ಬ್ರೇಕಿಂಗ್ ನ್ಯೂಸ್
03-06-25 04:29 pm Mangalore Correspondent ಕರಾವಳಿ
ಮಂಗಳೂರು, ಜೂನ್ 3 : ಯುನೈಟೆಡ್ ಬ್ರೂವರೀಸ್ ಬಿಯರ್ ಕಂಪನಿಯು ಇದೇ ಜೂನ್ ತಿಂಗಳ ಅಂತ್ಯಕ್ಕೆ ಮಂಗಳೂರಿನಲ್ಲಿ ಉತ್ಪಾದನಾ ಫ್ಯಾಕ್ಟರಿಯನ್ನು ಕ್ಲೋಸ್ ಮಾಡಲಿದೆ. ಸದ್ಯಕ್ಕೆ ಬೆಂಗಳೂರು, ಮೈಸೂರು ಮತ್ತು ಮಂಗಳೂರಿನಲ್ಲಿ ಫ್ಯಾಕ್ಟರಿ ಹೊಂದಿದ್ದು ಕರಾವಳಿ ಜಿಲ್ಲೆಯ ಫ್ಯಾಕ್ಟರಿಯನ್ನು ನಿಲ್ಲಿಸುವುದಾಗಿ ಹೇಳಿಕೊಂಡಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ನಿಲ್ಲಿಸುವುದರಿಂದ ರಾಜ್ಯದಲ್ಲಿ ಒಟ್ಟು ವ್ಯವಹಾರದಲ್ಲಿ ಯಾವುದೇ ವ್ಯತ್ಯಯ ಆಗುವುದಿಲ್ಲ ಎಂದು ಯುಬಿಎಲ್ ಸೆಬಿ ಸಂಸ್ಥೆಗೆ ಸಲ್ಲಿಸಿರುವ ವರದಿಯಲ್ಲಿ ಹೇಳಿದೆ. ಮಂಗಳೂರು ಬದಲು ಮೈಸೂರಿನ ನಂಜನಗೂಡಿನಲ್ಲಿರುವ ಫ್ಯಾಕ್ಟರಿಯನ್ನು ಮತ್ತಷ್ಟು ವಿಸ್ತರಣೆ ಮಾಡಲು ಕಂಪನಿ ಮುಂದಾಗಿದೆ. ಸ್ಥಳಾಂತರದೊಂದಿಗೆ, ಇಲ್ಲಿರುವ ಉದ್ಯೋಗಿಗಳಿಗೂ ಸೂಕ್ತ ವ್ಯವಸ್ಥೆಯನ್ನು ಮಾಡುವುದಾಗಿ ಹೇಳಿಕೊಂಡಿದೆ. ಮೈಸೂರಿನಲ್ಲಿ ಕಂಪನಿ ವಿಸ್ತರಣೆ ಮಾಡುವ ಮೂಲಕ ಉತ್ಪಾದನೆ ಮತ್ತು ಕಾರ್ಯ ನಿರ್ವಹಣೆಯಲ್ಲಿ ದೊಡ್ಡ ಮಟ್ಟದ ಬದಲಾವಣೆಯೂ ಆಗಲಿದೆ ಎಂದು ಹೇಳಿದೆ.
ಕಳೆದ ಬಾರಿ ಅಬಕಾರಿ ಸುಂಕ ಹೆಚ್ಚಳ ಮಾಡಿದರೂ, ಯುಬಿಎಲ್ ವ್ಯವಹಾರದಲ್ಲಿ ಕಡಿತ ಆಗಿಲ್ಲ. ಬದಲಿಗೆ, 2024-25ರ ಮೊದಲ ತ್ರೈಮಾಸಿಕ ಅವಧಿಯಲ್ಲಿ ಯುಬಿಎಲ್ ವ್ಯವಹಾರ 9 ಶೇ. ವೃದ್ಧಿಯಾಗಿದೆ. ಒಟ್ಟು ವಹಿವಾಟು 2321 ಕೋಟಿಗೆ ಏರಿಕೆಯಾಗಿದೆ.
ಮಂಗಳೂರಿನ ಫ್ಯಾಕ್ಟರಿಯನ್ನು ದಿಢೀರ್ ನಿಲ್ಲಿಸುವುದು ಏಕೆ ಎನ್ನುವ ಬಗ್ಗೆ ಕಂಪನಿ ಮಾಹಿತಿ ನೀಡಿಲ್ಲ. 2012ರಲ್ಲಿ ಮಂಗಳೂರಿನ ಬೈಕಂಪಾಡಿ ಇಂಡಸ್ಟ್ರಿಯಲ್ ಏರಿಯಾದಲ್ಲಿ ಯುಬಿಎಲ್ ಫ್ಯಾಕ್ಟರಿ ಆರಂಭಗೊಂಡಿದ್ದು ಮಂಗಳೂರು ಘಟಕದ ಜಿಎಸ್ಟಿ ಮಾಹಿತಿ ಪ್ರಕಾರ ವಾರ್ಷಿಕ 500 ಕೋಟಿ ವಹಿವಾಟು ನಡೆಸುತ್ತಿದೆ.
United Breweries Ltd (UBL) has announced that it will shut down its Mangaluru beer manufacturing unit by the end of June. The company currently operates facilities in Bengaluru, Mysuru, and Mangaluru.
18-01-26 03:34 pm
Bangalore Correspondent
ಬ್ಯಾನರ್ ಗಲಾಟೆ ; ಸಿಬಿಐ ತನಿಖೆಗೆ ಬಿಜೆಪಿ ಆಗ್ರಹ, ಬ...
17-01-26 08:02 pm
Bangalore Accident, Budigere: ದೇವನಹಳ್ಳಿ - ಬೂದ...
17-01-26 05:53 pm
ಪಶ್ಚಿಮ ಬಂಗಾಳ -ಬೆಂಗಳೂರು ರೈಲಿನಲ್ಲೇ ಬರ್ತಿದ್ದಾರೆ...
17-01-26 05:29 pm
H.D. Kumaraswamy, Priyank Kharge: ಜೆಡಿಎಸ್ ನಿರ...
16-01-26 09:38 pm
18-01-26 06:03 pm
HK News Desk
President Donald Trump: ಅಮೆರಿಕದ ಸುಂಕ ಬರೆಗೆ ಭಾ...
18-01-26 11:47 am
ಕುಂಬ್ಡಾಜೆ ; ಕರಿಮಣಿ ಸರ ಎಗರಿಸಲು ಮಹಿಳೆಯ ಕತ್ತು ಹಿ...
17-01-26 03:08 pm
ಏಪ್ರಿಲ್ 1ರಿಂದ ರಾಷ್ಟ್ರೀಯ ಹೆದ್ದಾರಿ ಟೋಲ್ ಗಳಲ್ಲಿ...
17-01-26 01:47 pm
ಜ.20ರಂದು ಬಿಜೆಪಿಗೆ ನೂತನ ಅಧ್ಯಕ್ಷರ ಘೋಷಣೆ ; ಅತಿ...
16-01-26 06:33 pm
17-01-26 05:12 pm
Mangalore Correspondent
ಉಳ್ಳಾಲ ದರ್ಗಾ ಕಮಿಟಿ ವಿರುದ್ಧ ಹೈಕೋರ್ಟ್ ತೀರ್ಪಿತ್ತ...
17-01-26 05:00 pm
Suniel Shetty, Ahan Shetty, Kuthar Koragajja...
16-01-26 10:28 pm
ಡ್ರಗ್ಸ್ ಮುಕ್ತ ಕಾರ್ಯಕ್ಕಾಗಿ ಕಮಿಷನರ್ ದಿಟ್ಟ ಹೆಜ್ಜ...
16-01-26 09:44 pm
ಕರಾವಳಿ ಪ್ರಯಾಣಿಕರಿಗೆ ಸಿಹಿಸುದ್ದಿ ; ಮಂಗಳೂರು- ಮರವ...
16-01-26 07:33 pm
18-01-26 12:58 pm
Mangalore Correspondent
Mandya Murder: ಆಸ್ತಿ ವಿಚಾರಕ್ಕೆ ಗಲಾಟೆ ; ನಾಲ್ಕು...
16-01-26 09:01 pm
Cyber Fraud Biggest Bangalore: ದೇಶದ ಅತಿ ದೊಡ್ಡ...
15-01-26 11:07 pm
ಬಾಲಕನ ಅಸಹಜ ಸಾವು ಪ್ರಕರಣ ; ಬಾವಿಗೆ ಬಿದ್ದಾಗ ಜೀವಂತ...
15-01-26 03:01 pm
ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಖದೀಮರ ಜಾಲ ಬಯಲ...
14-01-26 09:49 pm