ಬ್ರೇಕಿಂಗ್ ನ್ಯೂಸ್
21-12-20 05:57 pm Mangalore Correspondent ಕರಾವಳಿ
ಮಂಗಳೂರು, ಡಿ.21: ಈಗೆಲ್ಲಾ ಪ್ರೀ ವೆಡ್ಡಿಂಗ್ ಫೋಟೋಶೂಟ್ ಅನ್ನೋದು ವಿಚಿತ್ರ ಹುಚ್ಚು ಸೃಷ್ಟಿಸಿದೆ. ವಧು ವರರನ್ನು ಮಾಡೆಲ್ ಗಳ ರೀತಿ ಬಿಂಬಿಸಲು ಹೋಗಿ ಏನೋ ಗಿಮಿಕ್ ಮಾಡುವ ಸಾಹಸ ಮಾಡಿ, ವಿವಾದಕ್ಕೆ ಕಾರಣವಾಗುತ್ತಿದ್ದಾರೆ. ಕೆಲವು ಸನ್ನಿವೇಶಗಳಲ್ಲಿ ಆಕ್ರೋಶಕ್ಕೂ ಗುರಿಯಾಗುತ್ತಿದ್ದಾರೆ. ಕೇರಳದಲ್ಲಿ ನಡೆದಿರುವ ಹೊಸ ರೀತಿಯ ಫೋಟೊ ಶೂಟ್ ಒಂದು ಮತ್ತೆ ವಿವಾದಕ್ಕೆ ಸೃಷ್ಟಿಸಿದೆ.
ಯುವಜೋಡಿ ಋಷಿಗಳ ರೀತಿ ವೇಷ ತೊಟ್ಟು ಹಸಿಬಿಸಿ ದೃಶ್ಯಗಳನ್ನು ಸೆರೆ ಹಿಡಿಯಲಾಗಿದ್ದು ಫೋಟೊಗಳು ಭಾರೀ ವೈರಲ್ ಆಗಿದೆ. ತಿಂಗಳ ಹಿಂದೆ ಕೇರಳದಲ್ಲಿ ಇದೇ ರೀತಿ ಕಾಫಿ ತೋಟದಲ್ಲಿ ನಡೆಸಿದ್ದ ಪೋಸ್ಟ್ ವೆಡ್ಡಿಂಗ್ ಹಸಿಬಿಸಿ ಫೋಟೋ ಶೂಟ್ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿತ್ತು. ಇದೀಗ ಕೇರಳದ ಮತ್ತೊಂದು ಜೋಡಿ ಪ್ರೀವೆಡ್ಡಿಂಗ್ ಫೋಟೋಶೂಟ್ ನೆಪದಲ್ಲಿ ಹಿಂದುಗಳ ಋಷಿ ಪರಂಪರೆಯನ್ನು ಅಣಕಿಸುವ ರೀತಿ ಕಾನ್ಸೆಪ್ಟ್ ಇಟ್ಟುಕೊಂಡು ಕಾಡಿನ ಮಧ್ಯೆ ಚಿತ್ರ ವಿಚಿತ್ರ ಭಂಗಿಗಳಿಂದ ಫೋಟೊ ತೆಗೆಸಿಕೊಂಡಿದ್ದು ಹಿಂದು ಸಂಘಟನೆಗಳ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ.

ವಿಶ್ವಾಮಿತ್ರ ಮೇನಕೆಯರೋ ಎನ್ನುವಂತೆ ಯುವಕ - ಯುವತಿ ಋಷಿಗಳ ಬಟ್ಟೆ ಧರಿಸಿಕೊಂಡು ತೀರಾ ಕೆಳಮಟ್ಟದ ಹಸಿಬಿಸಿಯ ದೃಶ್ಯಗಳಿಗೆ ಪೋಸು ನೀಡಿದೆ. ಮಲಯಾಳಂ ಭಾಷೆಯ ಹಳೆಯ ವಯಸ್ಕರ ಚಿತ್ರಗಳನ್ನು ನೆನಪಿಸುವಂತಿದೆ ಅಲ್ಲಿನ ದೃಶ್ಯಗಳು. ಈ ಫೊಟೋಗಳು ಇನ್ಸ್ಟಾ ಗ್ರಾಮ್ ಮತ್ತು ಫೇಸ್ಬುಕ್ ನಲ್ಲಿ ಭಾರೀ ವೈರಲ್ ಆಗಿದ್ದು ಜನ ಕೆಟ್ಟದಾಗಿ ಕಮೆಂಟ್ ಮಾಡಿದ್ದಲ್ಲದೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಫೋಟೋಶೂಟ್ ಹೆಸರಿನಲ್ಲಿ ಹಿಂದೂ ಧರ್ಮೀಯರ ಭಾವನೆಗೆ ಧಕ್ಕೆ ತರಲಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ತ್ರಿಶ್ಯೂರಿನ ಋಗ್ವೇದ ಬ್ಯೂಟಿಕ್ ಎನ್ನುವ ಫೋಟೊ ಸ್ಟುಡಿಯೋ ಸಹಯೋಗದಲ್ಲಿ ನಡೆದ ಈ ಫೋಟೋ ಶೂಟ್ ಅನ್ನು 1988 ರಲ್ಲಿ ಮಲಯಾಳಂನಲ್ಲಿ ಬಂದಿದ್ದ ವೈಶಾಲಿ ಚಿತ್ರದಲ್ಲಿನ ದೃಶ್ಯಗಳನ್ನು ಮಾದರಿಯಾಗಿಟ್ಟು ಚಿತ್ರ ಸೆರೆಹಿಡಿಯಲಾಗಿದೆ ಎನ್ನಲಾಗಿದೆ. ತೃಶ್ಶೂರಿನ ಅಭಿಜಿತ್ ಹಾಗೂ ಮಾಯಾ ಎಂಬ ಯುವಜೋಡಿ ಪ್ರಿ ವೆಡ್ಡಿಂಗ್ ಶೂಟ್ ಗಾಗಿ ವಿಭಿನ್ನ ಪೋಸು ನೀಡಿ ಈಗ ಇಡೀ ಕೇರಳದಲ್ಲಿ ವೈರಲ್ ಆಗಿದ್ದಾರೆ.
Kerala Couple Photshoot in Rushis Costume lands in controversy after the pictures became viral on Social Media.
02-05-26 06:35 pm
HK News Staffer
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
ರಾಜ್ಯದಲ್ಲಿ ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ, ನಾನು ಸ...
30-04-26 08:16 pm
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
02-05-26 11:18 am
HK News Staffer
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
02-05-26 12:19 pm
HK News Staffer
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm
Rakesh Gladson Dsouza: ಮಂಗಳೂರಿನ ಯುವ ಉದ್ಯಮಿ ರಾ...
01-05-26 06:36 pm
ಮಕ್ಕಳ ಆಯೋಗ ಸಮಿತಿ ಸದಸ್ಯನಿಂದಲೇ ಹಲವು ಮಹಿಳೆಯರಿಗೆ...
01-05-26 01:45 pm