ಬ್ರೇಕಿಂಗ್ ನ್ಯೂಸ್
01-06-25 12:32 pm Mangalore Correspondent ಕರಾವಳಿ
ಮಂಗಳೂರು, ಜೂ 1: ಕೋಮು ವೈಷಮ್ಯದ ಕೊಲೆಗೆ ಪ್ರಚೋದನಕಾರಿ ಭಾಷಣವೇ ಕಾರಣ. ಅಂಥ ಭಾಷಣ ಮಾಡಿದವರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಮುಸ್ಲಿಂ ಮುಖಂಡರು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಗೆ ಮನವಿ ಸಲ್ಲಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಲು ಆಗಮಿಸಿದ್ದ ಸಚಿವರನ್ನು ಭೇಟಿಯಾಗಿ ನಾಯಕರು ಮನವಿ ಸಲ್ಲಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ಮುಖಂಡ ಜಿಎ ಬಾವಾ ಮಾತನಾಡಿ, ನಮ್ಮ ಜಿಲ್ಲೆಯಲ್ಲಿ ಶಾಂತಿ ಬೇಕು. ನಮ್ಮ ಮಕ್ಕಳು ಇಂಥ ಸ್ಥಿತಿಯಲ್ಲಿ ಬದುಕುವಂತೆ ಆಗಬಾರದು. ಯಾವುದೇ ಧರ್ಮ, ಜಾತಿ ಇರಲಿ, ಹಿಂದು- ಮುಸ್ಲಿಂ ಯಾರಿದ್ದರೂ ದ್ವೇಷದ ಭಾಷಣ ಮಾಡಿದರೆ ಕಠಿಣ ಕ್ರಮ ಜರುಗಿಸಿ. ಈ ರೀತಿಯ ಕೊಲೆ ಮುಂದೆ ಯಾವತ್ತೂ ಆಗದಂತೆ ಕಠಿಣ ಕ್ರಮ ಆಗಬೇಕಾಗಿದೆ. ನಮಗೆ ಸಿಎಂ ಸಿದ್ದರಾಮಯ್ಯ ಮೇಲೆ ವಿಶ್ವಾಸ ಇದೆ, ಹಾಗಾಗಿ ಮನವಿ ಕೊಟ್ಟಿದ್ದೇವೆ. ಪೊಲೀಸ್ ಇಲಾಖೆಯಲ್ಲೂ ಅಮೂಲಾಗ್ರ ಬದಲಾವಣೆ ಆಗಬೇಕೆಂದು ಬೇಡಿಕೆ ಇಟ್ಟಿದ್ದೇವೆ ಎಂದರು.



ಹಿರಿಯ ಮುಖಂಡ ಇಬ್ರಾಹಿಂ ಕೋಡಿಜಾಲ್ ಮಾತನಾಡಿ, ಕೋಮು ದ್ವೇಷದ ಕೊಲೆಗಳು ಯಾವತ್ತೂ ಆಗಬಾರದು. ಮುಸ್ಲಿಮರು ಶಾಂತಿ ಪ್ರಿಯರು. ಯಾರನ್ನೂ ಹಿಂಸಿಸುವ ಪ್ರವೃತ್ತಿ ನಮ್ಮಲ್ಲಿ ಇಲ್ಲ. ಆದರೆ ಇಂಥ ಸ್ಥಿತಿ ಬರುವುದಕ್ಕೆ ಪೊಲೀಸರ ವೈಫಲ್ಯವೇ ಕಾರಣ. ಕೆಲವು ಪೊಲೀಸ್ ಠಾಣೆಗಳಲ್ಲಿ 10-15 ವರ್ಷಗಳಿಂದ ಠಿಕಾಣಿ ಹೂಡಿದವರು ಇದ್ದಾರೆ. ಅವರನ್ನು ಬೇರೆ ಬೇರೆ ಜಿಲ್ಲೆಗಳಿಗೆ ವರ್ಗಾವಣೆ ಮಾಡಬೇಕು. ಹೆಡ್ ಕಾನ್ಸ್ ಟೇಬಲ್ ಆಗಿದ್ದವರು ರಾಜಕೀಯ ಬಲದಿಂದ ಎಸಿಪಿ ಅಧಿಕಾರಿಗೆ ಬೆದರಿಕೆ ಹಾಕುವ ಸ್ಥಿತಿಯಿದೆ. ಇದಕ್ಕೆಲ್ಲ ಕೊನೆ ಹಾಕಬೇಕು, ಹೊಸ ಅಧಿಕಾರಿ ಬಂದಿದ್ದಾರೆ. ನಮಗೆಲ್ಲ ವಿಶ್ವಾಸ ಇದೆ ಎಂದು ಹೇಳಿದರು.
