ಬ್ರೇಕಿಂಗ್ ನ್ಯೂಸ್
30-05-25 08:44 am Mangaluru Correspondent ಕರಾವಳಿ
ಉಳ್ಳಾಲ, ಮೇ 30: ನಿನ್ನೆ ರಾತ್ರಿಯಿಡೀ ನಿರಂತರ ಸುರಿದ ಧಾರಾಕಾರ ಮಳೆಗೆ ಉಳ್ಳಾಲ ತಾಲೂಕಿನಾದ್ಯಂತ ಜಲಪ್ರಳಯ ಉಂಟಾಗಿದೆ. ಮಳೆ ಅವಾಂತರಕ್ಕೆ ಬೆಳ್ಮ ಗ್ರಾಮದ ಕಾನಕರೆ ಎಂಬಲ್ಲಿ ಕಂಪೌಂಡ್ ಗೋಡೆ ಮನೆ ಮೇಲೆ ಕುಸಿದ ಪರಿಣಾಮ ಬಾಲಕಿಯೊಬ್ಬಳು ದಾರುಣ ಸಾವನ್ನಪ್ಪಿದ ಘಟನೆ ನಡೆದಿದೆ. ಮಂಜನಾಡಿ ಬಳಿಯ ಮೊಂಟೆಪದವು ಸಮೀಪದ ಕೋಡಿ ಎಂಬಲ್ಲಿ ಮನೆ ಮೇಲೆ ಗುಡ್ಡ ಜರಿದು ಮಹಿಳೆ ಮೃತಪಟ್ಟಿದ್ದು, ಉಳಿದವರ ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಕಾನಕೆರೆ ನಿವಾಸಿ ನೌಶಾದ್ ಎಂಬವರ ಪುತ್ರಿ ಫಾತಿಮ ನಯೀಮ(10) ಮೃತಪಟ್ಟ ಬಾಲಕಿ. ಕಾನಕರೆಯ ನೌಶಾದ್ ಅವರ ಮನೆಗೆ ಹಿಂಬದಿ ಗುಡ್ಡೆಯ ತಡೆಗೋಡೆ ಕುಸಿದು ಬಿದ್ದಿದ್ದು, ಮನೆಯ ಕೊಠಡಿಯ ಕಿಟಕಿ ಬಾಲಕಿಯ ಮೇಲೆ ಬಿದ್ದಿದೆ. ಬಾಲಕಿಯನ್ನ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ.
ಮಂಜನಾಡಿ ಗ್ರಾಮದ ಮೊಂಟೆಪದವು ಕೋಡಿಯಲ್ಲಿ ಗುಡ್ಡ ಜರಿದ ಪರಿಣಾಮ ಮಣ್ಣಿನಡಿ ಸಿಲುಕಿದ್ದ ಕಾಂತಪ್ಪ ಪೂಜಾರಿ ಅವರ ಪತ್ನಿ ಪ್ರೇಮ (50) ಮೃತಪಟ್ಟಿದ್ದಾರೆ. ಕಾಂತಪ್ಪ ಪೂಜಾರಿ ಅವರ ಕುಟುಂಬ ಮಲಗಿದ್ದ ಕೊಠಡಿಯ ಭಾಗಕ್ಕೆ ಗುಡ್ಡ ಜರಿದು ಬಿದ್ದ ಪರಿಣಾಮ ದುರಂತ ಸಂಭವಿಸಿದೆ. ಕಾಂತಪ್ಪ ಪೂಜಾರಿ ಕಾಲು ಮುರಿದಿದ್ದು ಗಂಭೀರ ಸ್ಥಿತಿಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಒಬ್ಬರು ಮಹಿಳೆ ಮತ್ತು ಇಬ್ಬರು ಮಕ್ಕಳು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾರೆ ಎಂದು ತಿಳಿದುಬಂದಿದ್ದು, ಘಟನಾ ಸ್ಥಳಕ್ಕೆ ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಭೇಟಿ ನೀಡಿದ್ದು ರಕ್ಷಣಾ ಕಾರ್ಯ ಮುಂದುವರಿದಿದೆ.
ಉಳ್ಳಾಲ ಬೈಲಿನಲ್ಲೂ ಕೃತಕ ನೆರೆಯಿಂದ ಹಲವು ಮನೆಗಳು ಜಲಾವೃತಗೊಂಡಿವೆ. ಮೊಗವೀರ ಸಮುದಾಯದವರು ಬೋಟ್ ಗಳನ್ನ ಬಳಸಿ ಮನೆಯೊಳಗೆ ಸಿಲುಕಿದವರನ್ನ ರಕ್ಷಿಸಿದ್ದಾರೆ. ಉಳ್ಳಾಲಬೈಲಿನಲ್ಲಿ ಕಾಲುವೆಗಳನ್ನು ಒತ್ತುವರಿ ಮಾಡಿದ್ದರಿಂದ ನೀರು ಹರಿಯಲಾಗದೆ ಕೃತಕ ನೆರೆ ಉಂಟಾಗಿದೆ. ತಾಲೂಕು ವ್ಯಾಪ್ತಿಯ ಕುಂಪಲ, ಪಿಲಾರು, ಕಲ್ಲಾಪು, ಧರ್ಮನಗರ, ತಲಪಾಡಿ, ಕಲ್ಕಟ್ಟ ಪ್ರದೇಶಗಳಲ್ಲು ಕೃತಕ ನೆರೆ ಬಂದಿದ್ದು ತಗ್ಗು ಪ್ರದೇಶಗಳು ಮುಳುಗಡೆಯಾಗಿವೆ. ನಿರಂತರ ಮಳೆ ಮತ್ತು ಕೃತಕ ನೆರೆಯಿಂದಾಗಿ ಜನಜೀವನ ಅಸ್ತವ್ಯಸ್ತ ಗೊಂಡಿದೆ. ಬಹಳಷ್ಟು ಕುಟುಂಬಗಳು ರಾತ್ರಿ ವೇಳೆ ಬೇರೆಡೆ ಸ್ಥಳಾಂತರಗೊಂಡಿದೆ.
ಕಲ್ಲಾಪುವಿನಲ್ಲಿ 50ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ತಲಪಾಡಿಯಲ್ಲಿ ಒಂದು ಮನೆಗೆ ನೀರು ನುಗ್ಗಿ ಹಾನಿಯಾಗಿದೆ. ಅಲ್ಲಿನ ಕುಟುಂಬವನ್ನು ರಾತ್ರಿ ವೇಳೆ ಸ್ಥಳಾಂತರ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ತಾಲೂಕು ತಹಶೀಲ್ದಾರ್ ಪುಟ್ಟರಾಜು, ಕಂದಾಯ ನಿರೀಕ್ಷಕ ಪ್ರಮೋದ್, ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ, ಗ್ರಾಮ ಕರಣಿಕ ಸುರೇಶ್ ಮತ್ತಿತರರು ರಾತ್ರಿ ವೇಳೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Continuous heavy rains through the night have caused severe flooding across Ullal taluk. In Kanakare, Belma village, a compound wall collapsed on a house, tragically killing a young girl. In Kodi near Montepadavu, a landslide struck a house, leading to the death of a woman. Rescue operations are ongoing for others who may be trapped.
24-06-25 01:53 pm
Bangalore Correspondent
Kodi Sri ; ರಾಜ್ಯದಲ್ಲಿ ಸಂಕ್ರಾಂತಿ ಬಳಿಕ ರಾಜಕೀಯ ವ...
22-06-25 07:52 pm
Heart Attack, Hassan: ಊಟಕ್ಕೆ ಕುಳಿತುಕೊಳ್ಳುವಾಗ...
22-06-25 12:36 pm
Iran Attack Illegal,War, CM Siddaramaiah; ಇರಾ...
21-06-25 02:48 pm
ಗುತ್ತಿಗೆ ಮೀಸಲು ಹೆಚ್ಚಳ ಬೆನ್ನಲ್ಲೇ ಅಲ್ಪಸಂಖ್ಯಾತರಿ...
20-06-25 10:36 am
24-06-25 12:03 pm
HK News Desk
ಅಮೆರಿಕದ ಮೇಲೆ ತಿರುಗಿಬಿದ್ದ ಇರಾನ್ ! ಕತಾರ್ನಲ್ಲಿರ...
24-06-25 01:02 am
NEET ಪರೀಕ್ಷೆಯಲ್ಲಿ ಮಗಳಿಗೆ ಕಡಿಮೆ ಅಂಕ ; ಕೂಲಿನಿಂದ...
23-06-25 08:54 pm
Rapper Tommy Genesis, Controversy: ಹಿಂದು ದೇವತ...
23-06-25 04:37 pm
VP Jagdeep Dhankhar; ಜೂನ್ 25 ಸಂವಿಧಾನ ಹತ್ಯೆಗೈದ...
22-06-25 07:48 pm
24-06-25 01:36 pm
Mangalore Correspondent
Iran Qatar, War, Mangalore Flight: ಗಲ್ಫ್ ರಾಷ್...
24-06-25 11:19 am
Zakariya Jokatte, Mangalore: ಮಂಗಳೂರಿನಲ್ಲಿ ಸ್ಕ...
23-06-25 11:01 pm
Udupi BJP, Kishore Kumar: ಉಡುಪಿ ಬಿಜೆಪಿಯಲ್ಲಿ ಬ...
23-06-25 10:28 pm
Journalist Vijay Kotian, Brand Mangalore Awar...
23-06-25 09:48 pm
23-06-25 08:51 pm
HK News Desk
Manipal, Udupi Murder: ಮಣಿಪಾಲ ; ಹೆತ್ತ ತಾಯಿಯನ್...
23-06-25 11:47 am
Sandhya Pavithra Nagaraj Fraud; ಸೌಜನ್ಯಾ ಹೆಸರಿ...
21-06-25 08:58 pm
Crime Mangalore, Bantwal Attack, Fake News; ಬ...
21-06-25 12:21 pm
Brahmavar, Udupi Murder, Crime: ಪತ್ನಿಗೆ ಮೊಬೈಲ...
20-06-25 02:04 pm