ಬ್ರೇಕಿಂಗ್ ನ್ಯೂಸ್
27-05-25 04:26 pm Mangalore Correspondent ಕರಾವಳಿ
ಮಂಗಳೂರು, ಮೇ 27 : ಕುಪ್ಪೆಪದವು ಗ್ರಾಮದಲ್ಲಿ ಸ್ವಂತ ಮನೆ, ಭೂಮಿ ಇಲ್ಲದ ನೂರಾರು ಬಡ ಕುಟುಂಬಗಳು ದಶಕದಿಂದ ನಿವೇಶನಕ್ಕಾಗಿ ಪಂಚಾಯತ್ ಗೆ ಅರ್ಜಿ ಸಲ್ಲಿಸಿ ಕಾಯುತ್ತಿದ್ದರು. ಆರು ವರ್ಷಗಳ ಹಿಂದೆ ಚುನಾವಣಾ ಪೂರ್ವದಲ್ಲಿ ಬಹಳ ತರಾತುರಿಯಿಂದ ಶಾಸಕ ಭರತ್ ಶೆಟ್ಟಿ 97 ಕುಟುಂಬಗಳಿಗೆ ನಿವೇಶನ ತೋರಿಸಿ ಹಕ್ಕು ಪತ್ರ ವಿತರಿಸಿದರು. ಆದರೆ, ಹಕ್ಕುಪತ್ರ ನೀಡಿ ಆರು ವರ್ಷ ಕಳೆದರೂ 97 ಕುಟುಂಬಳಿಗೂ ನಿವೇಶನ ಹಸ್ತಾಂತರ ಮಾಡಲಿಲ್ಲ.
ಕಾದು ಬಸವಳಿದ ಈ ಬಡ ಕುಟುಂಬಗಳು ಈಗ ಸ್ಥಳೀಯ ಕಾರ್ಮಿಕ ಸಂಘಟನೆಗಳು, ಸಿಪಿಐಎಂ ಮುಖಂಡರ ಮಾರ್ಗದರ್ಶನದಲ್ಲಿ ಹೋರಾಟ ಸಮಿತಿ ರಚಿಸಿ ಹೋರಾಟ ಶುರು ಮಾಡಿದ್ದಾರೆ. ಕಳೆದ ಜನವರಿಯಿಂದ ಧರಣಿ, ಪ್ರತಿಭಟನೆ ನಡೆಸಿದರೂ ನ್ಯಾಯ ದೊರಕದ ಹಿನ್ನಲೆಯಲ್ಲಿ ಈಗ ಕುಪ್ಪೆಪದವು ಗ್ರಾಪಂ ಮುಂಭಾಗ ಅನಿರ್ಧಿಷ್ಟಾವಧಿ ಧರಣಿ ಹಮ್ಮಿಕೊಂಡಿದ್ದಾರೆ.



ಭಾರೀ ಮಳೆಯನ್ನೂ ಲೆಕ್ಕಿಸದೆ ಬಡ ನಿವೇಶನ ಸಂತ್ರಸ್ತರು ಅನಿರ್ಧಿಷ್ಟಾವಧಿ ಧರಣಿಗೆ ಚಾಲನೆ ನೀಡಿದ್ದಾರೆ. ತಾಲೂಕು ಕಾರ್ಯ ನಿರ್ವಹಣಾಧಿಕಾರಿ, ತಹಶೀಲ್ದಾರ್ ಧರಣಿ ಸ್ಥಳಕ್ಕೆ ಆಗಮಿಸಿ ಸಮಸ್ಯೆ ಆಲಿಸಿದ್ದಾರೆ. ಆದಷ್ಟು ಬೇಗ ನಿವೇಶನ ವಿತರಿಸುವುದಾಗಿ ಭರವಸೆ ನೀಡಿದ್ದಾರೆ.
ರಾತ್ರಿಯೂ ಧರಣಿ ಮುಂದುವರಿಕೆ
ಕಳೆದ ಆರು ವರ್ಷಗಳಿಂದ ಭರವಸೆಗಳನ್ನಷ್ಟೆ ಕೇಳಿ ಭ್ರಮನಿರಸನ ಗೊಂಡಿರುವ ನಿವೇಶನ ರಹಿತರು ತಾಲೂಕು ಆಡಳಿತದ ಭರವಸೆಗೆ ಬಗ್ಗದೆ, ನಿವೇಶನ ಸ್ವಾಧೀನದ ಲಿಖಿತ ಪತ್ರ ನೀಡುವವರೆಗೆ ಧರಣಿ ಕೈ ಬಿಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ರಾತ್ರಿ 8 ಗಂಟೆಯ ವರೆಗೂ ಮನವೊಲಿಸಲು ಯತ್ನಿಸಿದ ಅಧಿಕಾರಿಗಳು ಪ್ರತಿಭಟನಾಕಾರರ ದೃಢ ನಿಲುವಿನಿಂದ ವಾಪಸ್ ಆಗಿದ್ದಾರೆ. ಮೇ 27ರ ಮಂಗಳವಾರ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.
Mangalore Indefinite Protest by Kuppepadavu Gram Panchayat Site Allottees Enters Second Day; No Sites Allotted Despite MLA's Assurances of Rights Certificates".
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm