ಬ್ರೇಕಿಂಗ್ ನ್ಯೂಸ್
05-06-25 01:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಗೋವುಗಳ ಹತ್ಯೆಗೆ ನಿಷೇಧವಿದೆ. ಇದರ ಪ್ರಕಾರ, ಹತ್ಯೆ ಉದ್ದೇಶದಿಂದ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಗೋವು ಹತ್ಯೆಗೈದ ಸ್ಥಳವನ್ನು ಸರಕಾರ ಮುಟ್ಟುಗೋಲು ಹಾಕುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ. ಬಕ್ರೀದ್ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯ ವರೆಗೆ ಜಾನುವಾರು ಸಾಗಾಟ ನಿಷೇಧವಿದ್ದು ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಕಾನೂನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಜಾಗದ ಬಗ್ಗೆ ನಿಗಾ ಇಡುವುದರ ಜೊತೆಗೆ ಪ್ರಾರ್ಥನಾ ಮಂದಿರಗಳಲ್ಲಿ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಬೇಕು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಅದನ್ನು ನಮ್ಮ ಸಂಘಟನೆಗಳು ಮಾಡುತ್ತವೆ. ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆಗಳನ್ನು ಪೊಲೀಸರೇ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನು ಪ್ರಕಾರ ತಮ್ಮೊಂದಿಗೆ ಪೂರ್ಣ ಮಟ್ಟದ ಸಹಕಾರ ನೀಡಲು ನಮ್ಮ ಸಂಘಟನೆ ಬದ್ಧವಿದೆ ಎಂದವರು ಹೇಳಿದರು.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರ ವಸಿಕೊಂಡ ದಿನದಂದೇ ಕೇರಳದಿಂದ ಮಂಗಳೂರಿಗೆ (ತಲಪಾಡಿಯ ಬಳಿ) ಅಕ್ರಮವಾಗಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 24 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯ ಶ್ಲಾಘನೀಯ. ಅದೇ ರೀತಿ ಮಂಗಳೂರು ವ್ಯಾಪ್ತಿಯಲ್ಲಿ ಎಲ್ಲಿಯೂ ಅಕ್ರಮ ಗೋಸಾಗಾಟ / ಗೋ ವಧೆಯಾಗದ ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ವಿಸ್ವಾಸವಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಎಚ್ ಕೆ ಪುರುಷೋತ್ತಮ್, ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್, ನವೀನ್ ಮೂಡುಶೆಡ್ಡೆ ಇದ್ದರು.
Mangalore VHP Urges Police to Prevent Illegal Cow Slaughter During Bakrid, Says Public Should Not Be Forced to Intervene
14-05-26 10:19 am
HK News Staffer
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am