ಬ್ರೇಕಿಂಗ್ ನ್ಯೂಸ್
03-06-25 07:37 pm Mangalore Correspondent ಕರಾವಳಿ
ಮಂಗಳೂರು, ಜೂನ್.3: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರೆಸ್ಸೆಸ್ ಮತ್ತು ಸಂಘ ಪರಿವಾರದ ಪ್ರಮುಖರ ಮನೆಗಳಿಗೆ ನಡುರಾತ್ರಿಯಲ್ಲಿ ಪೊಲೀಸರು ಎಂಟ್ರಿ ಕೊಟ್ಟು ಜನಸಾಮಾನ್ಯರ ಖಾಸಗಿತನಕ್ಕೆ ಧಕ್ಕೆ ಮಾಡುತ್ತಿದ್ದಾರೆ, ಇದು ಸಂವಿಧಾನದ ಮೂಲಭೂತ ಹಕ್ಕಿನ ಉಲ್ಲಂಘನೆಯೆಂದು ಖ್ಯಾತ ವಕೀಲ ಗಿರೀಶ್ ಭಾರದ್ವಾಜ್ ಅವರು ಪೊಲೀಸ್ ದೂರುಗಳ ಪ್ರಾಧಿಕಾರದ ಅಧ್ಯಕ್ಷ ನ್ಯಾಯಮೂರ್ತಿ ಎನ್.ಕೆ. ಸುಧೀಂದ್ರ ರಾವ್ ಅವರಿಗೆ ದೂರು ನೀಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಪೊಲೀಸ್ ವರಿಷ್ಠರ ಸೂಚನೆಯಂತೆ ಸಮಾಜದ ಗಣ್ಯರು, ಸಾಮಾಜಿಕ ಕಾರ್ಯಕರ್ತರು ಮತ್ತು ಆರೆಸ್ಸೆಸ್ ಪ್ರಮುಖರ ಮನೆಗಳಿಗೆ ಪೊಲೀಸರು ರಾತ್ರಿ 11 ಗಂಟೆ ಬಳಿಕ ಭೇಟಿ ಕೊಟ್ಟು ಫೋಟೋ ತೆಗೆಯುವುದು, ಜಿಪಿಎಸ್ ಲೊಕೇಶನ್ ಶೇರ್ ಮಾಡುವುದನ್ನು ಮಾಡುತ್ತಿದ್ದಾರೆ. ಇದು ಪೂರ್ತಿಯಾಗಿ ವ್ಯಕ್ತಿಯ ಖಾಸಗಿತನ ಮತ್ತು ಬದುಕುವ ಹಕ್ಕಿನ ವಿರುದ್ಧವಾಗಿದೆ. ಈ ರೀತಿಯ ನಡೆ ಸಂವಿಧಾನದ ಕಲಂ 14, 17, 19 ಮತ್ತು 21ರ ಪ್ರಕಾರ ಕಾನೂನು ವಿರೋಧಿಯಾಗುತ್ತದೆ.

ಪೊಲೀಸರು ರಾತ್ರಿ ವೇಳೆ ಏಕಾಏಕಿ ಒಬ್ಬರ ಮನೆಗೆ ಭೇಟಿ ಕೊಡುವುದು ವ್ಯಕ್ತಿಯ ಖಾಸಗಿತನಕ್ಕೆ ಧಕ್ಕೆ ತರುವುದು ಮಾತ್ರವಲ್ಲದೆ, ಸಮಾಜದಲ್ಲಿ ಆತನ ಮರ್ಯಾದೆಗೆ ಕುಂದು ತರುತ್ತದೆ ಮತ್ತು ಮಾನಸಿಕ ಅಶಾಂತಿಗೂ ಕಾರಣವಾಗುತ್ತದೆ. ಇವೆರಡೂ ಸಂವಿಧಾನದಲ್ಲಿ ವ್ಯಕ್ತಿಗೆ ಕೊಡಲಾಗಿರುವ ಮೂಲಭೂತ ಹಕ್ಕಾಗಿರುತ್ತದೆ. ಇದಲ್ಲದೆ, ದಕ್ಷಿಣ ಕನ್ನಡ ಜಿಲ್ಲೆಯ ಎಸ್ಪಿ ತನ್ನ ನಡೆಯನ್ನು ಸಮರ್ಥಿಸಿಕೊಂಡು ಕೋಮುವಾದಿ ಸಂಘಟನೆಗಳ ವಿರುದ್ಧ ಕಾನೂನು ಕ್ರಮ ಮುಂದುವರಿಯುತ್ತದೆ ಮತ್ತು ಇವರ ಪರವಾಗಿ ಧ್ವನಿ ಎತ್ತುವವರೆಲ್ಲರ ಮೇಲೂ ಕೇಸು ಹಾಕಲಾಗುತ್ತದೆ ಎಂದಿದ್ದಾರೆ.
