ಬ್ರೇಕಿಂಗ್ ನ್ಯೂಸ್
02-06-25 10:59 pm Mangalore Correspondent ಕರಾವಳಿ
ಬಂಟ್ವಾಳ, ಜೂನ್ 2 : ಕರಾವಳಿಯಲ್ಲೇ ಅತಿ ದೊಡ್ಡದು ಎನ್ನಲಾದ ಕಲ್ಲಡ್ಕ ಪ್ಲೈಓವರ್ ಕೊನೆಗೂ ವಾಹನ ಸಂಚಾರಕ್ಕೆ ಮುಕ್ತವಾಗಿದೆ. ಮಳೆಗಾಲ ಪ್ರಾರಂಭವಾಗಿರುವ ಸಂದರ್ಭದಲ್ಲೇ ಕಲ್ಲಡ್ಕ ಪ್ಲೈಓವರ್ ಅನ್ನು ಕಡೆಗೂ ವಾಹನ ಸಂಚಾರಕ್ಕೆ ಮುಕ್ತಗೊಳಿಸಿರುವುದು ವಾಹನ ಸವಾರರಿಗೆ ಸಂತಸ ತರಿಸಿದೆ.
ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಬಿ.ಸಿ.ರೋಡ್-ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಡೆಯುತ್ತಿದ್ದು, ಈ ಹಿನ್ನಲೆ ಸಾರ್ವಜನಿಕರಿಗೆ ತೊಂದರೆಯಾಗದಂತೆ ಕಲ್ಲಡ್ಕ ಫ್ಲೈಓವರ್ ಸೇರಿದಂತೆ ಕೆಲವೆಡೆ ವಾಹನಗಳ ಸುಗಮ ಸಂಚಾರಕ್ಕೆ ರಸ್ತೆ ತೆರವುಗೊಳಿಸಿ ಅನುಕೂಲ ಮಾಡಿಕೊಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟ ಇತ್ತೀಚೆಗೆ ಸೂಚನೆ ನೀಡಿದ್ದರು. ಅದರಂತೆ ಜೂನ್ 2ರಂದು ಕಲ್ಲಡ್ಕ ಫ್ಲೈಓವರ್ ಸಂಚಾರಕ್ಕೆ ತೆರೆದುಕೊಂಡಿದೆ.
ಸೋಮವಾರ ಬೆಳಗ್ಗೆ ಫ್ಲೈ ಓವರ್ ನ ಆರಂಭಿಕ ಭಾಗವಾದ ಪೂರ್ಲಪ್ಪಾಡಿಯಲ್ಲಿ ಸೇರಿದ ಕಲ್ಲಡ್ಕದ ನಾಗರಿಕರು, ಕಲ್ಲಡ್ಕ ಶ್ರೀರಾಮ ವಿದ್ಯಾಸಂಸ್ಥೆಗಳ ಸಂಸ್ಥಾಪಕ ಕಲ್ಲಡ್ಕ ಡಾ.ಪ್ರಭಾಕರ್ ಭಟ್ ನೇತೃತ್ವದಲ್ಲಿ ಪ್ರೈಓವರ್ ಸಂಚಾರವನ್ನು ಸ್ವಾಗತಿಸುವ ಮೂಲಕ ವಾಹನ ಸಂಚಾರಕ್ಕೆ ಚಾಲನೆ ನೀಡಿದ್ದಾರೆ.
ಕಲ್ಲಡ್ಕದ ಪೂರ್ಲಪ್ಪಾಡಿಯಿಂದ ಕೃಷ್ಣಕೋಡಿಯವರೆಗೆ ಒಟ್ಟು 2.1 ಕಿ.ಮೀ. ಉದ್ದದ ಈ ಮೇಲ್ಸೇತುವೆಯಲ್ಲಿ 70 ಪಿಲ್ಲರ್ಗಳಿವೆ. ಒಂದರಿಂದ ಇನ್ನೊಂದಕ್ಕೆ 30 ಮೀಟರ್ ಅಂತರವಿದ್ದು, ಒಟ್ಟು 72 ಸ್ಪಾನ್ಗಳ ಫ್ಲೈಓವರ್ ಇದಾಗಿದೆ. ಜೂನ್ ಕೊನೆಯೊಳಗೆ ಫ್ಲೈಓವರ್ಗೆ ಸಂಬಂಧಪಟ್ಟ ಎಲ್ಲ ಕಾಮಗಾರಿಗಳು ಮುಕ್ತಾಯಗೊಳ್ಳುವ ನಿರೀಕ್ಷೆಯಿದೆ.
Mangalore Kalladka Flyover Finally Opens for Traffic; Welcomed by Local Residents.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm