ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
27-08-26 08:26 pm
HK News Staffer
ಕೊಟ್ಟಾರದಲ್ಲಿ ಗಾಳಿ ಮಳೆಗೆ ಧರೆಗುರುಳಿದ ಬೃಹತ್ ಮರ ;...
27-08-26 06:55 pm
ಸೌಜನ್ಯಾ ಮನೆಗೆ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ...
27-08-26 11:22 am
ಪಕ್ಕದ ವಾರ್ಡಿನ ಸರಕಾರಿ ಶಾಲಾಭಿವೃದ್ಧಿಗೆ ಅನುದಾನ ಕೊ...
26-08-26 10:58 pm
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
27-08-26 07:23 pm
HK News Staffer
ಆಪ್ತನಿಂದಲೇ ನಂಬಿಕೆ ದ್ರೋಹ, ಐಟಿ ದಾಳಿಯ ಒತ್ತಡ ; ಕಾ...
27-08-26 05:24 pm
Samson Coutinho, Mangalore, Fiona Sweedal Mur...
26-08-26 09:36 pm
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am