ಕಾನೂನು ಬಿಗಿ ಮಾಡುತ್ತೇವೆ ; ಸಚಿವ
ಪೊಲೀಸ್ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಕ್ಕೆ ಹೇಳಿಕೆ ನೀಡಿದ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಶಾಸಕರು, ರಾಜಕೀಯ ಮುಖಂಡರು ಕೂಡ ಬಾಯಿಗೆ ಬಂದಂತೆ ಮಾತನಾಡಿ ಪ್ರಚೋದನೆ ಮಾಡುತ್ತಾರೆ. ಪೊಲೀಸರು ಎಫ್ಐಆರ್ ಮಾಡಿದ್ರೂ ಬೇಲ್ ಮೇಲೆ ಬರುತ್ತಾರೆ. ಇಂಥದ್ದಕ್ಕೆ ಕಡಿವಾಣ ಹಾಕಬೇಕಾಗಿದೆ. ಕಾನೂನು ಬಿಗಿಗೊಳಿಸಲು ತಜ್ಞರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೂ ಮನವರಿಕೆ ಮಾಡುತ್ತೇನೆ. ಈಗ ಇರುವ ಕಾನೂನಿನಲ್ಲಿ ಸ್ಪಷ್ಟತೆ ಇಲ್ಲದ್ದರಿಂದ ಈ ರೀತಿಯಾಗಿದೆ. ಮೂರು ಜಿಲ್ಲೆಗೆ ಕಾರ್ಯಪಡೆ ರಚನೆ ಮಾಡಲಾಗಿದೆ. ಇಲಾಖೆಯಲ್ಲಿ ಒಳ್ಳೆಯ ಹೆಸರಿರುವ ಅಧಿಕಾರಿಗಳನ್ನು ನೇಮಕ ಮಾಡಿದ್ದು, ಫುಲ್ ಪವರ್ ನೀಡಿದ್ದೇವೆ ಎಂದು ಹೇಳಿದ್ದಾರೆ.
Mangalore Amid rising tensions following a recent communal murder, Muslim leaders met Karnataka Minister Dinesh Gundu Rao, urging strict action against those delivering provocative speeches. They also demanded major reforms in the police department. Leaders expressed concern over long-standing police postings and political interference, calling for transfers and stricter accountability. Senior leaders like G.A. Bava and Ibrahim Kodijal emphasized the need for peace and justice, placing trust in CM Siddaramaiah.
07-02-26 05:09 pm
HK News Desk
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
Sanjana Bus Fire Accident, Nelamangala: ಮತ್ತೊ...
06-02-26 12:30 pm
ಭವಿಷ್ಯ ಹೇಳುವ ನೆಪದಲ್ಲಿ ಬೇಟೆ? ರೀಲ್ಸ್ ರಾಣಿಯ ಹಿಂದ...
05-02-26 05:52 pm
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
07-02-26 10:53 pm
HK News Desk
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
ಕೊರಿಯನ್ ವೆಬ್ ಸಿರೀಸ್ ವ್ಯಸನ, ತಂದೆಯ ಎರಡು ಕೋಟಿ ಸಾ...
06-02-26 08:47 pm
SBI ಬ್ಯಾಂಕ್ ಕಿತಾಪತಿ ; 2 ಕೋಟಿ ಮೌಲ್ಯದ ಚಿನ್ನ–ಬೆಳ...
06-02-26 08:17 pm
ನೇಪಾಳದ ಗಡಿಯಲ್ಲಿ ಮದುವೆ ದಿಬ್ಬಣ ಕರೆದೊಯ್ಯುತ್ತಿದ್ದ...
06-02-26 07:04 pm
07-02-26 12:55 pm
HK staffer
DK Shivakumar, Puttur: ಪಕ್ಷ ಏನು ಹೇಳುತ್ತೋ ಅದೇ...
07-02-26 11:53 am
ಬಿಜೆಪಿಯವರು ತಿಪ್ಪರಲಾಗ ಹೊಡೆದ್ರೂ ಅಧಿಕಾರಕ್ಕೆ ಬರಲ್...
06-02-26 10:56 pm
ಡಿಕೆಶಿ ಸಿಎಂ ಆಗಿಯೇ ಪುತ್ತೂರು ಕಾಂಗ್ರೆಸ್ ಕಚೇರಿ ಉದ...
06-02-26 10:42 pm
Veerendra Heggade, Dharmasthala: ಶಿವರಾತ್ರಿಗೆ...
06-02-26 09:01 pm
08-02-26 12:59 pm
Mangaluru Staffer
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm
ಫ್ರೀ ಫೈರ್ ಗೇಮ್ ಚಟ ; ಅಕ್ಕನ ಮಗನ ಕೊಂದಿದ್ದ ಮಾವ, ಪ...
07-02-26 10:48 pm
ಡಿಜಿಟಲ್ ಅರೆಸ್ಟ್ ; ಮಹಿಳೆಗೆ 15 ನಿಮಿಷದಲ್ಲಿ 50 ಲಕ...
07-02-26 10:07 pm
ಪುತ್ತೂರಿನಲ್ಲಿ ಒಂದು ಕ್ವಿಂಟಾಲ್ ಗಾಂಜಾ ವಶಕ್ಕೆ ; ಪ...
07-02-26 08:14 pm