ಬ್ರೇಕಿಂಗ್ ನ್ಯೂಸ್
05-06-25 01:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಗೋವುಗಳ ಹತ್ಯೆಗೆ ನಿಷೇಧವಿದೆ. ಇದರ ಪ್ರಕಾರ, ಹತ್ಯೆ ಉದ್ದೇಶದಿಂದ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಗೋವು ಹತ್ಯೆಗೈದ ಸ್ಥಳವನ್ನು ಸರಕಾರ ಮುಟ್ಟುಗೋಲು ಹಾಕುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ. ಬಕ್ರೀದ್ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯ ವರೆಗೆ ಜಾನುವಾರು ಸಾಗಾಟ ನಿಷೇಧವಿದ್ದು ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಕಾನೂನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಜಾಗದ ಬಗ್ಗೆ ನಿಗಾ ಇಡುವುದರ ಜೊತೆಗೆ ಪ್ರಾರ್ಥನಾ ಮಂದಿರಗಳಲ್ಲಿ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಬೇಕು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಅದನ್ನು ನಮ್ಮ ಸಂಘಟನೆಗಳು ಮಾಡುತ್ತವೆ. ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆಗಳನ್ನು ಪೊಲೀಸರೇ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನು ಪ್ರಕಾರ ತಮ್ಮೊಂದಿಗೆ ಪೂರ್ಣ ಮಟ್ಟದ ಸಹಕಾರ ನೀಡಲು ನಮ್ಮ ಸಂಘಟನೆ ಬದ್ಧವಿದೆ ಎಂದವರು ಹೇಳಿದರು.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರ ವಸಿಕೊಂಡ ದಿನದಂದೇ ಕೇರಳದಿಂದ ಮಂಗಳೂರಿಗೆ (ತಲಪಾಡಿಯ ಬಳಿ) ಅಕ್ರಮವಾಗಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 24 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯ ಶ್ಲಾಘನೀಯ. ಅದೇ ರೀತಿ ಮಂಗಳೂರು ವ್ಯಾಪ್ತಿಯಲ್ಲಿ ಎಲ್ಲಿಯೂ ಅಕ್ರಮ ಗೋಸಾಗಾಟ / ಗೋ ವಧೆಯಾಗದ ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ವಿಸ್ವಾಸವಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಎಚ್ ಕೆ ಪುರುಷೋತ್ತಮ್, ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್, ನವೀನ್ ಮೂಡುಶೆಡ್ಡೆ ಇದ್ದರು.
Mangalore VHP Urges Police to Prevent Illegal Cow Slaughter During Bakrid, Says Public Should Not Be Forced to Intervene
01-04-26 10:51 pm
HK News Staffer
ಅಡಿಕೆಗೆ ನಿಗದಿಪಡಿಸಿದ ತೇವಾಂಶ ಮಿತಿ ಸಡಿಲಿಕೆಗೆ ಕ್ಯ...
01-04-26 08:56 pm
ದುಬಾರಿ ಏಪ್ರಿಲ್; ನೀರು, ವಿದ್ಯುತ್, ಟೋಲ್, ನಗದು ಎಲ...
01-04-26 12:28 pm
ಕೇರಳದಲ್ಲಿ ಮಹಿಳೆಗೆ ಸಿಎಂ ಸ್ಥಾನ, ಉಚಿತ ಸಾರಿಗೆ ಪ್ರ...
31-03-26 10:13 am
ತಮಿಳುನಾಡಿನಲ್ಲಿ ಬಿಜೆಪಿ ಸೀಟು ಹಂಚಿಕೆಯಲ್ಲಿ ಲೋಪ ;...
29-03-26 10:19 am
01-04-26 11:03 pm
HK News Staffer
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
ಯುದ್ಧ ವಿರಾಮ ಉಲ್ಲಂಘಿಸಿ ಇರಾನ್ ಅಣು ಸ್ಥಾವರಕ್ಕೆ ಬಾ...
31-03-26 11:00 pm
ಜೈಶ್-ಎ-ಮೊಹಮ್ಮದ್ ಮುಖ್ಯಸ್ಥ ಮಸೂದ್ ಅಜರ್ ಸೋದರ ತಾಹಿ...
31-03-26 03:30 pm
ಸಂಧಾನ ಮಾತುಕತೆ ಒಪ್ಪದಿದ್ದರೆ ಇರಾನ್ ಸರ್ವನಾಶ ; ಭೂದ...
31-03-26 10:43 am
01-04-26 09:04 pm
HK News Staffer
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
ಅವಳೇ ಮಗನನ್ನು ವಿಷ ಕೊಟ್ಟು ಕೊಂದಿದ್ದಾಳೆ, ವಿಷಯ ಮುಚ...
31-03-26 06:27 pm
ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ಸಿನಿಂದ ಹೊರಬಿದ್...
31-03-26 03:01 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm