ಬ್ರೇಕಿಂಗ್ ನ್ಯೂಸ್
30-05-25 05:18 pm Mangalore Correspondent ಕರಾವಳಿ
ಮಂಗಳೂರು, ಮೇ 30 : ಉಡುಪಿಯಲ್ಲಿ ಎರಡು ವರ್ಷಗಳಿಂದ ಎಸ್ಪಿ ಆಗಿ ಗಮನಸೆಳೆದ ಡಾ.ಅರುಣ್ ಕೆ. ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಎಸ್ಪಿ ಯತೀಶ್ ಅವರು ಅರುಣ್ ಅವರಿಗೆ ಅಧಿಕಾರ ಹಸ್ತಾಂತರಿಸಿದ್ದಾರೆ.
ಇದೇ ವೇಳೆ, ಹೇಳಿಕೆ ಬಿಡುಗಡೆ ಮಾಡಿದ ನೂತನ ಎಸ್ಪಿ ಅರುಣ್ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಲಾಗುವುದು. ಮತೀಯ ಪ್ರಕರಣ, ನೈತಿಕ ಪೊಲೀಸ್ ಗಿರಿ ಪ್ರಕರಣಗಳ ಬಗ್ಗೆಯೂ ಗಂಭೀರ ಪರಿಗಣಿಸಲಾಗುವುದು. ಅದೇ ರೀತಿ ರೌಡಿ ಶೀಟರ್ ಗಳ ಚಲನವಲನಗಳ ಮೇಲೆ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುವವರ ಮೇಲೆ ನಿಗಾ ಇರಿಸಲಾಗುವುದು ಎಂದು ತಿಳಿಸಿದ್ದಾರೆ.
ಅಕ್ರಮ ಗೋಹತ್ಯೆ/ಸಾಗಾಟ, ಮಾದಕ ಪದಾರ್ಥಗಳ ಸಾಗಾಟ/ಮಾರಾಟ/ಸೇವನೆ, ಅಕ್ರಮ ಗಣಿಗಾರಿಕೆ, ಗ್ಯಾಂಬ್ಲಿಂಗ್, ಬೆಟ್ಟಿಂಗ್ ಹಾಗೂ ಇನ್ನಿತರ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳು ಕಂಡುಬಂದಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು. ಸಾರ್ವಜನಿಕರಲ್ಲಿ ಯಾವುದೇ ಮಾಹಿತಿಗಳಿದ್ದಲ್ಲಿ ನೇರವಾಗಿ ನನ್ನ ಮೊಬೈಲ್ ಸಂಖ್ಯೆ: 9480805301 ಅಥವಾ ಕಚೇರಿ ಸಂಖ್ಯೆ: 0824-2220503ಗೆ ಮಾಹಿತಿ ನೀಡಬಹುದು ಎಂದು ಕೇಳಿಕೊಂಡಿದ್ದಾರೆ.
ಉಡುಪಿ ಜಿಲ್ಲೆಯ ಮಣಿಪಾಲದಲ್ಲಿ ನಡೆಯುತ್ತಿದ್ದ ರಾತ್ರಿ ಕಾರುಬಾರು, ರೌಡಿಗಳ ರಂಪಾಟ, ಗ್ಯಾಂಬ್ಲಿಂಗ್ ಗಳಿಗೆ ಎಸ್ಪಿ ಅರುಣ್ ತನ್ನ ಕಾರ್ಯ ಶೈಲಿಯಿಂದಲೇ ಕಡಿವಾಣ ಹಾಕಿದ್ದರು.
Mangalore IPS Dr Arun Takes Charge as Dakshina Kannada SP, Vows Crime Control, Urges Public to Report Illegal Activities.
14-07-25 10:44 pm
Bangalore Correspondent
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
Dr B Saroja Devi Death: 17ನೇ ವಯಸ್ಸಲ್ಲೇ ಚಿತ್ರರ...
14-07-25 12:50 pm
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
14-07-25 09:55 pm
Mangalore Correspondent
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm