ಬ್ರೇಕಿಂಗ್ ನ್ಯೂಸ್
21-12-20 06:26 pm Mangalore Correspondent ಕರಾವಳಿ
ಪುತ್ತೂರು, ಡಿ.21: ಆರೆಸ್ಸೆಸ್ ಹಿರಿಯ ಮುಖಂಡ ವೆಂಕಟರಮಣ ಹೊಳ್ಳ ಬೈಕ್ ಸ್ಕಿಡ್ ಆಗಿ ರಸ್ತೆಗೆ ಎಸೆಯಲ್ಪಟ್ಟು ಮೃತಪಟ್ಟಿದ್ದಾಗಿ ಸುದ್ದಿಯಾಗಿತ್ತು. ಆದರೆ, ಅಪಘಾತದ ಬೆನ್ನತ್ತಿ ಹೋದ ಪುತ್ತೂರು ಸಂಚಾರಿ ಪೊಲೀಸರು ಟಿಪ್ಪರ್ ಚಾಲಕನನ್ನು ಬಂಧಿಸಿದ್ದಾರೆ. ಹೊಳ್ಳರು ಬರೀ ಸ್ಕಿಡ್ ಆಗಿ ಬಿದ್ದು, ಮೃತಪಟ್ಟಿದ್ದಲ್ಲ. ಘಟನೆಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದ್ದೇ ಕಾರಣ ಎನ್ನೋದನ್ನು ಪತ್ತೆ ಮಾಡಿದ್ದಾರೆ.
ವೆಂಕಟರಮಣ ಹೊಳ್ಳ, ಡಿ.15ರಂದು ನಸುಕಿನ ವೇಳೆಗೆ ಪುತ್ತೂರಿನಿಂದ ಬಂಟ್ವಾಳಕ್ಕೆ ಬೈಕಿನಲ್ಲಿ ಬರುತ್ತಿದ್ದರು. ಈ ವೇಳೆ, ಮಾಣಿ ಬಳಿಯ ಪೋಳ್ಯ ಎಂಬಲ್ಲಿ ಹೆದ್ದಾರಿ ಮಧ್ಯೆ ಅಪಘಾತ ನಡೆದಿತ್ತು. ರಸ್ತೆ ಬದಿಗೆ ಬಿದ್ದಿದ್ದ ವೆಂಕಟರಮಣ ಅವರನ್ನು ಯಾರೋ ಗಮನಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳೀಯರು ಸೇರಿ ಆಸ್ಪತ್ರೆಗೂ ದಾಖಲು ಮಾಡಿದ್ದರು. ಆದರೆ, ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಅವರು ಮೃತಪಟಿದ್ದರು. ಘಟನೆ ಹೇಗೆ ನಡೆದಿದೆ ಎನ್ನೋದನ್ನು ಯಾರೂ ನೋಡಿದವರು ಇರಲಿಲ್ಲ.
ಆಸ್ಪತ್ರೆಯಲ್ಲಿ ಹೊಳ್ಳರನ್ನು ಪರೀಕ್ಷೆ ನಡೆಸಿದ ವೈದ್ಯರು ಘಟನೆ ಬಗ್ಗೆ ಸಂಶಯ ಪಟ್ಟಿದ್ದರು. ಬೈಕ್ ಸ್ಕಿಡ್ ಆಗಿ ಬಿದ್ದ ಗಾಯದ ರೀತಿ ಇಲ್ಲ. ತಲೆಯ ಭಾಗಕ್ಕೆ ಬಲವಾದ ಏಟು ಬಿದ್ದಿರುವಂತೆ ಕಾಣುತ್ತಿದೆ. ಯಾವುದೋ ವಾಹನ ಡಿಕ್ಕಿಯಾಗಿರುವ ಸಾಧ್ಯತೆ ಇದೆ ಎನ್ನುವ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ವೈದ್ಯರ ಮಾಹಿತಿಯಂತೆ, ಪುತ್ತೂರು ಸಂಚಾರಿ ಪೊಲೀಸರು ಅಪಘಾತದ ಬೆನ್ನು ಬಿದ್ದು ತನಿಖೆ ನಡೆಸಿದಾಗ, ನಸುಕಿನ ವೇಳೆಗೆ ಮರಳು ಸಾಗಿಸುವ ಟಿಪ್ಪರ್ ಲಾರಿ ಅದೇ ದಾರಿಯಲ್ಲಿ ಸಂಚರಿಸಿದ್ದು ಕಂಡುಬಂದಿದೆ. ಮರಳು ಸಾಗಿಸುವ ಟಿಪ್ಪರ್ ಲಾರಿಗಳಿಗೆ ಜಿಪಿಎಸ್ ಅಳವಡಿಸಿದ್ದು ಮತ್ತು ಲಾರಿ ಚಾಲಕರ ಮೊಬೈಲ್ ಟ್ರೇಸ್ ಆಗುವುದರಿಂದ ಪೊಲೀಸರು ಲೊಕೇಶನ್ ನೋಡಿದ್ದರು. ಅದೇ ಸಮಯದಲ್ಲಿ ಲಾರಿ ಸಂಚರಿಸಿದ್ದು ಕಂಡುಬಂದಿದ್ದರಿಂದ ಚಾಲಕನನ್ನು ಬಂಧಿಸಿದ್ದಾರೆ. ಬಂಧಿತ ಚಾಲಕನನ್ನು ಪಾಣಾಜೆ ನಿವಾಸಿ ಚರಣ್ ಕುಮಾರ್ ಎಂದು ಪೊಲೀಸರು ಗುರುತಿಸಿದ್ದಾರೆ.
ಮೇಲ್ನೋಟಕ್ಕೆ ಹಿಟ್ ಅಂಡ್ ರನ್ ಮಾಡಿರುವ ರೀತಿ ಪ್ರಕರಣ ಕಂಡುಬಂದಿದೆ. ಆದರೆ, ಆರೆಸ್ಸೆಸ್ ಗ್ರಾಮ ವಿಕಾಸ ವಿಭಾಗದ ಸಂಚಾಲಕರಾಗಿ, ಪುತ್ತೂರು, ಕಾಸರಗೋಡು, ಮಂಗಳೂರು ಭಾಗದಲ್ಲಿ ಜನಪ್ರಿಯತೆ ಗಳಿಸಿದ್ದ ವೆಂಕಟರಮಣ ಹೊಳ್ಳ ಅವರನ್ನು ಉದ್ದೇಶಪೂರ್ವಕವಾಗಿ ಮುಗಿಸಲಾಗಿದೆಯೇ ಎನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಚಾಲಕನನ್ನು ವಿಚಾರಣೆ ನಡೆಸುತ್ತಿದ್ದಾರೆ. ಯಾರಿಗೂ ಗೊತ್ತಾಗದೇ ಮುಚ್ಚಿ ಹೋಗುತ್ತಿದ್ದ ಪ್ರಕರಣವನ್ನು ಪೊಲೀಸರು ಪತ್ತೆ ಮಾಡಿದ್ದಕ್ಕೆ ಮೆಚ್ಚುಗೆಯೂ ವ್ಯಕ್ತವಾಗಿದೆ.
06-04-26 08:51 pm
HK News Staffer
ದಟ್ಟ ಕಾಡಿನ ಮಧ್ಯೆ ದಾರಿ ತಪ್ಪಿದ್ದ ಶರಣ್ಯ ಕಡೆಗೂ ಪತ...
05-04-26 10:45 pm
ತಡಿಯಂಡಮೋಳ್ ಬೆಟ್ಟಕ್ಕೆ ಚಾರಣ ತೆರಳಿದ್ದ ಶರಣ್ಯ ಮೂರು...
05-04-26 07:24 pm
ಟೋಲ್ ಬೂತ್ಗಳಲ್ಲಿ ಇನ್ಮುಂದೆ ಸಂಚಾರ ಸರಾಗ ; ದೇಶಾದ್...
04-04-26 07:33 pm
ಪಶ್ಚಿಮ ಏಷ್ಯಾ ಸಂಘರ್ಷ; ಭಾರತದ ರಾಜತಾಂತ್ರಿಕ ನಡೆಯನ್...
03-04-26 04:14 pm
06-04-26 06:16 pm
HK News Staffer
ಗಲ್ಫ್ ಯುದ್ಧ ಎಫೆಕ್ಟ್ ; ಇಸ್ರೇಲ್ ಗೆ ಏರ್ ಇಂಡಿಯಾ ವ...
06-04-26 06:09 pm
ಯುಎಇಯಿಂದ ಪಾಕಿಸ್ತಾನಕ್ಕೆ ಬಿಗ್ ಶಾಕ್ ; 2 ಬಿಲಿಯನ್...
05-04-26 12:37 pm
ಇರಾನ್ ಗೆ ಅಮೆರಿಕ ಮತ್ತೆ 48 ಗಂಟೆಗಳ ಗಡುವು ; ಒಂದು...
04-04-26 10:53 pm
ಅಣ್ಣಾಮಲೈ ಹೊರಗಿಟ್ಟು ಬಿಜೆಪಿ ಪಟ್ಟಿ ಬಿಡುಗಡೆ; ತಮಿಳ...
03-04-26 07:52 pm
06-04-26 07:58 pm
HK News Staffer
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
06-04-26 05:40 pm
HK News Staffer
ಆತ್ಮಹತ್ಯೆ ಮಾಡಿಕೊಂಡ ಪತ್ನಿಯನ್ನು ನೋಡಲು ಆಸ್ಪತ್ರೆಗ...
06-04-26 02:34 pm
ಹಂದಿ ಬೇಟೆಗಾಗಿ ತೋಟದಲ್ಲಿ ಇಟ್ಟಿದ್ದ ನಾಡಬಾಂಬ್ ಸ್ಫೋ...
05-04-26 11:03 am
ನಾಸಿಕ್ ಭೀಕರ ದುರಂತ; ನಿಯಂತ್ರಣ ತಪ್ಪಿ ಬಾವಿಗೆ ಬಿದ್...
04-04-26 05:42 pm
ಅತ್ತೆ, ಮಾವನ ಕಿರುಕುಳಕ್ಕೆ ಬೇಸತ್ತು ಗರ್ಭಿಣಿ ಮಹಿಳೆ...
04-04-26 05:39 pm