ಒಬ್ಬ ಎಸ್ಪಿ ಯಾವುದೇ ಸಂಘಟನೆಯನ್ನು ಕೋಮುವಾದಿ ಎನ್ನುವುದಕ್ಕಾಗಲೀ, ನ್ಯಾಯಾಂಗದ ರೀತಿ ವರ್ತಿಸುವುದಕ್ಕಾಗಲೀ ಅಧಿಕಾರ ಹೊಂದಿರುವುದಿಲ್ಲ. ಎಸ್ಪಿಯಾದವರು ಈ ರೀತಿ ಹೇಳುವುದು ಸಂವಿಧಾನ ವಿರೋಧಿ ಮಾತ್ರವಲ್ಲದೆ, ಪ್ರಜಾಪ್ರಭುತ್ವ ವ್ಯವಸ್ಥೆಯ ಮೇಲಿನ ಬೆದರಿಕೆಯೂ ಆಗಿರುತ್ತದೆ. ಹೀಗಾಗಿ ಪೊಲೀಸ್ ದೂರು ಪ್ರಾಧಿಕಾರವು ಈ ಬಗ್ಗೆ ಸ್ವಯಂಪ್ರೇರಿತ ದೂರು ದಾಖಲಿಸಿ, ರಾತ್ರಿ ವೇಳೆ ಯಾವುದೇ ಅಪರಾಧ ಹಿನ್ನೆಲೆಯಿರದ ವ್ಯಕ್ತಿಗಳ ಮನೆಗಳಿಗೆ ಹೋಗುವುದನ್ನು ನಿರ್ಬಂಧಿಸಬೇಕು. ಅಲ್ಲದೆ, ಕಳೆದ ಏಳು ದಿನಗಳಲ್ಲಿ ಎಸ್ಪಿ ಕೈಗೊಂಡ ಕ್ರಮಗಳು, ರಾತ್ರಿ ವೇಳೆ ಮನೆಗಳಿಗೆ ಪೊಲೀಸರನ್ನು ಕಳಿಸಿಕೊಟ್ಟ ಔಚಿತ್ಯದ ಬಗ್ಗೆ ವರದಿ ಪಡೆಯಬೇಕು. ಅಲ್ಲದೆ, ಆಗಿರುವ ಕಾನೂನು ಉಲ್ಲಂಘನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆಯನ್ನೂ ನಡೆಸುವುದಕ್ಕೆ ಆದೇಶ ನೀಡಬೇಕು ಮತ್ತು ಪೊಲೀಸ್ ಪವರ್ ದುರುಪಯೋಗ ಆಗುವುದನ್ನು ತಪ್ಪಿಸಬೇಕು ಎಂದು ವಕೀಲ ಗಿರೀಶ್ ಭಾರದ್ವಾಜ್ ದೂರು ಪತ್ರದಲ್ಲಿ ಕೇಳಿಕೊಂಡಿದ್ದಾರೆ.
ರಾಜ್ಯ ಪೊಲೀಸ್ ದೂರು ಪ್ರಾಧಿಕಾರಕ್ಕೆ ಬರೆದ ಪತ್ರವನ್ನು ರಾಷ್ಟ್ರೀಯ ಮಾನವ ಹಕ್ಕು ಆಯೋಗ, ರಾಜ್ಯ ಮಾನವ ಹಕ್ಕು ಆಯೋಗ, ಕರ್ನಾಟಕ ಡಿಜಿಪಿ ಅವರಿಗೂ ಕಳುಹಿಸಲಾಗಿದ್ದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಗಿರುವ ಬೆಳವಣಿಗೆ ಬಗ್ಗೆ ಗಮನ ಸೆಳೆಯಲಾಗಿದೆ. ವಕೀಲ ಗಿರೀಶ್ ಭಾರದ್ವಾಜ್ ಅವರು, ಇತ್ತೀಚೆಗೆ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ರಾಜ್ಯ ಸರಕಾರ ಆರೋಪಿಗಳ ಮೇಲಿನ ಕೇಸನ್ನು ಹಿಂಪಡೆದಿರುವುದನ್ನು ವಿರೋಧಿಸಿ ಹೈಕೋರ್ಟ್ ಮೆಟ್ಟಿಲೇರಿ ಸರ್ಕಾರದ ನಡೆಯ ವಿರುದ್ಧ ತಡೆ ತಂದಿದ್ದರು. ಅಲ್ಲದೆ, ಸರ್ಕಾರಕ್ಕೂ ಛೀಮಾರಿ ಹಾಕುವಂತೆ ಮಾಡಿ ಗಮನಸೆಳೆದಿದ್ದರು.
ವಕೀಲ ಭಾರದ್ವಾಜ್ ಬರೆದ ರೀತಿಯಲ್ಲೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರೂ ಬೆಂಗಳೂರಿನ ಪೊಲೀಸ್ ದೂರು ಪ್ರಾಧಿಕಾರಕ್ಕೆ ಪತ್ರ ಬರೆದಿದ್ದು, ಎಸ್ಪಿಯವರು ಕೈಗೊಂಡ ಕ್ರಮಗಳು ವ್ಯಕ್ತಿಯ ಖಾಸಗಿತನ ಹಕ್ಕನ್ನು ಉಲ್ಲಂಘಿಸುತ್ತಿದ್ದು, ಕ್ರಮ ಕೈಗೊಳ್ಳುವಂತೆ ಆಗ್ರಹ ಮಾಡಿದ್ದಾರೆ.
Mangalore Police Night Visits Violate Right to Privacy, Complaint Filed Against Dakshina Kannada SP to National Human Rights Commission.
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm