ಬ್ರೇಕಿಂಗ್ ನ್ಯೂಸ್
04-06-25 10:43 pm Mangalore Correspondent ಕರಾವಳಿ
ಉಳ್ಳಾಲ, ಜೂ.4 : ಮೊನ್ನೆಯಷ್ಟೇ ಉಳ್ಳಾಲ ತಾಲೂಕಿನಾದ್ಯಂತ ಗರಿಷ್ಠ ಪ್ರಮಾಣದಲ್ಲಿ ಸುರಿದಿದ್ದ ಮಳೆಯಿಂದಾಗಿ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಅಂಬಿಕಾ ರೋಡ್ ಮೂರನೇ ಅಡ್ಡ ರಸ್ತೆಯ ರಾಜಕಾಲುವೆ ಉಕ್ಕಿ ಹರಿದ ಪರಿಣಾಮ ಸ್ಥಳೀಯ ಮನೆಗಳು ಪ್ರವಾಹದಿಂದ ಮುಳುಗಡೆಯಾಗಿದ್ದವು. ಬುಧವಾರ ಸಂಜೆ ರಾಜಕಾಲುವೆಯ ಕಿರು ಸೇತುವೆಯ ಅಡಿಭಾಗ ಕುಸಿದಿದ್ದು ಸೇತುವೆ ಕುಸಿದು ಬೀಳಲು ಕ್ಷಣಗಣನೆ ಆರಂಭವಾಗಿದೆ. ಸುರಕ್ಷತೆ ದೃಷ್ಟಿಯಿಂದ ಸೇತುವೆ ಸಂಚಾರವನ್ನ ಸೋಮೇಶ್ವರ ಪುರಸಭಾ ಅಧಿಕಾರಿಗಳು ನಿಷೇಧಗೊಳಿಸಿದ್ದು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನ ಸುಮಾರು ಎಪ್ಪತ್ತು ಮನೆಗಳ ಸಂಪರ್ಕ ಕಡಿತವಾಗಿ ನಿವಾಸಿಗಳು ಮನೆ ತಲುಪಲು ಬವಣೆ ಪಡುವಂತಾಗಿದೆ.
ಅಂಬಿಕಾರೋಡ್ ಮೂರನೇ ಅಡ್ಡ ರಸ್ತೆಯ ರಾಜ ಕಾಲುವೆಯ ಕಿರು ಸೇತುವೆ ಹಳೆಯದಾಗಿದ್ದು ಕಳೆದ ನಾಲ್ಕು ವರ್ಷದ ಹಿಂದಷ್ಟೆ ಸೋಮೇಶ್ವರ ಪುರಸಭೆ ಆಡಳಿತವು ಸೇತುವೆಯ ದುರಸ್ತಿ ಕಾರ್ಯ ನಡೆಸಿತ್ತು. ಸೇತುವೆಯ ಕಳಪೆ ದುರಸ್ತಿಯಿಂದಾಗಿ ಕಳೆದ ಗುರುವಾರ ಸುರಿದ ಭಾರೀ ಮಳೆಗೆ ಕಾಲುವೆಯಲ್ಲಿ ನೀರು ಉಕ್ಕಿ ಹರಿದ ಪರಿಣಾಮ ಅಡಿಭಾಗವು ಕುಸಿತಗೊಂಡಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ. ಇನ್ನು ಕೆಲವರು ಸ್ಥಳೀಯ ಅಂಬಿಕಾರೋಡ್ ಲೇ ಔಟ್ ನಲ್ಲಿ ಮನೆ ನಿರ್ಮಾಣ ಕಾಮಗಾರಿಗೆ ರಾಜಕಾಲುವೆಯ ಕಿರು ಸೇತುವೆಯ ಮೇಲೆ ದಿನ ನಿತ್ಯಲೂ ಕಲ್ಲು , ಮರಳು ಇತರ ಕಟ್ಟಡ ನಿರ್ಮಾಣ ಸಾಮಾಗ್ರಿಗಳ ಘನ ವಾಹನಗಳು ಚಲಿಸುತ್ತಿದ್ದ ಪರಿಣಾಮ ಹಳೆ ಸೇತುವೆ ಶಿಥಿಲಗೊಂಡು ಕುಸಿದಿರೋದಾಗಿ ಆರೋಪಿಸಿದ್ದಾರೆ.
ಮತ್ತೆ ಧಾರಾಕಾರವಾಗಿ ಮಳೆ ಸುರಿದರೆ ಸೇತುವೆ ಸಂಪೂರ್ಣ ಕುಸಿದು ಬಿದ್ದು ರಾಜ ಕಾಲುವೆಯಲ್ಲಿ ಹರಿಯುವ ಭಾರೀ ಪ್ರಮಾಣದ ನೀರು ಸ್ಥಳೀಯ ಅನೇಕ ಮನೆಗಳಿಗೆ ನುಗ್ಗಿ ಮತ್ತೆ ಅವಾಂತರ ಸೃಷ್ಟಿಸುವ ಭೀತಿ ಎದುರಾಗಿದೆ. ಸ್ಥಳಕ್ಕೆ ಸೋಮೇಶ್ವರ ಪುರಸಭೆಯ ಮುಖ್ಯಾಧಿಕಾರಿ ಮತ್ತಡಿ ಮತ್ತು ಪ್ರಬಂಧಕರಾದ ಕೃಷ್ಣ, ಸ್ಥಳೀಯ ಪುರಸಭೆ ಸದಸ್ಯರಾದ ಪರ್ವೀನ್ ಅವರು ಭೇಟಿ ನೀಡಿದ್ದು ಪರಿಸ್ಥಿತಿ ಅವಲೋಕಿಸಿದ್ದಾರೆ. ಸದ್ಯಕ್ಕೆ ಕುಸಿದಿರುವ ಸೇತುವೆ ಬೀಳದಂತೆ ತಡೆಯುವುದೇ ಅಧಿಕಾರಿಗಳಿಗೆ ಸವಾಲಾಗಿದೆ.
ಅತ್ತ ಕುಂಪಲ ಮುಖ್ಯ ರಸ್ತೆಯಲ್ಲಿ ಪೈಪ್ ಲೈನ್ ಕಾಮಗಾರಿಯಿಂದ ಕೆಟ್ಟು ಹೋಗಿದ್ದು, ದುರಸ್ತಿ ಕಾಮಗಾರಿಗೆಂದು ಅಲ್ಲಿನ ರಸ್ತೆ ಸಂಚಾರ ನಿರ್ಬಂಧಿಸಲಾಗಿದೆ. ಕುಂಪಲ ಪ್ರದೇಶಕ್ಕೆ ತೆರಳುವವರೂ ಕೂಡ ಅಂಬಿಕಾ ರೋಡಿನ ಮೂರನೇ ಅಡ್ಡ ರಸ್ತೆಯನ್ನೇ ಪರ್ಯಾಯವಾಗಿ ನೆಚ್ಚಿಕೊಂಡಿದ್ದರು.
Mangalore Cracks in Someshwara Ambika Road Culvert Raise Flood Fears; Bridge Closed, 70 Homes Cut Off.
08-09-25 08:07 pm
HK News Desk
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
ತುಳು ರಾಜ್ಯ ಭಾಷೆ ಘೋಷಣೆ ಬಗ್ಗೆ ಸಂಪುಟದಲ್ಲಿ ಚರ್ಚೆ...
08-09-25 02:41 pm
Prajwal Revanna: ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರ...
07-09-25 07:43 pm
08-09-25 11:06 pm
HK News Desk
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
ಏಳು ವರ್ಷ ಶಿಕ್ಷೆ ಪೂರ್ತಿಗೊಳಿಸಿದ ಬಳಿಕವೂ ಹೆಚ್ಚುವರ...
08-09-25 06:07 pm
ಮಲ್ಲಿಗೆ ಮುಡಿದಿದ್ದ ನಟಿ ನವ್ಯಾ ನಾಯರ್ಗೆ ಒಂದು ಲಕ್...
08-09-25 02:02 pm
ಸಾವಿರಾರು ಕೋಟಿ ವಂಚಿಸಿದ ವಿಜಯ್ ಮಲ್ಯ, ನೀರವ್ ಮೋದಿ...
07-09-25 08:33 pm
09-09-25 03:07 pm
Mangalore Correspondent
ದಶಮ ಸಂಭ್ರಮದಲ್ಲಿ ಮಿಥುನ್ ರೈ ಸಾರಥ್ಯದ ಪಿಲಿನಲಿಕೆ ;...
09-09-25 02:30 pm
Mangalore Accident, Kulur, Death: ಕುಳೂರಿನಲ್ಲಿ...
09-09-25 11:48 am
Gopadi Beach Drowning, Kundapura: ಕುಂದಾಪುರ ;...
08-09-25 12:08 pm
Mangalore, Bantwal Mosque Speaker: ಬಂಟ್ವಾಳದಲ್...
07-09-25 11:24 pm
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm