ಬ್ರೇಕಿಂಗ್ ನ್ಯೂಸ್
28-05-25 05:27 pm Mangalore Correspondent ಕರಾವಳಿ
ಮಂಗಳೂರು, ಮೇ 28 : ದಕ್ಷಿಣ ಕನ್ನಡ ಜಿಲ್ಲಾ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಉಪ ನಿರ್ದೇಶಕಿ ಮತ್ತು ಹಿರಿಯ ಭೂವಿಜ್ಞಾನಿ ಆಗಿರುವ ಕಡು ಭ್ರಷ್ಟ ಮಹಿಳಾ ಅಧಿಕಾರಿ ಕೃಷ್ಣವೇಣಿ ಒಂದು ವರ್ಷದ ಅಂತರದಲ್ಲಿ ಎರಡನೇ ಬಾರಿಗೆ ಲೋಕಾಯುಕ್ತ ಕೈಗೆ ಸಿಕ್ಕಿಬಿದ್ದಿದ್ದಾರೆ.
ಉಳ್ಳಾಲ ತಾಲೂಕಿನ ಇರಾ ಗ್ರಾಮದ ಸರ್ವೆ ನಂಬರ್ 279-5ರಲ್ಲಿ 1.39 ಎಕರೆ ಜಮೀನಿನ ಪೈಕಿ 35 ಸೆಂಟ್ಸ್ ಜಾಗದಲ್ಲಿ ಮನೆ ಕಟ್ಟುವುದಕ್ಕಾಗಿ ಅಲ್ಲಿದ್ದ ಕಲ್ಲುಗಳನ್ನು ತೆರವು ಮಾಡಲು ಗಣಿ ಇಲಾಖೆಯ ಅನುಮತಿ ಕೋರಿದ್ದರು. ಈ ಬಗ್ಗೆ 2024ರ ಅ.28ರಂದು ಗಣಿ ಇಲಾಖೆಗೆ ಅರ್ಜಿ ಸಲ್ಲಿಸಿದ್ದು ಅನುಮತಿ ಪತ್ರ ನೀಡಿರಲಿಲ್ಲ. ವಿಚಾರಿಸಲು ಗಣಿ ಇಲಾಖೆಗೆ ಹೋದಾಗ ಉಪ ನಿರ್ದೇಶಕಿ ಕೃಷ್ಣವೇಣಿ ತನ್ನ ಕೊಠಡಿಗೆ ಸಿಬಂದಿ ಪ್ರದೀಪ್ ಎಂಬವರನ್ನು ಕರೆಸಿ, ಈ ಫೈಲಿಗೆ 50 ಸಾವಿರ ತೆಗೆದುಕೊಳ್ಳಿ ಎಂದು ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ನೊಂದ ಅರ್ಜಿದಾರ ಇದರ ಬಗ್ಗೆ ಮಂಗಳೂರು ಲೋಕಾಯುಕ್ತ ಇಲಾಖೆಗೆ ದೂರು ಸಲ್ಲಿಸಿದ್ದರು. ಮೇ 28ರಂದು ಅರ್ಜಿದಾರ ಲಂಚದ ಹಣ 50 ಸಾವಿರವನ್ನು ಮಲ್ಲಿಕಟ್ಟೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಕಚೇರಿಯಲ್ಲಿ ವಾಹನ ಚಾಲಕ ಮಧು ಎಂಬಾತನ ಮೂಲಕ ಕೃಷ್ಣವೇಣಿ ಪಡೆಯುತ್ತಿದ್ದಾಗಲೇ ಲೋಕಾಯುಕ್ತ ದಾಳಿ ಮಾಡಿದ್ದು, ರೆಡ್ ಹ್ಯಾಂಡ್ ಆಗಿ ಇಬ್ಬರನ್ನೂ ಬಂಧಿಸಿದ್ದಾರೆ. ಒಂದು ವರ್ಷದ ಹಿಂದೆ ಅಕ್ರಮ ಆಸ್ತಿ ಗಳಿಕೆ ವಿಚಾರದಲ್ಲಿ ಲೋಕಾಯುಕ್ತ ದಾಳಿ ಮಾಡಿ, ಬೆಂಗಳೂರು ಸೇರಿ ವಿವಿಧ ಕಡೆ 11 ಕೋಟಿಯಷ್ಟು ಆಸ್ತಿ ಪತ್ತೆ ಮಾಡಿದ್ದರು. ಅಕ್ರಮ ಆಸ್ತಿ ಪ್ರಕರಣದಲ್ಲಿ ಒಮ್ಮೆಗೆ ಬಂಧನ ಆದರೂ, ಈಕೆಯನ್ನು ಅದೇ ಜಾಗದಲ್ಲಿ ಮುಂದುವರಿಸಲಾಗಿತ್ತು. ಆಬಳಿಕ ಕಳೆದ ಜುಲೈ ತಿಂಗಳಲ್ಲಿ ಮಂಗಳೂರಿಗೆ ಬಂದಿದ್ದ ಉಪ ಲೋಕಾಯುಕ್ತ ವೀರಪ್ಪ ಅವರೂ ಕೃಷ್ಣವೇಣಿ ಬೇಜವಾಬ್ದಾರಿ ನಡೆಯ ಬಗ್ಗೆ ತರಾಟೆ ಎತ್ತಿಕೊಂಡಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರೂ ಇದೇ ಮಹಿಳಾ ಅಧಿಕಾರಿಯ ನಿರ್ಲಕ್ಷ್ಯ ಧೋರಣೆ ಬಗ್ಗೆ ಪ್ರಶ್ನಿಸಿದ್ದಲ್ಲದೆ, ಕ್ರಮಕ್ಕೆ ಜಿಲ್ಲಾಧಿಕಾರಿಗೆ ಸೂಚಿಸಿದ್ದರು.
ಆದರೆ ಭ್ರಷ್ಟಾಚಾರದಲ್ಲಿ ಸಿಕ್ಕಿಬಿದ್ದರೂ ಅದೇ ಅಧಿಕಾರಿಯನ್ನು ಮಂಗಳೂರಿನಲ್ಲಿ ವರ್ಷ ಕಳೆದರೂ ಉಳಿಸಿಕೊಂಡಿದ್ದೇ ನಮ್ಮ ವ್ಯವಸ್ಥೆಯ ಅಣಕ. ಕನಿಷ್ಠ ಹಿಂಬಡ್ತಿ ಕೊಟ್ಟು ಎಲ್ಲಿಗಾದರೂ ವರ್ಗಾವಣೆಯಾದ್ರೂ ಮಾಡಬೇಕಿತ್ತು. ಇದೀಗ ಎರಡನೇ ಬಾರಿಗೆ ಮಂಗಳೂರಿನಲ್ಲಿಯೇ ಕೃಷ್ಣವೇಣಿ ಲೋಕಾಯುಕ್ತ ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದಿದ್ದಾರೆ. ಮಾನ ಮರ್ಯಾದೆ ಇಲ್ಲದೆ ಜನಸಾಮಾನ್ಯರಿಂದ ಹಣಕ್ಕಾಗಿ ಪೀಡಿಸುತ್ತಿರುವ ಇಂಥವರನ್ನು ಸಸ್ಪೆಂಡ್ ಮಾಡೋದಲ್ಲ, ವಜಾನೇ ಮಾಡಬೇಕು. ಲೋಕಾಯುಕ್ತ ಪ್ರಭಾರ ಎಸ್ಪಿ ಕುಮಾರಚಂದ್ರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ಗಾನ ಪಿ. ಕುಮಾರ್, ಪೊಲೀಸ್ ನಿರೀಕ್ಷಕರಾದ ಸುರೇಶ್ ಕುಮಾರ್, ಭಾರತಿ ಜಿ., ಚಂದ್ರಶೇಖರ್ ಕೆ.ಎನ್, ಉಡುಪಿ ಜಿಲ್ಲಾ ಲೋಕಾಯುಕ್ತ ನಿರೀಕ್ಷಕರಾದ ಮಂಜುನಾಥ, ರಾಜೇಂದ್ರ ನಾಯಕ್ ಮತ್ತು ಸಿಬಂದಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
Corrupt Officer krishaveni in Mangalore Mines Department Caught by Lokayukta for Second Time in a Year. The Deputy Director of the Department of Mines and Geology in Mangaluru, along with two staff members, was caught by the Lokayukta Police for allegedly demanding a bribe of Rs 50,000 to approve a land-leveling permit. The officials caught were Deputy Director Krishnaveni, staff member Pradeep, and the department driver Madhu.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
09-09-25 11:09 pm
HK News Desk
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
09-09-25 10:47 pm
Mangalore Correspondent
Mangalore Accident, Kulur, NHAI: ಕುಳೂರು ರಸ್ತೆ...
09-09-25 08:01 pm
YouTuber Munaf, SIT, Dharmasthala Case: ಎಸ್ಐಟ...
09-09-25 05:59 pm
Mangalore, NHAI, Padmaraj: ಇನ್ನೆಷ್ಟು ಜೀವ ಬಲಿಯ...
09-09-25 05:14 pm
MLA Vedavyas Kamath, Mangalore, Yakshangana:...
09-09-25 04:47 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm