ಬ್ರೇಕಿಂಗ್ ನ್ಯೂಸ್
05-06-25 10:10 am Mangalore Correspondent ಕರಾವಳಿ
ಮಂಗಳೂರು, ಜೂನ್ 5: ಕೇಸರಿ ಕಟ್ಟಿಕೊಂಡು ಹೊಡೆದ್ಕೊಂಡರೆ ಹಿಂದು ಮುಖಂಡ, ಹಿಂದು ಕಾರ್ಯಕರ್ತ ಆಗುತ್ತಾನಾ.. ರೌಡಿಶೀಟರ್, ಕೊಲೆ ಮಾಡಿದವರು, ಸುಲಿಗೆ ಮಾಡಿದವರನ್ನು ಹಿಂದು ಕಾರ್ಯಕರ್ತ ಅನ್ನುತ್ತೀರಾ.. ಕಾಂಗ್ರೆಸ್ ಸರ್ಕಾರ ಇರುವಾಗ ಮಾತ್ರ ಹಿಂದುಗಳಿಗೆ ತೊಂದರೆ ಆಗಿದ್ದಾ.. ಹಿಂದು ನಾಯಕ ಅನಿಸಿಕೊಳ್ಳಲು ರೌಡಿಶೀಟರ್, ಗಾಂಜಾ, ಅನೈತಿಕ ಚಟುವಟಿಕೆ ಮಾಡಿಕೊಂಡಿದ್ದವರೇ ಆಗಬೇಕಾ.. ಹೀಗೆಂದು ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಪ್ರಶ್ನೆ ಮಾಡಿದ್ದಾರೆ.
ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಸಿದ ಅವರು, ಪೊಲೀಸರು ಬಿಡುಗಡೆ ಮಾಡಿರುವ ಗಡೀಪಾರು ಪಟ್ಟಿಯಲ್ಲಿ ಕೇವಲ ಹತ್ತು ಕಿಮೀ ವ್ಯಾಪ್ತಿಯವರೇ ಹೆಚ್ಚಿದ್ದಾರೆ. ಇಡೀ ಕರಾವಳಿಗೆ ಹತ್ತು ಕಿಮೀ ವ್ಯಾಪ್ತಿಯ ಕೋಮು ಹಿಂಸೆಯ ಜನರಿಂದಾಗಿ ಕೆಟ್ಟ ಹೆಸರು ಬರ್ತಾ ಇದೆ. 30 ವರ್ಷಗಳ ಹಿಂದೆ ಬಿಜೆಪಿಯವರು ಬಿತ್ತಿದ ಕೋಮು ವೈಷಮ್ಯದ ಬೀಜ ಈಗ ಹೆಮ್ಮರವಾಗಿ ಬೆಳೆದಿದೆ. ಕೋಮು ಗಲಭೆ, ಕೋಮು ಸಂಘರ್ಷ, ಕೋಮು ಹತ್ಯೆ ಬೇರೆ ಬೇರೆ. ಇಲ್ಲಿ ಆಗುತ್ತಿರುವುದು ಕೋಮು ಹತ್ಯೆ ಮಾತ್ರ. ಆದರೆ ಇಡೀ ಕರಾವಳಿಗೆ ಇದರ ನೆಪದಲ್ಲಿ ಮಸಿ ಬಳಿಯಲಾಗುತ್ತಿದೆ. ಮಾಧ್ಯಮದಲ್ಲಿ ಇಡೀ ಕರಾವಳಿಯಲ್ಲಿ ಇಂಥದ್ದು ಆಗ್ತಾ ಇದೆಯೆಂದು ಬಣ್ಣ ಹಚ್ಚಲಾಗುತ್ತಿದೆ ಎಂದು ಆಕ್ಷೇಪಿಸಿದರು.

ಕಾರವಾರದಿಂದ ಕಾಸರಗೋಡು ವರೆಗೆ ನಮ್ಮ ಕರಾವಳಿಯಿದ್ದು, ಮಂಗಳೂರಿನಲ್ಲಿ ಮಾತ್ರ ಈ ರೀತಿಯ ಕೋಮು ಹಿಂಸೆಯ ಕೃತ್ಯಗಳು ನಡೆಯುತ್ತಿವೆ. ಬೆಳ್ತಂಗಡಿ, ಸುಳ್ಯ, ಉಡುಪಿ, ಕಾರವಾರ ಬೇರೆಲ್ಲಿಯೂ ನಡೀತಾ ಇಲ್ಲ. ಮಂಗಳೂರಿನಲ್ಲು ಹತ್ತು ಕಿಮೀ ರೇಡಿಯಸ್ ವ್ಯಾಪ್ತಿಯಲ್ಲಿ ಇಂತಹ ಕೃತ್ಯಗಳು ಹೆಚ್ಚಿದ್ದು, ಇದನ್ನು ಪೊಲೀಸ್ ಇಲಾಖೆ ಮೂಲಕ ಹತ್ತಿಕ್ಕಬೇಕಾಗಿದೆ. ಈ ನಡುವೆ, ನಾವೆಲ್ಲ ಹಿಂದುಗಳಲ್ವಾ ಎನ್ನುವ ಪ್ರಶ್ನೆ ಕೇಳಬೇಕಾಗಿದೆ. ಇವರ ಪರಿವಾರದಲ್ಲಿ 50-60 ದಳಗಳಿವೆ, ಅವನ್ನು ಹೇಳಿಕೊಳ್ಳಲಿ. ಅದು ಬಿಟ್ಟು ಹಿಂದು ನಾಯಕ, ಹಿಂದು ಕಾರ್ಯಕರ್ತ ಎಂದು ಹೇಳಿಕೊಳ್ಳಲು ಇವರಿಗೆ ಅಧಿಕಾರ ಕೊಟ್ಟವರು ಯಾರು. ಇದಕ್ಕಾಗಿ ನಾವೊಂದು ಸಮಿತಿ ಮಾಡುತ್ತಿದ್ದೇವೆ. ಪ್ರತಿ ತಾಲೂಕಿನಲ್ಲಿ ಇದರ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಸುದ್ದಿಗೋಷ್ಟಿಯಲ್ಲಿ ಸದಾಶಿವ ಉಳ್ಳಾಲ್, ಪದ್ಮರಾಜ್ ಆರ್ ಪೂಜಾರಿ, ಜಿ.ಎ ಬಾವ, ವಿಶ್ವಾಸ್ ಕುಮಾರ್ ದಾಸ್, ಪ್ರಕಾಶ್ ಸಾಲಿಯಾನ್, ಶುಭೋದಯ ಆಳ್ವಾ, ಲಾರೆನ್ಸ್ ಡಿಸೋಜ, ಅನಿಲ್ ಪೂಜಾರಿ, ನೀರಜ್ ಪಾಲ್, ಮಹಮ್ಮದ್ ಅಲಿ ಪುತ್ತೂರು ಉಪಸ್ಥಿತರಿದ್ದರು
Mangalore Wearing Saffron Doesn’t Make One a Hindu Leader, Manjunath Bhandary Slams Rise of Criminal Elements in Coastal Communal Politics.
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am