ಬ್ರೇಕಿಂಗ್ ನ್ಯೂಸ್
05-06-25 01:48 pm Mangaluru Correspondent ಕರಾವಳಿ
ಮಂಗಳೂರು, ಜೂನ್ 5: ರಾಜ್ಯದಲ್ಲಿ ಜಾನುವಾರು ಹತ್ಯೆ ಪ್ರತಿಬಂಧಕ ಹಾಗೂ ಸಂರಕ್ಷಣ ಕಾಯಿದೆ ಜಾರಿಯಲ್ಲಿದ್ದು ಅದರ ಪ್ರಕಾರ ಗೋವುಗಳ ಹತ್ಯೆಗೆ ನಿಷೇಧವಿದೆ. ಇದರ ಪ್ರಕಾರ, ಹತ್ಯೆ ಉದ್ದೇಶದಿಂದ ಜಾನುವಾರು ಸಾಗಾಟವೂ ಶಿಕ್ಷಾರ್ಹ ಅಪರಾಧ. ಅಕ್ರಮವಾಗಿ ಗೋವು ಹತ್ಯೆಗೈದ ಸ್ಥಳವನ್ನು ಸರಕಾರ ಮುಟ್ಟುಗೋಲು ಹಾಕುವುದಕ್ಕೂ ಕಾನೂನಿನಲ್ಲಿ ಅವಕಾಶವಿದೆ. ಬಕ್ರೀದ್ ಸಂದರ್ಭದಲ್ಲಿ ಮಂಗಳೂರು ಪೊಲೀಸರು ಕಾನೂನು ಪ್ರಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿ ನಡೆಸಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಗೋವುಗಳ ರಕ್ಷಣೆಗೆ ಸರ್ಕಾರ ಕ್ರಮ ಕೈಗೊಳ್ಳಬೇಕಾಗಿದೆ. ಯಾವುದೇ ಅಕ್ರಮ ಜಾನುವಾರು ಸಾಗಾಟವಾಗದಂತೆ ನಾಕಾಬಂದಿ ಹಾಕಬೇಕು. ಕಿವಿಯೋಲೆ ಇಲ್ಲದ ಜಾನುವಾರುಗಳನ್ನು ಸಾರ್ವಜನಿಕ ಜಾಗದಲ್ಲಿ ಶೇಖರಿಸಿ ಇಡದಂತೆ, ಮೇಯಲು ಬಿಡದಂತೆ, ಸೂರ್ಯಾಸ್ತದಿಂದ ಸೂರ್ಯೋದಯ ವರೆಗೆ ಜಾನುವಾರು ಸಾಗಾಟ ನಿಷೇಧವಿದ್ದು ಈ ಬಗ್ಗೆ ಪೊಲೀಸರು ಸಾರ್ವಜನಿಕರಿಗೆ ಎಚ್ಚರಿಕೆ ನೀಡಬೇಕಾಗಿದೆ. ಕಾನೂನು ಉಲ್ಲಂಘಿಸಿ ಕಿವಿಯೋಲೆ ಇಲ್ಲದೆ ಶೇಖರಿಸಿಟ್ಟ, ಮೇಯಲು ಬಿಟ್ಟ ಜಾನುವಾರುಗಳನ್ನು ವಶಪಡಿಸಿ, ಜಾನುವಾರು ನಿಷೇಧ ಕಾಯಿದೆ 2020 ರಂತೆ ಪ್ರಕರಣ ದಾಖಲಿಸಬೇಕು. ಎಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಕಸಾಯಿಖಾನೆ ಜಾಗದ ಬಗ್ಗೆ ನಿಗಾ ಇಡುವುದರ ಜೊತೆಗೆ ಪ್ರಾರ್ಥನಾ ಮಂದಿರಗಳಲ್ಲಿ ಜಾನುವಾರು ಶೇಖರಿಸಿ ಇಡದಂತೆ ನಿಗಾ ಇಡಬೇಕು.

ಕಾಯಿದೆಯಂತೆ ಜಾನುವಾರು ಹತ್ಯೆ ತಡೆಯುವ ಅಧಿಕಾರ ಸಾರ್ವಜನಿಕರಿಗೂ ಇದ್ದು ಅದನ್ನು ನಮ್ಮ ಸಂಘಟನೆಗಳು ಮಾಡುತ್ತವೆ. ಅಕ್ರಮ ಜಾನುವಾರು ಸಾಗಾಟ, ಶೇಖರಣೆ, ಹತ್ಯೆಗಳನ್ನು ಪೊಲೀಸರೇ ತಡೆಯುವ ಮೂಲಕ ಸಾರ್ವಜನಿಕರು ಅಧಿಕಾರ ಉಪಯೋಗಿಸಲು ಅವಕಾಶ ಸಿಗದಂತೆ ಎಚ್ಚರ ವಹಿಸಬೇಕು. ಈ ಎಲ್ಲಾ ಕಾರ್ಯಗಳಲ್ಲಿ ಕಾನೂನು ಪ್ರಕಾರ ತಮ್ಮೊಂದಿಗೆ ಪೂರ್ಣ ಮಟ್ಟದ ಸಹಕಾರ ನೀಡಲು ನಮ್ಮ ಸಂಘಟನೆ ಬದ್ಧವಿದೆ ಎಂದವರು ಹೇಳಿದರು.
ಮಂಗಳೂರಿನಲ್ಲಿ ನೂತನ ಪೊಲೀಸ್ ಕಮಿಷನರ್ ಅಧಿಕಾರ ವಸಿಕೊಂಡ ದಿನದಂದೇ ಕೇರಳದಿಂದ ಮಂಗಳೂರಿಗೆ (ತಲಪಾಡಿಯ ಬಳಿ) ಅಕ್ರಮವಾಗಿ ಕಂಟೇನರ್ ನಲ್ಲಿ ಸಾಗಿಸುತ್ತಿದ್ದ 24 ಜಾನುವಾರುಗಳನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಪೊಲೀಸ್ ಕಮಿಷನರ್ ಅವರ ಈ ಕಾರ್ಯ ಶ್ಲಾಘನೀಯ. ಅದೇ ರೀತಿ ಮಂಗಳೂರು ವ್ಯಾಪ್ತಿಯಲ್ಲಿ ಎಲ್ಲಿಯೂ ಅಕ್ರಮ ಗೋಸಾಗಾಟ / ಗೋ ವಧೆಯಾಗದ ರೀತಿಯಲ್ಲಿ ಪೊಲೀಸರು ಕ್ರಮ ಕೈಗೊಳ್ಳುವ ಬಗ್ಗೆ ಸಂಪೂರ್ಣ ವಿಸ್ವಾಸವಿದೆ ಎಂದು ತಿಳಿಸಿದರು. ಸುದ್ದಿಗೋಷ್ಟಿಯಲ್ಲಿ ಎಚ್ ಕೆ ಪುರುಷೋತ್ತಮ್, ಪ್ರದೀಪ್ ಸರಿಪಲ್ಲ, ಹರೀಶ್ ಶೇಟ್, ನವೀನ್ ಮೂಡುಶೆಡ್ಡೆ ಇದ್ದರು.
Mangalore VHP Urges Police to Prevent Illegal Cow Slaughter During Bakrid, Says Public Should Not Be Forced to Intervene
01-07-26 09:49 pm
HK News Desk
ದನ ಕೊಂದವರು ಜೈಲಿಗೆ, ಮನುಷ್ಯರನ್ನು ಕೊಂದವರು ಪ್ರಧಾನ...
29-06-26 10:33 pm
ಬಿಜೆಪಿಯಲ್ಲಿ ಆಡಿಯೋ ಬಿರುಗಾಳಿ ; ವಿಜಯೇಂದ್ರರನ್ನು ಈ...
29-06-26 10:22 pm
ಅಮಲು ಪದಾರ್ಥ ಬೆರೆಸಿದರೆ ರಾಜ್ಯದಲ್ಲಿ ಎಲ್ಲಾ ಪಾನ್ ಮ...
28-06-26 06:30 pm
ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಗಲಾಟೆ ; ಪ್ರದೀಪ್...
27-06-26 08:31 pm
30-06-26 08:06 pm
HK News Staffer
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
“ಟಿವಿ ನೋಡಬೇಡ, ಓದಬೇಕು!” ಎಂದು ಬೈಯುವ ಪೋಷಕರಿಗೆ ಶಾ...
30-06-26 04:34 pm
ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್...
29-06-26 03:35 pm
3-6 ತಿಂಗಳಲ್ಲಿ ವಿಜಯ್ ಸರ್ಕಾರ ಪತನ ; ಇದು ಅಲುಗಾಡುವ...
29-06-26 12:41 pm
01-07-26 10:37 pm
HK News Desk
ಭಾರಿ ಮಳೆ ; ಜುಲೈ 2 ದಕ್ಷಿಣ ಕನ್ನಡ ಶಾಲೆ - ಕಾಲೇಜಿಗ...
01-07-26 09:58 pm
ನಾಗುರಿ ದುರಂತ ನಮಗೆಲ್ಲ ಎಚ್ಚರಿಕೆ ಕರೆಗಂಟೆ, ವಿಕೋಪಗ...
01-07-26 09:18 pm
Mangalore Garodi Landslide: ನಾಗುರಿ ದುರಂತ ; ಗು...
01-07-26 08:41 pm
ಕಡೆಗೂ ಮಳೆ ಬಿರುಸು ; ತೊಕ್ಕೊಟ್ಟಿನಲ್ಲಿ ಮನೆ ಮೇಲೆರ...
01-07-26 11:46 am
01-07-26 09:34 pm
HK News Desk
ಹೋಂ ಸ್ಟೇನಲ್ಲಿ ಯುವತಿ ನಿಗೂಢ ಸಾವು ; ನನ್ನ ಪ್ರಿಯತಮ...
01-07-26 06:52 pm
ಭಗ್ನ ಪ್ರೇಮಿಯಿಂದ ಕಾರು ಸ್ಫೋಟ ಕೇಸ್ ; ಕಚ್ಚಾ ಬಾಂಬ್...
01-07-26 04:51 pm
ಕಂಕನಾಡಿ ಗರೋಡಿಯಲ್ಲಿ ನಾಲ್ಕು ಬಾಡಿಗೆ ಮನೆಗಳಿದ್ದ ಕಟ...
01-07-26 08:59 am
Panambur Gold Robbery, Update: ಪಣಂಬೂರಿನಲ್ಲಿ ಚ...
30-06-26 11:02 pm