ಶುರು ಮಾಡಿದ್ದಾರೆ. ಕಳೆದ ಜನವರಿಯಿಂದ ಧರಣಿ, ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕದ ಹಿನ್ನಲೆಯಲ್ಲಿ ಈಗ ಕುಪ್ಪೆಪದವು ಗ್ರಾಪಂ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.



ಭಾರೀ ಮಳೆಯನ್ನೂ ಲೆಕ್ಕಿಸದೆ ಬಡ ನಿವೇಶನ ಸಂತ್ರಸ್ತರು ಅನಿರ್ಧಿಷ್ಟಾವಧಿ ಧರಣಿಗೆ ಚಾಲನೆ ನೀಡಿದ್ದಾರೆ. ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಆದಷ್ಟು ಬೇಗ ನಿವೇಶನ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.
ರಾತ್ರಿಯೂ ಧರಣಿ ಮುಂದುವರಿಕೆ
ಕಳೆದ ಆರು ವರ್ಷಗಳಿಂದ ಭರವಸೆಗಳನ್ನಷ್ಟೆ ಕೇಳಿ ಭ್ರಮನಿರಸನ ಗೊಂಡಿರುವ ನಿವೇಶನ ರಹಿತರು ತಾಲೂಕು ಆಡಳಿತದ ಭರವಸೆಗೆ ಬಗ್ಗದೆ, ನಿವೇಶನ ಸ್ವಾಧೀನದ ಲಿಖಿತ ಪತ್ರ ನೀಡುವವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಾತ್ರಿ 8 ಗಂಟೆಯ ವರೆಗೂ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ದೃಢ ನಿಲುವಿನಿಂದ ವಾಪಸ್ ಆಗಿದ್ದಾರೆ. ಮೇ 27ರ ಮಂಗಳವಾರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Mangalore Indefinite Protest by Kuppepadavu Gram Panchayat Site Allottees Enters Second Day; No Sites Allotted Despite MLA's Assurances of Rights Certificates".
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm